ಮನರಂಜನೆ

ವಿಚ್ಛೇದನ ದೃಢಪಡಿಸಿದ ಚಂದನ್‌-ನಿವೇದಿತಾ ಜೋಡಿ

ಕನ್ನಡದ ಖ್ಯಾತ ಗಾಯಕ ಚಂದನ್‌ ಶೆಟ್ಟಿ ಹಾಗೂ ನಿವೇದಿತಾ ಗೌಡ ಅವರು ಪರಸ್ಪರ ಇಚ್ಛೆಯ ಮೇರೆಗೆ ಇಂದು (ಜೂನ್‌.7) ವಿಚ್ಛೇದನ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ ಈ ಜೋಡಿಗೆ ಕೋರ್ಟ್‌ ಇಂದು ವಿಚ್ಛೇದನ ಮಂಜೂರು ಮಾಡಿದೆ. ಆ ಮೂಲಕ ನಾಲ್ಕು ವರ್ಷಗಳ ದಾಂಪತ್ಯ ಜೀವನ ಮುಗಿಯಿತು.

ಇದರ ಬೆನ್ನಲ್ಲೇ ತಾವು ಯಾವ ಕಾರಣಕ್ಕೆ ವಿಚ್ಛೇದನ ಪಡೆದುಕೊಂಡೆವು ಎಂಬ ಬಗ್ಗೆ ಈ ಇಬ್ಬರು ಮೊಲದ ಬಾರಿಗೆ ಮಾತನಾಡಿದ್ದಾರೆ.

ವಿಚ್ಛೇದನಕ್ಕಾಗಿ ಕಾಯುವ ಜೋಡಿಗಳಿಗೆ ವರ್ಷಾನುಗಟ್ಟಲೇ ಸಮಯ ತೆಗೆದುಕೊಳ್ಳುತ್ತವೆ. ಆದರೆ ಈ ಜೋಡಿಗೆ ಕೇವಲ ಒಂದೇ ದಿನದಲ್ಲಿ ವಿಚ್ಛೇದನ ಸಿಕ್ಕಿದೆ. ಇಬ್ಬರೂ ನಗು-ನಗುತ್ತಲೇ ಕೋರ್ಟ್‌ ಆವರಣಕ್ಕೆ ಬಂದು, ಸರದಿಯಲ್ಲಿ ಪಕ್ಕ-ಪಕ್ಕ ಕೂತು ಕೋರ್ಟ್‌ ನೀಡಿದ ತೀರ್ಪು ಆಲಿಸಿ ಅಲ್ಲಿಂದ ನಿರ್ಗಮಿಸಿದ್ದಾರೆ. ಇವರಿಗೆ ಬೆಂಗಳೂರಿನ 2ನೇ ಹೆಚ್ಚುವರಿ ಕೌಟುಂಬಿಕ ನ್ಯಾಯಾಲಯ ವಿಚ್ಛೇದನ ನೀಡಿ ತೀರ್ಪು ನೀಡಿದೆ. ಸಿಕ್ಷನ್‌ 13B ಅಡಿಯಲ್ಲಿ ಇಬ್ಬರ ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ದೊರಕಿದೆ.

