Rajavardhans new film
‘ಬಿಚ್ಚುಗತ್ತಿ’ ನಂತರ ರಾಜವರ್ಧನ್ ಅಭಿನಯದ ಯಾವೊಂದು ಚಿತ್ರ ಸಹ ದೊಡ್ಡ ಸದ್ದು ಮಾಡಲಿಲ್ಲ. ಕಳೆದ ವರ್ಷ ಬಿಡುಗಡೆಯಾದ ‘ಹಿರಣ್ಯ’ ಮತ್ತು ‘ಪ್ರಣಯಂ’, ಈ ವರ್ಷ ಬಿಡುಗಡೆಯಾದ ‘ಗಜರಾಮ’ ಚಿತ್ರಗಳು ಗಮನಸೆಳೆಯುವಲ್ಲಿ ವಿಫಲವಾದವು. ಈ ಮಧ್ಯೆ, ರಾಜವರ್ಧನ್, ತೆಲುಗಿಗೆ ಹೋಗುತ್ತಾರೆ ಎಂಬುದೂ ಸುದ್ದಿಯಾಯಿತು.
ಹೀಗಿರುವಾಗಲೇ, ರಾಜವರ್ಧನ್ ಹೊಸ ಚಿತ್ರವೊಂದನ್ನು ಒಪ್ಪಿಕೊಂಡಿರುವ ಸುದ್ದಿಯೊಂದು ಬಂದಿದೆ. ವಿಶೇಷವೆಂದರೆ, ಈ ಚಿತ್ರವನ್ನು ‘ಬಿಗ್ ಬಾಸ್’ ಸ್ಪರ್ಧಿ ಮತ್ತು ಸದ್ಯ ಸುದೀಪ್ ಅವರ ಮ್ಯಾನೇಜರ್ ಆಗಿ ಗುರುತಿಸಿಕೊಂಡಿರುವ ಚಕ್ರವರ್ತಿ ಚಂದ್ರಚೂಡ್ ನಿರ್ದೇಶನ ಮಾಡುತ್ತಿದ್ದಾರೆ.
ಪಕ್ಕಾ ಕನ್ನಡದ ಸೂಗಡಿನ ಮಾಸ್ ಮನರಂಜನೆಯ ಕಥೆಯನ್ನು ರಾಜವರ್ಧನ್ಗಾಗಿ ಚಕ್ರವರ್ತಿ ಚಂದ್ರಚೂಡ್ ಬರೆದಿದ್ದು, ಅದನ್ನು ತಾವೇ ನಿರ್ದೇಶನ ಮಾಡುತ್ತಿದ್ದಾರೆ. ಹಲವು ತಿಂಗಳುಗಳಿಂದ ಈ ಚಿತ್ರದ ಕುರಿತು ಚರ್ಚೆಗಳು ನಡೆಯುತ್ತಿದ್ದು, ಮೇ ತಿಂಗಳಲ್ಲಿ ಚಿತ್ರದ ಸಂಪೂರ್ಣ ವಿವರಗಳನ್ನು ಚಿತ್ರತಂಡದವರು ನೀಡುವ ಸಾಧ್ಯತೆ ಇದೆ. ಸದ್ಯಕ್ಕೆ ಈ ಚಿತ್ರವನ್ನು ಯಾರು ನಿರ್ಮಿಸುತ್ತಾರೆ ಮತ್ತು ಚಿತ್ರದಲ್ಲಿ ಯಾರೆಲ್ಲಾ ನಟಿಸುತ್ತಾರೆ ಎಂಬ ವಿಷಯವನ್ನು ಗೌಪ್ಯವಾಗಿ ಇಡಲಾಗಿದೆ.
ಈ ಮಧ್ಯೆ, ರಾಜವರ್ಧನ್, ನಟಿ ರಾಗಿಣಿ ಮತ್ತು ‘ಚಿತ್ರಸಂತೆ’ ನಿಯತಕಾಲಿಕೆಯ ಗಿರೀಶ್ ಗೌಡ ಅವರ ಜೊತೆಗೆ ಸೇರಿ ಇವೆಂಟ್ ಮ್ಯಾನೇಜ್ಮೆಂಟ್ ಸಂಸ್ಥೆಯನ್ನು ಪ್ರಾರಂಭಿಸುತ್ತಿರುವ ಸುದ್ದಿ ಇದ್ದು, ಮೇ 01ರಂದು ಈ ಬಗ್ಗೆ ಅಧಿಕೃತ ಘೋಷಣೆ ಹೊರಬೀಳುವ ಸಾಧ್ಯತೆ ಇದೆ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…