ಮನರಂಜನೆ

ಸಂಜನಾ ಜೊತೆಗೆ ಡ್ಯಾನ್ಸ್ ಮಾಡಿ, ನನ್ನ ಜೀವನದಲ್ಲಿ ಏನೇನೋ ಆಯ್ತು: ಚಂದನ್‍ ಶೆಟ್ಟಿ

ಚಂದನ್‍ ಶೆಟ್ಟಿ ಅಭಿನಯದ ‘ಸೂತ್ರಧಾರಿ’ ಚಿತ್ರದ ಚಿತ್ರೀಕರಣ ಮುಗಿದೇ ಒಂದೂವರೆ ವರ್ಷಗಳಾಗಿವೆ. ಆದರೆ, ಕಾರಣಾಂತರಗಳಿಂದ ಚಿತ್ರದ ಬಿಡುಗಡೆ ಆಗಿರಲಿಲ್ಲ. ಇದೀಗ ಕೊನೆಗೂ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದ್ದು, ಮೇ.9ರಂದು ಬಿಡುಗಡೆಯಾಗುತ್ತಿದೆ.

ಈ ಚಿತ್ರದ ‘ಡ್ಯಾಶ್‍’ ಎಂಬ ಹಾಡಿನಲ್ಲಿ ಚಂದನ್‍ ಮತ್ತು ಸಂಜನಾ ಜೊತೆಯಾಗಿ ಕಾಣಿಸಿಕೊಂಡಿದ್ದು ನೆನಪಿರಬಹುದು. ಈ ಹಾಡು ಬಿಡುಗಡೆಯಾಗಿ 26 ಮಿಲಿಯನ್‍ಗೂ ಹೆಚ್ಚು ವೀಕ್ಷಣೆ ಕಂಡಿದೆ. ಒಂದು ಕಡೆ ಹಾಡು ಯಶಸ್ವಿಯಾದ ಖುಷಿಯಲ್ಲಿ ಚಂದನ್‍ ಇದ್ದರೆ, ಇನ್ನೊಂದು ಕಡೆ ಚಂದನ್‍ ಮತ್ತು ಸಂಜನಾ ಪರಸ್ಪರ ಪ್ರೀತಿಸುತ್ತಿದ್ದಾರೆ, ಅವರ ನಿಶ್ಚಿತಾರ್ಥವಾಗಿದೆ ಎಂಬೆಲ್ಲಾ ಸುದ್ದಿಗಳು ಕೇಳಿಬಂದಿದ್ದವು. ಆದರೆ, ಇವೆಲ್ಲವೂ ಸುಳ್ಳು, ತಮ್ಮ ಹಾಗೂ ಸಂಜನಾ ನಡುವೆ ಏನೂ ಇಲ್ಲ ಎಂದು ಚಂದನ್‍ ಹೇಳಿಕೊಂಡಿದ್ದಾರೆ.

ಇತ್ತೀಚೆಗೆ ನಡೆದ ‘ಸೂತ್ರಧಾರಿ’ ಚಿತ್ರದ ಪತ್ರಿಕಾಗೋಷ್ಠಿಯ ಸಂದರ್ಭದಲ್ಲಿ ಮಾತನಾಡಿರುವ ಚಂದನ್‍, ‘ಸಂಜನಾ ಜೊತೆಗೆ ಡ್ಯಾಶ್‍ ಹಾಡು ಮಾಡಿ, ನನ್ನ ಜೀವನದಲ್ಲಿ ಏನೇನೋ ಆಯ್ತು. ಇಷ್ಟು ದಿನ ನಾವು ವೇದಿಕೆ ಮೇಲೆ ಕಾಣಿಸಿಕೊಳ್ಳದಿದ್ದರೂ, ನಾವು ಮದುವೆಯಾಗುತ್ತಿದ್ದೇವೆ ಅಂತೆಲ್ಲಾ ಸುದ್ದಿಯಾಗಿತ್ತು. ನನ್ನ ಪರಿಚಯದವರೊಬ್ಬರು ಫೋನ್‍ ಮಾಡಿ, ಸಂಜನಾ ಜೊತೆಗೆ ಮದುವೆಯಂತೆ ಎಂದರು. ನಾನು ಇಲ್ಲ ಎಂದರೂ ಅವರು ನಂಬುತ್ತಿಲ್ಲ. ತನಗೆಲ್ಲವೂ ಗೊತ್ತಿದೆ ಎಂದರು. ನನ್ನ ಮದುವೆ ಬಗ್ಗೆ ನನಗೆ ಗೊತ್ತಿಲ್ಲದಿದ್ದರೂ, ಅವರಿಗೆ ಗೊತ್ತಿತ್ತು. ನಮ್ಮ ನಡುವೆ ಏನಿಲ್ಲ’ ಎಂದು ವ್ಯಂಗ್ಯ ಮಾಡಿದರು ಚಂದನ್‍.

‘ಡ್ಯಾಶ್‍’ ಹಾಡಿಗೆ ಬಿಟ್ಟರೆ, ನಾವಿಬ್ಬರೂ ಮಾತಾಡಿದ್ದೇ ಕಡಿಮೆ ಎನ್ನುವ ಸಂಜನಾ, ‘ಚಂದನ್‍ ನನ್ನ ಸ್ನೇಹಿತ ಎನ್ನುವುದಕ್ಕಿಂತ ಹೆಚ್ಚಾಗಿ, ಅವರು ನನ್ನ ಸಹೋದರನಿದ್ದಂತೆ. ನಮ್ಮ ನಡುವೆ ಏನೂ ಇಲ್ಲ. ಡ್ಯಾಶ್‍ ಹಾಡಿಗೆ ಬಿಟ್ಟರೆ, ನಾವಿಬ್ಬರೂ ಮಾತಾಡಿದ್ದೇ ಕಡಿಮೆ. ಹಾಗಾಗಿ, ಇವೆಲ್ಲವೂ ಸುಳ್ಳು’ ಎಂದರು.

‘ಸೂತ್ರಧಾರಿ’ ಚಿತ್ರಕ್ಕೆ ಕಿರಣ್ ಕುಮಾರ್ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದು, ನವರಸನ್‍ ನಿರ್ಮಾಣ ಮಾಡಿದ್ದಾರೆ. ಚಿತ್ರದಲ್ಲಿ ಚಂದನ್‍ ಶೆಟ್ಟಿ, ಸಂಜನಾ ಆನಂದ್‍, ಅಪೂರ್ವ, ಪ್ರಶಾಂತ್ ನಟನ ಮುಂತಾದವರು ನಟಿಸಿದ್ದು, ಚಿತ್ರಕ್ಕೆ ಪಿ.ಕೆ.ಎಚ್‍. ದಾಸ್ ಛಾಯಾಗ್ರಹಣವಿದೆ.

ಆಂದೋಲನ ಡೆಸ್ಕ್

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

5 hours ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

6 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

7 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

7 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

7 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

15 hours ago