Chandan Kumar Flirt Kannada Movie Nee Nanna Jeeva Kichcha Sudeepa
‘ಪ್ರೇಮ ಬರಹ’ ಚಿತ್ರ ಬಿಡುಗಡೆಯಾಗಿ ಆರು ವರ್ಷಗಳೇ ಆಗಿವೆ. ಈ ಚಿತ್ರದಲ್ಲಿ ಹೀರೋ ಆಗಿ ಅಭಿನಯಿಸಿದ್ದ ಚಂದನ್, ಅದ್ಯಾಕೋ ಆ ನಂತರ ಯಾವೊಂದು ಚಿತ್ರದಲ್ಲೂ ಹೀರೋ ಆಗಿ ನಟಿಸಿರಲಿಲ್ಲ. ಇದೀಗ ಚಂದನ್ ಸದ್ದಿಲ್ಲದೆ ಹೊಸ ಚಿತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕೆ ಅವರು ಬರೀ ನಾಯಕರಷ್ಟೇ ಅಲ್ಲ, ನಿರ್ಮಾಪಕ-ನಿರ್ದೇಶಕರೂ ಹೌದು.
ಸಾಮಾನ್ಯವಾಗಿ ಹುಡುಗಿಯರನ್ನು ಚುಡಾಯಿಸಿಕೊಂಡು ಓಡಾಡುವ ಹುಡುಗರನ್ನು ‘ಫ್ಲರ್ಟ್’ ಎನ್ನುತ್ತಾರೆ. ಇದೀಗ ಇದೇ ಹೆಸರಿನಲ್ಲಿ ಚಂದನ್ ಸಿನಿಮಾ ಮಾಡಿರುವುದಷ್ಟೇ ಅಲ್ಲ, ತಾವೇ ‘ಫ್ಲರ್ಟ್’ ಆಗಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ ಸುದೀಪ್ ಒಂದು ಹಾಡನ್ನು ಹಾಡಿದ್ದು, ಸೋಮವಾರ ಸಂಜೆ ಈ ಹಾಡು ಬಿಡುಗಡೆಯಾಗಿದೆ.
ಸಾಮಾನ್ಯವಾಗಿ ಪ್ರೇಮಿಗಳ ಮಧ್ಯೆ ಬ್ರೇಕಪ್ ಆದರೆ ಒಂದು ಹಾಡು ಇರುತ್ತದೆ. ಇದು ಸ್ನೇಹಿತರ ನಡುವೆ ಬ್ರೇಕಪ್ ಆದಾಗ ಬರುವ ಹಾಡು. ಈ ಹಾಡಿಗೆ ಚಂದನ್ ಸಾಹಿತ್ಯ ಬರೆದಿದ್ದು, ನಕುಲ್ ಅಭಯಂಕರ್ ಸಂಗೀತ ಸಂಯೋಜಿಸಿದ್ದಾರೆ. ಇನ್ನು ಈ Friendship Anthemಗೆ ಸುದೀಪ್ ಧ್ವನಿಯಾಗಿದ್ದಾರೆ.
ಈ ಚಿತ್ರದ ಕುರಿತು ಮಾತನಾಡುವ ಚಂದನ್, ‘ಇದೊಂದು ರೊಮ್ಯಾಂಟಿಕ್ ಕಾಮಿಡಿ ಚಿತ್ರ. ನಿಜ ಹೇಳಬೇಕೆಂದರೆ, ಈ ಚಿತ್ರ ಯಾವ ಜಾನರ್ಗೆ ಸೇರಬೇಕೆಂದು ನನಗೆ ಗೊತ್ತಿಲ್ಲ. ಏಕೆಂದರೆ, ಈ ಚಿತ್ರದಲ್ಲಿ ಹಲವು ಅಂಶಗಳು ಇವೆ. ನಾನು ಸಿಂಗಲ್ ಆಗಿದ್ದಾಗ ಚಿತ್ರದ ಕಥೆ ಬರೆದೆ. ಮದುವೆಯಾದಾಗ ಚಿತ್ರೀಕರಣ ಮಾಡಿದೆ. ಇದೀಗ ಮಗುವೂ ಆಗಿದ್ದು, ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಸದ್ಯದಲ್ಲೇ ಚಿತ್ರ ಬಿಡುಗಡೆಯಾಗಲಿದೆ’ ಎಂದರು.
ಈ ಚಿತ್ರದಲ್ಲಿ ಗಿರೀಶ್ ಶಿವಣ್ಣ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರದ ಕುರಿತು ಮಾತನಾಡಿರುವ ಅವರು, ‘ಅನ್ನನೂ ಹಳಿಸಿತ್ತು, ನಾಯಿನೂ ಹಸಿದಿತ್ತು ಅಂತ ಮಾತಿದೆ, ಅಂಥದ್ದೊಂದು ಪಾತ್ರ ನನಗೆ ಈ ಚಿತ್ರದಲ್ಲಿ ಸಿಕ್ಕಿದೆ. ಗಿರಿ ಚೆನ್ನಾಗಿ ನಟಿಸ್ತಾನೆ ಅಂತ ಹೇಳೋಕೆ ಈ ಸಿನಿಮಾ ತೋರಿಸಿದ್ರೆ ಸಾಕು. ಚಂದನ್ ನಟನಿಗಿಂಥ ಹೆಚ್ಚಾಗಿ ನಿರ್ದೇಶಕರಾಗಿ ಚಂದನ್ ಇಷ್ಟವಾದರು’ ಎಂದು ಹೇಳಿದರು.
ಈ ಚಿತ್ರದಲ್ಲಿ ನಾಯಕಿಯರಾಗಿ ಅಕ್ಷತಾ ಬೋಪಣ್ಣ ಹಾಗೂ ನಿಮಿಕಾ ರತ್ನಾಕರ್ ನಟಿಸಿದ್ದಾರೆ. ಜೊತೆಗೆ ಸಾಧು ಕೋಕಿಲ, ಶ್ರುತಿ, ಮೂಗು ಸುರೇಶ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…
ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…
ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…
ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…
ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.28ರವರೆಗೂ ಕರ್ನಾಟಕದಲ್ಲಿ ಮಳೆ…
ನವದೆಹಲಿ: ನೀಟ್ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್ ಹಾಗೂ…