ಮನರಂಜನೆ

ವಿಚ್ಛೇದನದ ನಂತರ ಮತ್ತೆ ಜೊತೆಯಾಗಿ ಕಾಣಿಸಿಕೊಂಡ ಚಂದನ್ ಹಾಗೂ ನಿವೇದಿತಾ

ಚಂದನ್‍ ಶೆಟ್ಟಿ ಮತ್ತು ನಿವೇದಿತಾ ಗೌಡ ಕಳೆದ ವರ್ಷವಷ್ಟೇ ವಿಚ್ಛೇದನ ಪಡೆದು ದೂರಾದರು. ಪ್ರೀತಿಸಿ ಮದುವೆಯಾದವರು, ನಾಲ್ಕು ವರ್ಷದ ದಾಂಪತ್ಯ ಮುಗಿಸಿ ಪರಸ್ಪರ ದೂರಾದರು. ಈಗ ಪುನಃ ಇಬ್ಬರೂ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ. ಅವರಿಬ್ಬರೂ ಜೊತೆಯಾಗಿ ಕಾಣಿಸಿಕೊಂಡಿದ್ದು ಹೊಸ ಚಿತ್ರವೊಂದಕ್ಕಾಗಿ.

ಚಂದನ್‍ ಮತ್ತು ನಿವೇದಿತಾ ಒಟ್ಟಿಗೆ ಇದ್ದ ಕಾಲಕ್ಕೆ ಜೊತೆಯಾಗಿ ‘ಮುದ್ದು ರಾಕ್ಷಸಿ’ ಎಂಬ ಚಿತ್ರದಲ್ಲಿ ನಾಯಕ-ನಾಯಕಿಯಾಗಿ ನಟಿಸಿದ್ದರು. ಚಿತ್ರದ ಬಹುತೇಕ ಚಿತ್ರೀಕರಣವೂ ಆಗಿತ್ತು. ಆದರೆ, ಚಿತ್ರ ಬಿಡುಗಡೆ ಆಗುವುದಕ್ಕೆ ಮೊದಲೇ ಇಬ್ಬರೂ ದೂರಾದರು. ಈಗ ಚಿತ್ರದ ಕೊನೆಯ ಹಂತದ ಚಿತ್ರೀಕರಣ ನಡೆದಿದ್ದು, ಈ ಭಾಗದ ಚಿತ್ರೀಕರಣದಲ್ಲಿ ಚಂದನ್‍ ಮತ್ತು ನಿವೇದಿತಾ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ.

ಇತ್ತೀಚೆಗೆ ಅಂಜನಾಪುರದಲ್ಲಿರುವ ವಜ್ರಮುನಿ ಎಸ್ಟೇಟ್‍ನಲ್ಲಿ ಚಿತ್ರದ ಕೊನೆಯ ಹಂತದ ಚಿತ್ರೀಕರಣ ನಡೆಯಿತು. ಚಂದನ್‍ ಮತ್ತು ನಿವೇದಿತಾ ಇಬ್ಬರೂ ವಿದಾಯ ಹೇಳುವ ಸನ್ನಿವೇಶವನ್ನು ಈ ಸಂದರ್ಭದಲ್ಲಿ ಚಿತ್ರೀಕರಿಸಿಕೊಳ್ಳಲಾಯಿತು. ವಿಚ್ಛೇದನ ನಂತರ ಮೊದಲ ಬಾರಿಗೆ ಚಂದನ್, ನಿವೇದಿತಾ ಮುಖಾಮುಖಿಯಾದರು. ಈ ಸಂದರ್ಭದಲ್ಲಿ ಗ್ಲಿಸರಿನ್ ಹಾಕದಿದ್ದರೂ ನಿವೇದಿತಾ ಕಣ್ಣಂಚಲ್ಲಿ ನೀರು ತುಂಬಿಬಂದಿತ್ತು.

ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಿವೇದಿತಾ, ‘ಇದೊಂದು ಭಾವನಾತ್ಮಕ ಕ್ಷಣವಾಗಿತ್ತು. ಆ ದೃಶ್ಯ ಸಹ ಬಹಳ ಎಮೋಷನಲ್‍ ಆಗಿದೆ. ನಮ್ಮಿಬ್ಬರಲ್ಲೂ ಒಂದೊಳ್ಳೆಯ ಬಂಧವಿತ್ತು. ಹಾಗಾಗಿ, ಸಹಜವಾಗಿಯೇ ಅಳು ಬಂತು’ ಎಂದು ಹೇಳಿದರು.

‘ಮುದ್ದು ರಾಕ್ಷಸಿ’ ಸೈಕೋ ಥ್ರಿಲ್ಲರ್ ಕಥಾಹಂದರ ಹೊಂದಿದ್ದು, ಈ ಚಿತ್ರಕ್ಕೆ ಪುನೀತ್ ಶ್ರೀನಿವಾಸ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದ ಹಾಡುಗಳಿಗೆ ಎಂ.ಎಸ್. ತ್ಯಾಗರಾಜ್ ಸಂಗೀತ ಸಂಯೋಜನೆ ಮಾಡಿದ್ದು, ಎ.ಕರುಣಾಕರ್ ಛಾಯಾಗ್ರಾಹಕರಾಗಿ ಕೆಲಸ ಮಾಡಿದ್ದಾರೆ.

ಶ್ರೀ ಚೌಡೇಶ್ವರಿ ಸಿನಿ ಕಂಬೈನ್ಸ್ ಮೂಲಕ ಮೋಹನ್ ಕುಮಾರ್ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ಮಾಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಚಿರತೆಗಳು ಕಾಣಿಸಿಕೊಳ್ಳುವಿಕೆ: ಮೈಸೂರಿನ ಅಭಿವೃದ್ಧಿಯ ಮತ್ತೊಂದು ಮುಖ

ಮೈಸೂರು ನಗರವು ತನ್ನ ಸಾಂಸ್ಕೃತಿಕ ಪರಂಪರೆ, ಹಸಿರು ಪರಿಸರ ಮತ್ತು ಸುಸ್ಥಿರ ಜೀವನಶೈಲಿಗಾಗಿ ಬಹಳ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ…

7 mins ago

ಮಾನವ ಹಕ್ಕುಗಳನ್ನು ಪೋಷಿಸುವ ಸಾಮಾಜಿಕ ನ್ಯಾಯದ ಪರಿಕಲ್ಪನೆ

ಯಾವುದೋ ಒಂದು ಹಕ್ಕು ಹೆಚ್ಚಿನ ಆದ್ಯತೆ ಹೊಂದಲು ಸಾಧ್ಯವೇ? ಕೆಲವು ಹಕ್ಕುಗಳು ಹೆಚ್ಚು ಮುಖ್ಯವಾಗುವವೇ? ಒಂದು ರೀತಿಯ ಹಕ್ಕಿನಿಂದ ಇನ್ನೊಂದು…

32 mins ago

ಅವೈಜ್ಞಾನಿಕ ಚರಂಡಿ ಕಾಮಗಾರಿಯಿಂದ ಕಿರಿಕಿರಿ

ಮನೆ ಮುಂಭಾಗ ತ್ಯಾಜ್ಯ ನೀರು ನಿಂತು ಗಬ್ಬುನಾರುತ್ತಿರುವ ಚರಂಡಿ ; ಸಾಂಕ್ರಾಮಿಕ ರೋಗ ಹರಡುವ ಭೀತಿ, ಚುನಾವಣೆ ಬಹಿಷ್ಕಾರಕ್ಕೆ ಸ್ಥಳೀಯರ…

59 mins ago

ಅಂಗನವಾಡಿಗಳಿಗೆ ೬ ತಿಂಗಳಿಂದ ಬಾರದ ಮೊಟ್ಟೆ ಹಣ!

ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…

3 hours ago

‘ತ್ಯಾಜ್ಯ ಸಂಸ್ಕರಣೆ, ವಿಲೇವಾರಿಗೆ ಕ್ರಮಕೈಗೊಳ್ಳಬೇಕು’

ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…

4 hours ago

ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿಗೆ ಪರದಾಟ

ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್‌ಆರ್‌ಟಿಸಿ ವಿಫಲ…

4 hours ago