ಇನ್ನು ಈ ವಿಚ್ಛೇದನ ಬಗ್ಗೆ ಮಾತನಾಡಿರುವ ಚಂದನ್‌ ಶೆಟ್ಟಿ ಹಾಗೂ ನಿವೇದಿತಾ ಜೋಡಿ, “ಈ ದಿನ ನಾನು ಮತ್ತು ಚಂದನ್‌/ನಿವೇದಿತಾ, ನಮ್ಮ ದಾಂಪತ್ಯ ಜೀವನವನ್ನು ಕಾನೂನುಬದ್ಧವಾಗಿ ಪರಸ್ಪರ ಒಪ್ಪಿಗೆಯಿಂದ ಕೊನೆಗೊಳಿಸಲಿದ್ದೇವೆ. ನಮ್ಮ ನಿರ್ಧಾರವನ್ನು ಮತ್ತು ನಮ್ಮ ಜೀವನದ ಖಾಸಗಿತನವನ್ನು ಗೌರವಿಸಲು ಕೋರುತ್ತೇವೆ. ಪ್ರತಿ ಸಂದರ್ಭದಲ್ಲೂ ನಮ್ಮೊಂದಿಗೆ ನಿಂತ ಮಾಧ್ಯಮ ಮಿತ್ರರು, ನಮ್ಮ ಸ್ನೇಹಿತರು ಮತ್ತು ಅಭಿಮಾನಿಗಳಿಂದ ನಾವು ಎಂದಿನಂತೆ ಬೆಂಬಲ ಕೋರುತ್ತೇವೆ. ನಾವು ನಮ್ಮ ಪ್ರತ್ಯೇಕ ಮಾರ್ಗ ಅನುಸರಿಸಿದರೂ, ಪರಸ್ಪರ ಒಬ್ಬರನೊಬ್ಬರು ಗೌರವಿಸುತ್ತೇವೆ. ಸೂಕ್ಷ್ಮ ಪರಿಗಣನೆಗಾಗಿ ಎಲ್ಲರಿಗೂ ಧನ್ಯವಾದ” ಎಂದು ಚಂದ್‌ ಶೆಟ್ಟಿ ಮತ್ತು ನಿವೇದಿತಾ ಗೌಡ ಪರಸ್ಪರ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಬರೆದುಕೊಳ್ಳುವ ಮೂಲಕ ತಮ್ಮ ಅಭಿಮಾನಿಗಳಿಗೆ ತಾವು ವಿಚ್ಛೇದನ ಹೊಂದಿದ ವಿಷಯವನ್ನು ಬಹಿರಂಗಪಡಿಸಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ: ನಾಡದೇವಿಗೆ ಮಹಾಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಮಹಾಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಇಡೀ…

59 mins ago

ಓದುಗರ ಪತ್ರ: ದಸರಾದಲ್ಲಿ ಕಂಬಳಕ್ಕೆ ಹಠವೇಕೆ?

ಈ ವರ್ಷ ನಾಡ ಹಬ್ಬ ದಸರಾದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸಲು ಸರ್ಕಾರ ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ. ಈಗಾಗಲೇ ಸಾರ್ವಜನಿಕರು ಹಾಗೂ…

4 hours ago

ಓದುಗರ ಪತ್ರ: ದೇವಿಯ ನೇರ ದರ್ಶನಕ್ಕೆ ಅವಕಾಶ ಕಲ್ಪಿಸಿ

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಪ್ರತಿ ವರ್ಷ ಆಷಾಢ ಮಾಸದ ಶುಕ್ರವಾರಗಳಂದು…

4 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಚಿತ್ರೋದ್ಯಮದತ್ತ ಕೇಂದ್ರದ ಗಮನ, ಅಧ್ಯಯನ ತಂಡ ರಚನೆ

ಭಾರತೀಯ ಚಿತ್ರೋದ್ಯಮದ ಉತ್ತೇಜನಕ್ಕಾಗಿ, ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯ ಮುಂದಾಗಿರುವ ಸುದ್ದಿ. ಚಿತ್ರರಂಗಕ್ಕೆ ಸಂಬಂಧಿಸಿದಂತೆ, ಚಿತ್ರಗಳನ್ನು ವರ್ಗೀಕರಿಸಿ, ಪ್ರಮಾಣಪತ್ರ…

4 hours ago

ಕೊಡಗು ಜಿಲ್ಲೆಯಲ್ಲಿ ನಮೂನೆ ವಿತರಣೆ ಕಾರ್ಯ ಪೂರ್ಣ

ನವೀನ್ ಡಿಸೋಜ ತ್ವರಿತಗತಿಯಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ; ಒಟ್ಟು ೪,೬೮,೬೫೭ ನಮೂನೆ ವಿತರಣೆ ಮೂಲಕ ಶೇ.೧೦೦ ಪ್ರಗತಿ…

4 hours ago

ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆ

ಹನೂರು: ತಾಲ್ಲೂಕಿನ ಬೈಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರೆಕಾಡುವಿನದೊಡ್ಡಿ ಮತ್ತು ಅರ್ಧನಾರೀಪುರ ಗ್ರಾಮಗಳಿಗೆ ಗುರುವಾರ ಗ್ರಾಮ ಪಂಚಾಯಿತಿ ವತಿಯಿಂದ ಟ್ಯಾಂಕರ್…

4 hours ago