ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಕಳೆದ ವರ್ಷವಷ್ಟೇ ವಿಚ್ಛೇದನ ಪಡೆದು ದೂರಾದರು. ಪ್ರೀತಿಸಿ ಮದುವೆಯಾದವರು, ನಾಲ್ಕು ವರ್ಷದ ದಾಂಪತ್ಯ ಮುಗಿಸಿ ಪರಸ್ಪರ ದೂರಾದರು. ಈಗ ಪುನಃ ಇಬ್ಬರೂ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ. ಅವರಿಬ್ಬರೂ ಜೊತೆಯಾಗಿ ಕಾಣಿಸಿಕೊಂಡಿದ್ದು ಹೊಸ ಚಿತ್ರವೊಂದಕ್ಕಾಗಿ.
ಚಂದನ್ ಮತ್ತು ನಿವೇದಿತಾ ಒಟ್ಟಿಗೆ ಇದ್ದ ಕಾಲಕ್ಕೆ ಜೊತೆಯಾಗಿ ‘ಮುದ್ದು ರಾಕ್ಷಸಿ’ ಎಂಬ ಚಿತ್ರದಲ್ಲಿ ನಾಯಕ-ನಾಯಕಿಯಾಗಿ ನಟಿಸಿದ್ದರು. ಚಿತ್ರದ ಬಹುತೇಕ ಚಿತ್ರೀಕರಣವೂ ಆಗಿತ್ತು. ಆದರೆ, ಚಿತ್ರ ಬಿಡುಗಡೆ ಆಗುವುದಕ್ಕೆ ಮೊದಲೇ ಇಬ್ಬರೂ ದೂರಾದರು. ಈಗ ಚಿತ್ರದ ಕೊನೆಯ ಹಂತದ ಚಿತ್ರೀಕರಣ ನಡೆದಿದ್ದು, ಈ ಭಾಗದ ಚಿತ್ರೀಕರಣದಲ್ಲಿ ಚಂದನ್ ಮತ್ತು ನಿವೇದಿತಾ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ.
ಇತ್ತೀಚೆಗೆ ಅಂಜನಾಪುರದಲ್ಲಿರುವ ವಜ್ರಮುನಿ ಎಸ್ಟೇಟ್ನಲ್ಲಿ ಚಿತ್ರದ ಕೊನೆಯ ಹಂತದ ಚಿತ್ರೀಕರಣ ನಡೆಯಿತು. ಚಂದನ್ ಮತ್ತು ನಿವೇದಿತಾ ಇಬ್ಬರೂ ವಿದಾಯ ಹೇಳುವ ಸನ್ನಿವೇಶವನ್ನು ಈ ಸಂದರ್ಭದಲ್ಲಿ ಚಿತ್ರೀಕರಿಸಿಕೊಳ್ಳಲಾಯಿತು. ವಿಚ್ಛೇದನ ನಂತರ ಮೊದಲ ಬಾರಿಗೆ ಚಂದನ್, ನಿವೇದಿತಾ ಮುಖಾಮುಖಿಯಾದರು. ಈ ಸಂದರ್ಭದಲ್ಲಿ ಗ್ಲಿಸರಿನ್ ಹಾಕದಿದ್ದರೂ ನಿವೇದಿತಾ ಕಣ್ಣಂಚಲ್ಲಿ ನೀರು ತುಂಬಿಬಂದಿತ್ತು.
ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಿವೇದಿತಾ, ‘ಇದೊಂದು ಭಾವನಾತ್ಮಕ ಕ್ಷಣವಾಗಿತ್ತು. ಆ ದೃಶ್ಯ ಸಹ ಬಹಳ ಎಮೋಷನಲ್ ಆಗಿದೆ. ನಮ್ಮಿಬ್ಬರಲ್ಲೂ ಒಂದೊಳ್ಳೆಯ ಬಂಧವಿತ್ತು. ಹಾಗಾಗಿ, ಸಹಜವಾಗಿಯೇ ಅಳು ಬಂತು’ ಎಂದು ಹೇಳಿದರು.
