ಮನರಂಜನೆ

ಚಂದನ್‍ ಎಂಬ ‘ಫ್ಲರ್ಟ್’: ಚಿತ್ರದಲ್ಲಿ 99 ಗೆಳತಿಯರು

‘ಪ್ರೇಮ ಬರಹ’ ಚಿತ್ರ ಬಿಡುಗಡೆಯಾಗಿ ಆರು ವರ್ಷಗಳೇ ಆಗಿವೆ. ಈ ಚಿತ್ರದಲ್ಲಿ ಹೀರೋ ಆಗಿ ಅಭಿನಯಿಸಿದ್ದ ಚಂದನ್‍, ಅದ್ಯಾಕೋ ಆ ನಂತರ ಯಾವೊಂದು ಚಿತ್ರದಲ್ಲೂ ಹೀರೋ ಆಗಿ ನಟಿಸಿರಲಿಲ್ಲ. ಇದೀಗ ಚಂದನ್‍ ಸದ್ದಿಲ್ಲದೆ ಹೊಸ ಚಿತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕೆ ಅವರು ಬರೀ ನಾಯಕರಷ್ಟೇ ಅಲ್ಲ, ನಿರ್ಮಾಪಕ-ನಿರ್ದೇಶಕರೂ ಹೌದು.

ಸಾಮಾನ್ಯವಾಗಿ ಹುಡುಗಿಯರನ್ನು ಚುಡಾಯಿಸಿಕೊಂಡು ಓಡಾಡುವ ಹುಡುಗರನ್ನು ‘ಫ್ಲರ್ಟ್’ ಎನ್ನುತ್ತಾರೆ. ಇದೀಗ ಇದೇ ಹೆಸರಿನಲ್ಲಿ ಚಂದನ್‍ ಸಿನಿಮಾ ಮಾಡಿರುವುದಷ್ಟೇ ಅಲ್ಲ, ತಾವೇ ‘ಫ್ಲರ್ಟ್’ ಆಗಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ ಸುದೀಪ್‍ ಒಂದು ಹಾಡನ್ನು ಹಾಡಿದ್ದು, ಸೋಮವಾರ ಸಂಜೆ ಈ ಹಾಡು ಬಿಡುಗಡೆಯಾಗಿದೆ.

ಸಾಮಾನ್ಯವಾಗಿ ಪ್ರೇಮಿಗಳ ಮಧ್ಯೆ ಬ್ರೇಕಪ್‍ ಆದರೆ ಒಂದು ಹಾಡು ಇರುತ್ತದೆ. ಇದು ಸ್ನೇಹಿತರ ನಡುವೆ ಬ್ರೇಕಪ್‍ ಆದಾಗ ಬರುವ ಹಾಡು. ಈ ಹಾಡಿಗೆ ಚಂದನ್‍ ಸಾಹಿತ್ಯ ಬರೆದಿದ್ದು, ನಕುಲ್‍ ಅಭಯಂಕರ್‍ ಸಂಗೀತ ಸಂಯೋಜಿಸಿದ್ದಾರೆ. ಇನ್ನು ಈ Friendship Anthemಗೆ ಸುದೀಪ್‍ ಧ್ವನಿಯಾಗಿದ್ದಾರೆ.

ಈ ಚಿತ್ರದ ಕುರಿತು ಮಾತನಾಡುವ ಚಂದನ್‍, ‘ಇದೊಂದು ರೊಮ್ಯಾಂಟಿಕ್ ಕಾಮಿಡಿ ಚಿತ್ರ. ನಿಜ ಹೇಳಬೇಕೆಂದರೆ, ಈ ಚಿತ್ರ ಯಾವ ಜಾನರ್‍ಗೆ ಸೇರಬೇಕೆಂದು ನನಗೆ ಗೊತ್ತಿಲ್ಲ. ಏಕೆಂದರೆ, ಈ ಚಿತ್ರದಲ್ಲಿ ಹಲವು ಅಂಶಗಳು ಇವೆ. ನಾನು ಸಿಂಗಲ್‍ ಆಗಿದ್ದಾಗ ಚಿತ್ರದ ಕಥೆ ಬರೆದೆ. ಮದುವೆಯಾದಾಗ ಚಿತ್ರೀಕರಣ ಮಾಡಿದೆ. ಇದೀಗ ಮಗುವೂ ಆಗಿದ್ದು, ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಸದ್ಯದಲ್ಲೇ ಚಿತ್ರ ಬಿಡುಗಡೆಯಾಗಲಿದೆ’ ಎಂದರು.

ಈ ಚಿತ್ರದಲ್ಲಿ ಗಿರೀಶ್‍ ಶಿವಣ್ಣ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರದ ಕುರಿತು ಮಾತನಾಡಿರುವ ಅವರು, ‘ಅನ್ನನೂ ಹಳಿಸಿತ್ತು, ನಾಯಿನೂ ಹಸಿದಿತ್ತು ಅಂತ ಮಾತಿದೆ, ಅಂಥದ್ದೊಂದು ಪಾತ್ರ ನನಗೆ ಈ ಚಿತ್ರದಲ್ಲಿ ಸಿಕ್ಕಿದೆ. ಗಿರಿ ಚೆನ್ನಾಗಿ ನಟಿಸ್ತಾನೆ ಅಂತ ಹೇಳೋಕೆ ಈ ಸಿನಿಮಾ ತೋರಿಸಿದ್ರೆ ಸಾಕು. ಚಂದನ್‍ ನಟನಿಗಿಂಥ ಹೆಚ್ಚಾಗಿ ನಿರ್ದೇಶಕರಾಗಿ ಚಂದನ್‍ ಇಷ್ಟವಾದರು’ ಎಂದು ಹೇಳಿದರು.

ಈ ಚಿತ್ರದಲ್ಲಿ ನಾಯಕಿಯರಾಗಿ ಅಕ್ಷತಾ ಬೋಪಣ್ಣ ಹಾಗೂ ನಿಮಿಕಾ ರತ್ನಾಕರ್‍ ನಟಿಸಿದ್ದಾರೆ. ಜೊತೆಗೆ ಸಾಧು ಕೋಕಿಲ, ಶ್ರುತಿ, ಮೂಗು ಸುರೇಶ್‍ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

9 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

9 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

9 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

9 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

9 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

9 hours ago