ಮನರಂಜನೆ

ವಿಚ್ಛೇದನ ದೃಢಪಡಿಸಿದ ಚಂದನ್‌-ನಿವೇದಿತಾ ಜೋಡಿ

ಕನ್ನಡದ ಖ್ಯಾತ ಗಾಯಕ ಚಂದನ್‌ ಶೆಟ್ಟಿ ಹಾಗೂ ನಿವೇದಿತಾ ಗೌಡ ಅವರು ಪರಸ್ಪರ ಇಚ್ಛೆಯ ಮೇರೆಗೆ ಇಂದು (ಜೂನ್‌.7) ವಿಚ್ಛೇದನ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ ಈ ಜೋಡಿಗೆ ಕೋರ್ಟ್‌ ಇಂದು ವಿಚ್ಛೇದನ ಮಂಜೂರು ಮಾಡಿದೆ. ಆ ಮೂಲಕ ನಾಲ್ಕು ವರ್ಷಗಳ ದಾಂಪತ್ಯ ಜೀವನ ಮುಗಿಯಿತು.

ಇದರ ಬೆನ್ನಲ್ಲೇ ತಾವು ಯಾವ ಕಾರಣಕ್ಕೆ ವಿಚ್ಛೇದನ ಪಡೆದುಕೊಂಡೆವು ಎಂಬ ಬಗ್ಗೆ ಈ ಇಬ್ಬರು ಮೊಲದ ಬಾರಿಗೆ ಮಾತನಾಡಿದ್ದಾರೆ.

ವಿಚ್ಛೇದನಕ್ಕಾಗಿ ಕಾಯುವ ಜೋಡಿಗಳಿಗೆ ವರ್ಷಾನುಗಟ್ಟಲೇ ಸಮಯ ತೆಗೆದುಕೊಳ್ಳುತ್ತವೆ. ಆದರೆ ಈ ಜೋಡಿಗೆ ಕೇವಲ ಒಂದೇ ದಿನದಲ್ಲಿ ವಿಚ್ಛೇದನ ಸಿಕ್ಕಿದೆ. ಇಬ್ಬರೂ ನಗು-ನಗುತ್ತಲೇ ಕೋರ್ಟ್‌ ಆವರಣಕ್ಕೆ ಬಂದು, ಸರದಿಯಲ್ಲಿ ಪಕ್ಕ-ಪಕ್ಕ ಕೂತು ಕೋರ್ಟ್‌ ನೀಡಿದ ತೀರ್ಪು ಆಲಿಸಿ ಅಲ್ಲಿಂದ ನಿರ್ಗಮಿಸಿದ್ದಾರೆ. ಇವರಿಗೆ ಬೆಂಗಳೂರಿನ 2ನೇ ಹೆಚ್ಚುವರಿ ಕೌಟುಂಬಿಕ ನ್ಯಾಯಾಲಯ ವಿಚ್ಛೇದನ ನೀಡಿ ತೀರ್ಪು ನೀಡಿದೆ. ಸಿಕ್ಷನ್‌ 13B ಅಡಿಯಲ್ಲಿ ಇಬ್ಬರ ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ದೊರಕಿದೆ.

ಇನ್ನು ಈ ವಿಚ್ಛೇದನ ಬಗ್ಗೆ ಮಾತನಾಡಿರುವ ಚಂದನ್‌ ಶೆಟ್ಟಿ ಹಾಗೂ ನಿವೇದಿತಾ ಜೋಡಿ, “ಈ ದಿನ ನಾನು ಮತ್ತು ಚಂದನ್‌/ನಿವೇದಿತಾ, ನಮ್ಮ ದಾಂಪತ್ಯ ಜೀವನವನ್ನು ಕಾನೂನುಬದ್ಧವಾಗಿ ಪರಸ್ಪರ ಒಪ್ಪಿಗೆಯಿಂದ ಕೊನೆಗೊಳಿಸಲಿದ್ದೇವೆ. ನಮ್ಮ ನಿರ್ಧಾರವನ್ನು ಮತ್ತು ನಮ್ಮ ಜೀವನದ ಖಾಸಗಿತನವನ್ನು ಗೌರವಿಸಲು ಕೋರುತ್ತೇವೆ. ಪ್ರತಿ ಸಂದರ್ಭದಲ್ಲೂ ನಮ್ಮೊಂದಿಗೆ ನಿಂತ ಮಾಧ್ಯಮ ಮಿತ್ರರು, ನಮ್ಮ ಸ್ನೇಹಿತರು ಮತ್ತು ಅಭಿಮಾನಿಗಳಿಂದ ನಾವು ಎಂದಿನಂತೆ ಬೆಂಬಲ ಕೋರುತ್ತೇವೆ. ನಾವು ನಮ್ಮ ಪ್ರತ್ಯೇಕ ಮಾರ್ಗ ಅನುಸರಿಸಿದರೂ, ಪರಸ್ಪರ ಒಬ್ಬರನೊಬ್ಬರು ಗೌರವಿಸುತ್ತೇವೆ. ಸೂಕ್ಷ್ಮ ಪರಿಗಣನೆಗಾಗಿ ಎಲ್ಲರಿಗೂ ಧನ್ಯವಾದ” ಎಂದು ಚಂದ್‌ ಶೆಟ್ಟಿ ಮತ್ತು ನಿವೇದಿತಾ ಗೌಡ ಪರಸ್ಪರ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಬರೆದುಕೊಳ್ಳುವ ಮೂಲಕ ತಮ್ಮ ಅಭಿಮಾನಿಗಳಿಗೆ ತಾವು ವಿಚ್ಛೇದನ ಹೊಂದಿದ ವಿಷಯವನ್ನು ಬಹಿರಂಗಪಡಿಸಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

5 hours ago

ಓದುಗರ ಪತ್ರ: ಬದಲಾಗುತ್ತಿದೆ ಚಾತುರ್ಮಾಸ ಪದದ ಅರ್ಥ

ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…

5 hours ago

ಓದುಗರ ಪತ್ರ: ದಸರಾ ಮಹೋತ್ಸವ ಸರಳವಾಗಿರಲಿ

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…

5 hours ago

ಓದುಗರ ಪತ್ರ: ಗೃಹಲಕ್ಷ್ಮಿ: ಅರ್ಹರಿಗೆ ಅನ್ಯಾಯವಾಗದಿರಲಿ

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದೆ. ಗ್ರಾಮೀಣ ಆರ್ಥಿಕತೆಗೆ ನವಚೈತನ್ಯ ತುಂಬಿದೆ. ಮಹಿಳೆಯರಿಗೆ ಆರ್ಥಿಕ…

5 hours ago

ಎಚ್೧ಎನ್೧: ಕೊಡಗು ಜಿಲ್ಲೆಯಲ್ಲಿ 4 ಪ್ರಕರಣ ದೃಢ

ನವೀನ್ ಡಿಸೋಜ ಶೀತ, ಕೆಮ್ಮು, ಜ್ವರ ಸಂಬಂಧ ೩,೭೬೨ ಪ್ರಕರಣ ದಾಖಲು; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ:…

5 hours ago

ಮುಂಗಾರು ವೈಫಲ್ಯ: ಬಿತ್ತನೆ ಶೇ.15.95ಕ್ಕೆ ಕುಸಿತ

ಮಹಾದೇಶ್ ಎಂ.ಗೌಡ ಹನೂರು: ಕುಡಿಯುವ ನೀರು, ಮೇವಿಗೂ ತೀವ್ರ ಹಾಹಾಕಾರ ಹನೂರು: ತಾಲ್ಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದು,…

5 hours ago