‘ಮುದ್ದು ರಾಕ್ಷಸಿ’ ಸೈಕೋ ಥ್ರಿಲ್ಲರ್ ಕಥಾಹಂದರ ಹೊಂದಿದ್ದು, ಈ ಚಿತ್ರಕ್ಕೆ ಪುನೀತ್ ಶ್ರೀನಿವಾಸ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದ ಹಾಡುಗಳಿಗೆ ಎಂ.ಎಸ್. ತ್ಯಾಗರಾಜ್ ಸಂಗೀತ ಸಂಯೋಜನೆ ಮಾಡಿದ್ದು, ಎ.ಕರುಣಾಕರ್ ಛಾಯಾಗ್ರಾಹಕರಾಗಿ ಕೆಲಸ ಮಾಡಿದ್ದಾರೆ.
ಶ್ರೀ ಚೌಡೇಶ್ವರಿ ಸಿನಿ ಕಂಬೈನ್ಸ್ ಮೂಲಕ ಮೋಹನ್ ಕುಮಾರ್ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ಮಾಡಲಾಗಿದೆ.
ಮೈಸೂರು : ಫುಟ್ಪಾತ್ಗಳನ್ನು ಅತಿಕ್ರಮಿಸಿದ್ದ ಅನಧಿಕೃತ ವ್ಯಾಪಾರಿಗಳ ವಿರುದ್ಧ ಮೈಸೂರು ಮಹಾನಗರ ಪಾಲಿಕೆ ಶುಕ್ರವಾರ ಖಡಕ್ಕಾಗಿ ಕಾರ್ಯಾಚರಣೆ ನಡೆಸಿತು. ವಲಯ-5…
ರಸ್ತೆಗಳ ಬಾಳಿಕೆ ಹೆಚ್ಚಳ ; ಬಫರ್ ಜೋನ್ ಇಲ್ಲದಿದ್ದರೆ ಸಂಕಷ್ಟ ವಿಶ್ವನಾಥ್ ಶಂಕರಪ್ಪ ರಸ್ತೆ ವೈಟ್ ಟಾಪಿಂಗ್ ಮಾಡುವುದು ಎಂದರೆ,…
ಮೂರು ವಾರಗಳ ಹಿಂದೆ ಈ ಅಂಕಣದಲ್ಲಿ ಪೈರಸಿ ಎನ್ನುವ ಪೆಡಂಭೂತದ ಬಗ್ಗೆ ಹೇಳಲಾಗಿತ್ತು. ನೀಟ್ ಪರೀಕ್ಷೆಯ ಅವಧಿಯ ಕೆಲವು ದಿನ…
ಪ್ರತ್ಯಕ್ಷ ವರದಿ ಕೆ.ಪಿ.ನಾಗರಾಜ್ ಪಬ್ಲಿಕ್ ಟಿವಿ ಕೇರಳ ರಾಜ್ಯದ ವಯನಾಡಿನಲ್ಲಿ ಮತ್ತೆ ಬೆಟ್ಟ ಕುಸಿದಿದೆ. ಸುದ್ದಿ ವಾಹಿನಿಗಳು ಇದನ್ನು ‘ಭೂ…
ಮೈಸೂರಿನ ನೃತ್ಯ ಪರಂಪರೆಯ ವೈಭವಕ್ಕೆ ಪ್ರೇರಕ ಶಕ್ತಿ ಹಲವು ಕೆ.ರಾಮಮೂರ್ತಿ ರಾವ್ ಮೈಸೂರು ಪ್ರಾಚೀನ ಕಾಲದಿಂದಲೂ ಲಲಿತಕಲೆಗಳಿಗೆ ನೆಲೆಯಾಗಿದ್ದ ಸ್ಥಳ.…