ಮನರಂಜನೆ

ವಿಚ್ಛೇದನದ ನಂತರ ಮತ್ತೆ ಜೊತೆಯಾಗಿ ಕಾಣಿಸಿಕೊಂಡ ಚಂದನ್ ಹಾಗೂ ನಿವೇದಿತಾ

ಚಂದನ್‍ ಶೆಟ್ಟಿ ಮತ್ತು ನಿವೇದಿತಾ ಗೌಡ ಕಳೆದ ವರ್ಷವಷ್ಟೇ ವಿಚ್ಛೇದನ ಪಡೆದು ದೂರಾದರು. ಪ್ರೀತಿಸಿ ಮದುವೆಯಾದವರು, ನಾಲ್ಕು ವರ್ಷದ ದಾಂಪತ್ಯ ಮುಗಿಸಿ ಪರಸ್ಪರ ದೂರಾದರು. ಈಗ ಪುನಃ ಇಬ್ಬರೂ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ. ಅವರಿಬ್ಬರೂ ಜೊತೆಯಾಗಿ ಕಾಣಿಸಿಕೊಂಡಿದ್ದು ಹೊಸ ಚಿತ್ರವೊಂದಕ್ಕಾಗಿ.

ಚಂದನ್‍ ಮತ್ತು ನಿವೇದಿತಾ ಒಟ್ಟಿಗೆ ಇದ್ದ ಕಾಲಕ್ಕೆ ಜೊತೆಯಾಗಿ ‘ಮುದ್ದು ರಾಕ್ಷಸಿ’ ಎಂಬ ಚಿತ್ರದಲ್ಲಿ ನಾಯಕ-ನಾಯಕಿಯಾಗಿ ನಟಿಸಿದ್ದರು. ಚಿತ್ರದ ಬಹುತೇಕ ಚಿತ್ರೀಕರಣವೂ ಆಗಿತ್ತು. ಆದರೆ, ಚಿತ್ರ ಬಿಡುಗಡೆ ಆಗುವುದಕ್ಕೆ ಮೊದಲೇ ಇಬ್ಬರೂ ದೂರಾದರು. ಈಗ ಚಿತ್ರದ ಕೊನೆಯ ಹಂತದ ಚಿತ್ರೀಕರಣ ನಡೆದಿದ್ದು, ಈ ಭಾಗದ ಚಿತ್ರೀಕರಣದಲ್ಲಿ ಚಂದನ್‍ ಮತ್ತು ನಿವೇದಿತಾ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ.

ಇತ್ತೀಚೆಗೆ ಅಂಜನಾಪುರದಲ್ಲಿರುವ ವಜ್ರಮುನಿ ಎಸ್ಟೇಟ್‍ನಲ್ಲಿ ಚಿತ್ರದ ಕೊನೆಯ ಹಂತದ ಚಿತ್ರೀಕರಣ ನಡೆಯಿತು. ಚಂದನ್‍ ಮತ್ತು ನಿವೇದಿತಾ ಇಬ್ಬರೂ ವಿದಾಯ ಹೇಳುವ ಸನ್ನಿವೇಶವನ್ನು ಈ ಸಂದರ್ಭದಲ್ಲಿ ಚಿತ್ರೀಕರಿಸಿಕೊಳ್ಳಲಾಯಿತು. ವಿಚ್ಛೇದನ ನಂತರ ಮೊದಲ ಬಾರಿಗೆ ಚಂದನ್, ನಿವೇದಿತಾ ಮುಖಾಮುಖಿಯಾದರು. ಈ ಸಂದರ್ಭದಲ್ಲಿ ಗ್ಲಿಸರಿನ್ ಹಾಕದಿದ್ದರೂ ನಿವೇದಿತಾ ಕಣ್ಣಂಚಲ್ಲಿ ನೀರು ತುಂಬಿಬಂದಿತ್ತು.

ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಿವೇದಿತಾ, ‘ಇದೊಂದು ಭಾವನಾತ್ಮಕ ಕ್ಷಣವಾಗಿತ್ತು. ಆ ದೃಶ್ಯ ಸಹ ಬಹಳ ಎಮೋಷನಲ್‍ ಆಗಿದೆ. ನಮ್ಮಿಬ್ಬರಲ್ಲೂ ಒಂದೊಳ್ಳೆಯ ಬಂಧವಿತ್ತು. ಹಾಗಾಗಿ, ಸಹಜವಾಗಿಯೇ ಅಳು ಬಂತು’ ಎಂದು ಹೇಳಿದರು.

‘ಮುದ್ದು ರಾಕ್ಷಸಿ’ ಸೈಕೋ ಥ್ರಿಲ್ಲರ್ ಕಥಾಹಂದರ ಹೊಂದಿದ್ದು, ಈ ಚಿತ್ರಕ್ಕೆ ಪುನೀತ್ ಶ್ರೀನಿವಾಸ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದ ಹಾಡುಗಳಿಗೆ ಎಂ.ಎಸ್. ತ್ಯಾಗರಾಜ್ ಸಂಗೀತ ಸಂಯೋಜನೆ ಮಾಡಿದ್ದು, ಎ.ಕರುಣಾಕರ್ ಛಾಯಾಗ್ರಾಹಕರಾಗಿ ಕೆಲಸ ಮಾಡಿದ್ದಾರೆ.

ಶ್ರೀ ಚೌಡೇಶ್ವರಿ ಸಿನಿ ಕಂಬೈನ್ಸ್ ಮೂಲಕ ಮೋಹನ್ ಕುಮಾರ್ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ಮಾಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿ ಆರೋಪ ; ಇಬ್ಬರು ಶಿಕ್ಷಕರು ಅಮಾನತ್ತು

ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…

1 hour ago

ಹುಣಸೂರಿನ ಎಂಟು ಕೆರೆಗಳಿಗೆ ನೀರು ಪೂರೈಕೆಗೆ ಸೂಚನೆ

 ಶಾಸಕ ಜಿ.ಡಿ. ಹರೀಶ್‌ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…

2 hours ago

101 ತಾಲ್ಲೂಕುಗಳು ಬರಪೀಡಿತ ; ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಘೋಷಣೆ

89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…

2 hours ago

ಮೈಸೂರು | ಮಹಿಳಾ ಪೊಲೀಸ್‌ ಠಾಣೆಗೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…

3 hours ago

ಆಗಸ್ಟ್‌ 29 ರಂದು ಮೈಸೂರಿಗೆ ಮಾಜಿ ಸಿಎಂ ಆಗಮನ

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್‌ನಲ್ಲಿ…

3 hours ago

ಸಚಿವ ನಾಗೇಂದ್ರ ವಿರುದ್ಧ ಆರೋಪಕ್ಕೆ ಸಾಕ್ಷ್ಯಗಳಿಲ್ಲ : ಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…

3 hours ago