Chandan Kumar Flirt Kannada Movie Nee Nanna Jeeva Kichcha Sudeepa
‘ಪ್ರೇಮ ಬರಹ’ ಚಿತ್ರ ಬಿಡುಗಡೆಯಾಗಿ ಆರು ವರ್ಷಗಳೇ ಆಗಿವೆ. ಈ ಚಿತ್ರದಲ್ಲಿ ಹೀರೋ ಆಗಿ ಅಭಿನಯಿಸಿದ್ದ ಚಂದನ್, ಅದ್ಯಾಕೋ ಆ ನಂತರ ಯಾವೊಂದು ಚಿತ್ರದಲ್ಲೂ ಹೀರೋ ಆಗಿ ನಟಿಸಿರಲಿಲ್ಲ. ಇದೀಗ ಚಂದನ್ ಸದ್ದಿಲ್ಲದೆ ಹೊಸ ಚಿತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕೆ ಅವರು ಬರೀ ನಾಯಕರಷ್ಟೇ ಅಲ್ಲ, ನಿರ್ಮಾಪಕ-ನಿರ್ದೇಶಕರೂ ಹೌದು.
ಸಾಮಾನ್ಯವಾಗಿ ಹುಡುಗಿಯರನ್ನು ಚುಡಾಯಿಸಿಕೊಂಡು ಓಡಾಡುವ ಹುಡುಗರನ್ನು ‘ಫ್ಲರ್ಟ್’ ಎನ್ನುತ್ತಾರೆ. ಇದೀಗ ಇದೇ ಹೆಸರಿನಲ್ಲಿ ಚಂದನ್ ಸಿನಿಮಾ ಮಾಡಿರುವುದಷ್ಟೇ ಅಲ್ಲ, ತಾವೇ ‘ಫ್ಲರ್ಟ್’ ಆಗಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ ಸುದೀಪ್ ಒಂದು ಹಾಡನ್ನು ಹಾಡಿದ್ದು, ಸೋಮವಾರ ಸಂಜೆ ಈ ಹಾಡು ಬಿಡುಗಡೆಯಾಗಿದೆ.
ಸಾಮಾನ್ಯವಾಗಿ ಪ್ರೇಮಿಗಳ ಮಧ್ಯೆ ಬ್ರೇಕಪ್ ಆದರೆ ಒಂದು ಹಾಡು ಇರುತ್ತದೆ. ಇದು ಸ್ನೇಹಿತರ ನಡುವೆ ಬ್ರೇಕಪ್ ಆದಾಗ ಬರುವ ಹಾಡು. ಈ ಹಾಡಿಗೆ ಚಂದನ್ ಸಾಹಿತ್ಯ ಬರೆದಿದ್ದು, ನಕುಲ್ ಅಭಯಂಕರ್ ಸಂಗೀತ ಸಂಯೋಜಿಸಿದ್ದಾರೆ. ಇನ್ನು ಈ Friendship Anthemಗೆ ಸುದೀಪ್ ಧ್ವನಿಯಾಗಿದ್ದಾರೆ.
ಈ ಚಿತ್ರದ ಕುರಿತು ಮಾತನಾಡುವ ಚಂದನ್, ‘ಇದೊಂದು ರೊಮ್ಯಾಂಟಿಕ್ ಕಾಮಿಡಿ ಚಿತ್ರ. ನಿಜ ಹೇಳಬೇಕೆಂದರೆ, ಈ ಚಿತ್ರ ಯಾವ ಜಾನರ್ಗೆ ಸೇರಬೇಕೆಂದು ನನಗೆ ಗೊತ್ತಿಲ್ಲ. ಏಕೆಂದರೆ, ಈ ಚಿತ್ರದಲ್ಲಿ ಹಲವು ಅಂಶಗಳು ಇವೆ. ನಾನು ಸಿಂಗಲ್ ಆಗಿದ್ದಾಗ ಚಿತ್ರದ ಕಥೆ ಬರೆದೆ. ಮದುವೆಯಾದಾಗ ಚಿತ್ರೀಕರಣ ಮಾಡಿದೆ. ಇದೀಗ ಮಗುವೂ ಆಗಿದ್ದು, ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಸದ್ಯದಲ್ಲೇ ಚಿತ್ರ ಬಿಡುಗಡೆಯಾಗಲಿದೆ’ ಎಂದರು.
ಈ ಚಿತ್ರದಲ್ಲಿ ಗಿರೀಶ್ ಶಿವಣ್ಣ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರದ ಕುರಿತು ಮಾತನಾಡಿರುವ ಅವರು, ‘ಅನ್ನನೂ ಹಳಿಸಿತ್ತು, ನಾಯಿನೂ ಹಸಿದಿತ್ತು ಅಂತ ಮಾತಿದೆ, ಅಂಥದ್ದೊಂದು ಪಾತ್ರ ನನಗೆ ಈ ಚಿತ್ರದಲ್ಲಿ ಸಿಕ್ಕಿದೆ. ಗಿರಿ ಚೆನ್ನಾಗಿ ನಟಿಸ್ತಾನೆ ಅಂತ ಹೇಳೋಕೆ ಈ ಸಿನಿಮಾ ತೋರಿಸಿದ್ರೆ ಸಾಕು. ಚಂದನ್ ನಟನಿಗಿಂಥ ಹೆಚ್ಚಾಗಿ ನಿರ್ದೇಶಕರಾಗಿ ಚಂದನ್ ಇಷ್ಟವಾದರು’ ಎಂದು ಹೇಳಿದರು.
ಈ ಚಿತ್ರದಲ್ಲಿ ನಾಯಕಿಯರಾಗಿ ಅಕ್ಷತಾ ಬೋಪಣ್ಣ ಹಾಗೂ ನಿಮಿಕಾ ರತ್ನಾಕರ್ ನಟಿಸಿದ್ದಾರೆ. ಜೊತೆಗೆ ಸಾಧು ಕೋಕಿಲ, ಶ್ರುತಿ, ಮೂಗು ಸುರೇಶ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…