Chandan Kumar Flirt Kannada Movie Nee Nanna Jeeva Kichcha Sudeepa
‘ಪ್ರೇಮ ಬರಹ’ ಚಿತ್ರ ಬಿಡುಗಡೆಯಾಗಿ ಆರು ವರ್ಷಗಳೇ ಆಗಿವೆ. ಈ ಚಿತ್ರದಲ್ಲಿ ಹೀರೋ ಆಗಿ ಅಭಿನಯಿಸಿದ್ದ ಚಂದನ್, ಅದ್ಯಾಕೋ ಆ ನಂತರ ಯಾವೊಂದು ಚಿತ್ರದಲ್ಲೂ ಹೀರೋ ಆಗಿ ನಟಿಸಿರಲಿಲ್ಲ. ಇದೀಗ ಚಂದನ್ ಸದ್ದಿಲ್ಲದೆ ಹೊಸ ಚಿತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕೆ ಅವರು ಬರೀ ನಾಯಕರಷ್ಟೇ ಅಲ್ಲ, ನಿರ್ಮಾಪಕ-ನಿರ್ದೇಶಕರೂ ಹೌದು.
ಸಾಮಾನ್ಯವಾಗಿ ಹುಡುಗಿಯರನ್ನು ಚುಡಾಯಿಸಿಕೊಂಡು ಓಡಾಡುವ ಹುಡುಗರನ್ನು ‘ಫ್ಲರ್ಟ್’ ಎನ್ನುತ್ತಾರೆ. ಇದೀಗ ಇದೇ ಹೆಸರಿನಲ್ಲಿ ಚಂದನ್ ಸಿನಿಮಾ ಮಾಡಿರುವುದಷ್ಟೇ ಅಲ್ಲ, ತಾವೇ ‘ಫ್ಲರ್ಟ್’ ಆಗಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ ಸುದೀಪ್ ಒಂದು ಹಾಡನ್ನು ಹಾಡಿದ್ದು, ಸೋಮವಾರ ಸಂಜೆ ಈ ಹಾಡು ಬಿಡುಗಡೆಯಾಗಿದೆ.
ಸಾಮಾನ್ಯವಾಗಿ ಪ್ರೇಮಿಗಳ ಮಧ್ಯೆ ಬ್ರೇಕಪ್ ಆದರೆ ಒಂದು ಹಾಡು ಇರುತ್ತದೆ. ಇದು ಸ್ನೇಹಿತರ ನಡುವೆ ಬ್ರೇಕಪ್ ಆದಾಗ ಬರುವ ಹಾಡು. ಈ ಹಾಡಿಗೆ ಚಂದನ್ ಸಾಹಿತ್ಯ ಬರೆದಿದ್ದು, ನಕುಲ್ ಅಭಯಂಕರ್ ಸಂಗೀತ ಸಂಯೋಜಿಸಿದ್ದಾರೆ. ಇನ್ನು ಈ Friendship Anthemಗೆ ಸುದೀಪ್ ಧ್ವನಿಯಾಗಿದ್ದಾರೆ.
ಈ ಚಿತ್ರದ ಕುರಿತು ಮಾತನಾಡುವ ಚಂದನ್, ‘ಇದೊಂದು ರೊಮ್ಯಾಂಟಿಕ್ ಕಾಮಿಡಿ ಚಿತ್ರ. ನಿಜ ಹೇಳಬೇಕೆಂದರೆ, ಈ ಚಿತ್ರ ಯಾವ ಜಾನರ್ಗೆ ಸೇರಬೇಕೆಂದು ನನಗೆ ಗೊತ್ತಿಲ್ಲ. ಏಕೆಂದರೆ, ಈ ಚಿತ್ರದಲ್ಲಿ ಹಲವು ಅಂಶಗಳು ಇವೆ. ನಾನು ಸಿಂಗಲ್ ಆಗಿದ್ದಾಗ ಚಿತ್ರದ ಕಥೆ ಬರೆದೆ. ಮದುವೆಯಾದಾಗ ಚಿತ್ರೀಕರಣ ಮಾಡಿದೆ. ಇದೀಗ ಮಗುವೂ ಆಗಿದ್ದು, ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಸದ್ಯದಲ್ಲೇ ಚಿತ್ರ ಬಿಡುಗಡೆಯಾಗಲಿದೆ’ ಎಂದರು.
