ಮನರಂಜನೆ

ಅಪ್ಪನ ಆಸೆ ಈಡೇರಿಸಿದ ಚಂದನ್‍ ಶೆಟ್ಟಿ: ಮೇ.09ರಂದು ‘ಸೂತ್ರಧಾರಿ’

ಚಂದನ್‍ ಶೆಟ್ಟಿ ಅವರ ತಂದೆಗೆ ತಮ್ಮ ಮಗ ಸಿನಿಮಾದಲ್ಲಿ ಹೀರೋ ಆಗಬೇಕು ಎಂಬ ಆಸೆ ಇತ್ತಂತೆ. ಚಂದನ್‍ ಹೀರೋ ಆಗಿ ಎರಡ್ಮೂರು ವರ್ಷಗಳಾದರೂ, ಅವರು ಪೂರ್ಣ ಪ್ರಮಾಣದಲ್ಲಿ ನಾಯಕನಾಗಿ ಅಭಿನಯಿಸಿರುವ ಯಾವೊಂದು ಚಿತ್ರ ಬಿಡುಗಡೆಯಾಗಿರಲಿಲ್ಲ. ಈಗ ‘ಸೂತ್ರಧಾರಿ’ ಇದೇ ಮೇ.09ರಂದು ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ. ಈ ಮೂಲಕ ತಂದೆಯ ಆಸೆಯನ್ನು ಪೂರೈಸಿದ್ದಾರೆ ಚಂದನ್‍.

‘ಸೂತ್ರಧಾರಿ’ ಚಿತ್ರದ ಶೀರ್ಷಿಕೆ ಗೀತೆ ಇತ್ತೀಚೆಗೆ ಬಿಡುಗಡೆ ಆಗಿದೆ. ವಿಜಯ್ ಈಶ್ವರ್ ಅವರು ಬರೆದಿರುವ ‘ಸೂತ್ರಧಾರಿ’ ಚಿತ್ರದ ಶೀರ್ಷಿಕೆ ಗೀತೆಯನ್ನು ಚಂದನ್ ಶೆಟ್ಟಿ ಹಾಡುವುದರ ಜೊತೆಗೆ ಸಂಗೀತವನ್ನೂ ಸಂಯೋಜಿಸಿದ್ದಾರೆ. A2 ಮ್ಯೂಸಿಕ್ ಮೂಲಕ ಈ ಹಾಡು ಬಿಡುಗಡೆಯಾಗಿದೆ.

ಈ ಚಿತ್ರದ ಕುರಿತು ಮಾತನಾಡಿರುವ ಚಂದನ್‍, ‘ನಾನು ಸಿನಿಮಾದಲ್ಲಿ ನಾಯಕನಾಗಬೇಕೆಂಬ ಆಸೆ ನಮ್ಮ ಅಪ್ಪನದು. ಮೇ.9ನೇ ತಾರೀಖಿನಂದು ಅವರ ಆಸೆ ಈಡೇರುತ್ತಿದೆ. ಗಾಯಕನಾಗಿ ನನ್ನನ್ನು ಜನ ಮೆಚ್ಚಿಕೊಂಡು ಆಶೀರ್ವದ ಮಾಡಿದ್ದಾರೆ. ಈಗ ನಾಯಕನಾಗೂ ಮೆಚ್ಚಿಕೊಳ್ಳುತ್ತಾರೆ ಎಂಬ ನಂಬಿಕೆ ಇದೆ. ಈ ಚಿತ್ರದಲ್ಲಿ ನಾನು ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ’ ಎಂದರು.

‘ಸೂತ್ರಧಾರಿ’ ಚಿತ್ರದ ‘ಡ್ಯಾಶ್’ ಹಾಡು ನಿರೀಕ್ಷೆಗೂ ಮೀರಿ ಜನಪ್ರಿಯವಾಗಿತ್ತು. ‘ಈ ಹಾಡು ಕೂಡ ಎಲ್ಲರಿಗೂ ಪ್ರಿಯವಾಗಲಿದೆ. ಉತ್ತಮ ತಂಡದೊಂದಿಗೆ ಕೆಲಸ ಮಾಡಿದ ಖುಷಿ ಇದೆ’ ಎಂದರು ಚಂದನ್‍ ಶೆಟ್ಟಿ.

ಈಗಲ್ ಮೀಡಿಯಾ ಕ್ರಿಯೇಷನ್ಸ್ ಮೂಲಕ 1800ಕ್ಕೂ ಅಧಿಕ ಚಿತ್ರಗಳ ಇವೆಂಟ್ ಗಳನ್ನು ಆಯೋಜಿಸಿರುವ ನವರಸನ್, ‘ಸೂತ್ರಧಾರಿ’ ಚಿತ್ರವನ್ನು ನಿರ್ಮಿಸಿದ್ದಾರೆ. ಕ್ರೈಮ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ‘ಸೂತ್ರಧಾರಿ’ ಚಿತ್ರಕ್ಕೆ ಕಿರಣ್ ಕುಮಾರ್ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ.

‘ಸೂತ್ರಧಾರಿ’ ಚಿತ್ರದಲ್ಲಿ ಚಂದನ್‍ ಶೆಟ್ಟಿಗೆ ನಾಯಕಿಯಾಗಿ ಅಪೂರ್ವ ನಟಿಸಿದ್ದು, ಸಂಜನಾ ಆನಂದ್‍ ಒಂದು ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ. ತಬಲಾ ನಾಣಿ ಸಹ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕಾಲೇಜು ವಿದ್ಯಾರ್ಥಿನಿಯರಿಗೆ ಬಿಸಿಯೂಟ ಶ್ಲಾಘನೀಯ

ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…

2 hours ago

ಓದುಗರ ಪತ್ರ: ಪೊಲೀಸ್ ಅಧಿಕಾರಿಯ ಅಸಭ್ಯ ವರ್ತನೆ ಅಕ್ಷಮ್ಯ

ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…

2 hours ago

ಓದುಗರ ಪತ್ರ: ಅಮೆರಿಕ ಅಧ್ಯಕ್ಷರ ಹುಚ್ಚುತನ

ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…

2 hours ago

ಕಾಡ್ಗಿಚ್ಚು ತಡೆಗೆ ನಾನಾ ಮುಂಜಾಗ್ರತಾ ಕ್ರಮ

ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…

2 hours ago

ಬಾಚಳ್ಳಿ ಆಂಜನೇಯಸ್ವಾಮಿ ಜಾತ್ರೋತ್ಸವಕ್ಕೆ ಸಕಲ ಸಿದ್ಧತೆ

ಎಂ ಯೋಗಾನಂದ್ ಜ.೨೩ರಿಂದ ೨೬ರವರೆಗೆ ಜಾತ್ರಾ ಮಹೋತ್ಸವ; ಮೆರುಗು ನೀಡಲಿರುವ ಗಾಡಿ ಓಡಿಸುವ ಸ್ಪರ್ಧೆ ಹುಣಸೂರು: ತಾಲ್ಲೂಕಿನ ಬಾಚಳ್ಳಿ ಗ್ರಾಮದಲ್ಲಿ…

2 hours ago