ಈ ಚಿತ್ರದಲ್ಲಿ ಗಿರೀಶ್ ಶಿವಣ್ಣ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರದ ಕುರಿತು ಮಾತನಾಡಿರುವ ಅವರು, ‘ಅನ್ನನೂ ಹಳಿಸಿತ್ತು, ನಾಯಿನೂ ಹಸಿದಿತ್ತು ಅಂತ ಮಾತಿದೆ, ಅಂಥದ್ದೊಂದು ಪಾತ್ರ ನನಗೆ ಈ ಚಿತ್ರದಲ್ಲಿ ಸಿಕ್ಕಿದೆ. ಗಿರಿ ಚೆನ್ನಾಗಿ ನಟಿಸ್ತಾನೆ ಅಂತ ಹೇಳೋಕೆ ಈ ಸಿನಿಮಾ ತೋರಿಸಿದ್ರೆ ಸಾಕು. ಚಂದನ್ ನಟನಿಗಿಂಥ ಹೆಚ್ಚಾಗಿ ನಿರ್ದೇಶಕರಾಗಿ ಚಂದನ್ ಇಷ್ಟವಾದರು’ ಎಂದು ಹೇಳಿದರು.
ಈ ಚಿತ್ರದಲ್ಲಿ ನಾಯಕಿಯರಾಗಿ ಅಕ್ಷತಾ ಬೋಪಣ್ಣ ಹಾಗೂ ನಿಮಿಕಾ ರತ್ನಾಕರ್ ನಟಿಸಿದ್ದಾರೆ. ಜೊತೆಗೆ ಸಾಧು ಕೋಕಿಲ, ಶ್ರುತಿ, ಮೂಗು ಸುರೇಶ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
ನಿಮ್ಮ ತಪ್ಪನ್ನು ನಿಮಗೇ ತೋರಿಸಲಿದೆ ಕನ್ನಡಿ! ಮೈಸೂರು: ಖಾಲಿ ಕಾಂಪೌಂಡ್ ಬಳಿ ಮೂತ್ರ ವಿಸರ್ಜನೆಯ ದುರ್ವಾಸನೆ ತಪ್ಪಿಸಲು ಮೈಸೂರು ಮಹಾನಗರ…
ಕೆ.ಆರ್.ನಗರ: ಜನಗಣತಿ ಮಾಡುವ ವೇಳೆ ಸರ್ಕಾರಿ ಶಾಲೆಯ ಶಿಕ್ಷಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಪಟ್ಟಣದ ಕುವೆಂಪು ಬಡಾವಣೆಯಲ್ಲಿ ನಡೆದಿದೆ. ಮೃತಪಟ್ಟ…
ಪಂಚ.. ತಂತ್ರ ! ಚುನಾವಣೆಯಲ್ಲಿ ಗೆದ್ದವರಿಗೆ ಸಿಎಂ ಚಿಂತೆ, ಸೋತವರಿಗೆ ಇವಿಎಂನದೇ ಚಿಂತೆ ! -ಮ.ಗು.ಬಸವಣ್ಣ, ಜೆಎಸ್ಎಸ್ ಬಡಾವಣೆ, ಮೈಸೂರು
ಮೈಸೂರಿನ ಕುವೆಂಪುನಗರದ ‘ಎಂ’ ಬ್ಲಾಕ್ನ ನೃಪತುಂಗ ರಸ್ತೆಯಲ್ಲಿರುವ ಗಣಪತಿ ದೇವಸ್ಥಾನದ ಪಕ್ಕದಲ್ಲಿ ಶ್ರೀ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ಹೊಸ…
ತಮಿಳುನಾಡು ಚುನಾವಣೆಯಲ್ಲಿ ವಿಜಯ್ ನೇತೃತ್ವದ ಟಿವಿಕೆ ಪಕ್ಷ ೨೩೪ ಕ್ಷೇತ್ರಗಳ ಪೈಕಿ ೧೦೮ ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಅತಿ ದೊಡ್ಡ…
ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ಪಶ್ಚಿಮ ಬಂಗಾಳ ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಒಟ್ಟು ೨೯೪ ಸ್ಥಾನಗಳ ಪೈಕಿ…