ಮನರಂಜನೆ

‘ಮುದ್ದು ರಾಕ್ಷಸಿ’ಯ ಹಿಂದಿನ ‘ಸೂತ್ರಧಾರಿ’ ಎರಡು ಚಿತ್ರಗಳೊಂದಿಗೆ ಬಂದ ಚಂದನ್ ಶೆಟ್ಟಿ

ನಿಜಜೀವನದಲ್ಲಿ ದಂಪತಿಯಾಗಿದ್ದ ನಿವೇದಿತಾ ಗೌಡ ಮತ್ತು ಚಂದನ್ ಶೆಟ್ಟಿ, ಕಳೆದ ವರ್ಷ ದೂರಾಗಿದ್ದಾರೆ. ಅದಕ್ಕೂ ಮೊದಲು ಅವರಿಬ್ಬರೂ ‘ಮುದ್ದು ರಾಕ್ಷಸಿ’ ಎಂಬ ಚಿತ್ರದಲ್ಲಿ ನಟಿಸುವುದಕ್ಕೆ ಮುಂದಾಗಿದ್ದರು. ಆದರೆ, ನಿವೇದಿತಾ-ಚಂದನ್ ದೂರಾದರೂ, ಚಿತ್ರದ ಚಿತ್ರೀಕರಣ ಮಾತ್ರ ಮುಗಿದಿರಲಿಲ್ಲ. ಈಗ ಈ ಚಿತ್ರದ ಚಿತ್ರೀಕರಣ ಮುಕ್ತಾಯದ ಹಂತಕ್ಕೆ ತಲುಪಿದೆ.

ಪುನೀತ್ ಶ್ರೀನಿವಾಸ್ ನಿರ್ದೇಶನದ ‘ಮುದ್ದು ರಾಕ್ಷಸಿ’ ಚಿತ್ರವನ್ನು ಶ್ರೀ ಚೌಡೇಶ್ವರಿ ಸಿನಿ ಕಂಬೈನ್ಸ್ ಮೂಲಕ ಮೋಹನ್ ಕುಮಾರ್ ನಿರ್ಮಿಸುತ್ತಿದ್ದಾರೆ. ಈ ಚಿತ್ರದಲ್ಲಿ ಚಂದನ್ ಶೆಟ್ಟಿ – ನಿವೇದಿತಾಗೌಡ ವಿಚ್ಛೇದನ ಪಡೆದ ನಂತರ ಬಾಕಿ ಉಳಿದಿದ್ದ ಕೆಲವು ಭಾವನಾತ್ಮಕ ದೃಶ್ಯಗಳ ಚಿತ್ರೀಕರಣವನ್ನು ಇತ್ತೀಚೆಗೆ ವಜ್ರಮುನಿ ಫಾರಂಹೌಸ್‌ನಲ್ಲಿ ನಡೆಸಲಾಯಿತು. ವಿಚ್ಛೇದನದ ನಂತರ ಮೊದಲ ಬಾರಿಗೆ ಚಂದನ್, ನಿವೇದಿತಾ ಮುಖಾಮುಖಿಯಾದರು. ಅಲ್ಲಿ ಇಬ್ಬರೂ ಒಬ್ಬರನ್ನೊಬ್ಬರು ಅಪ್ಪಿಕೊಂಡು ಬೀಳ್ಕೊಡುವ ದೃಶ್ಯವನ್ನು ಚಿತ್ರೀಕರಿಸಲಾಗಿದೆ. ಈ ಸಂದರ್ಭದಲ್ಲಿ ಗ್ಲಿಸರಿನ್ ಹಾಕದಿದ್ದರೂ ನಿವೇದಿತಾ ಕಣ್ಣಂಚಲ್ಲಿ ನೀರು ತುಂಬಿ ಬಂದಿದೆ. ಈ ದೃಶ್ಯದ ಚಿತ್ರೀಕರಣದ ಮೂಲಕ ‘ಮುದ್ದು ರಾಕ್ಷಸಿ’ ಚಿತ್ರದ ಶೂಟಿಂಗ್ ಬಹುತೇಕ ಮುಕ್ತಾಯಗೊಂಡಿದೆ.

ಇನ್ನು, ಮೂರು ವರ್ಷಗಳ ಹಿಂದೆ ‘ಸೂತ್ರಧಾರಿ’ ಎಂಬ ಚಿತ್ರಕ್ಕೆ ಚಂದನ್ ನಾಯಕನಾಗಿದ್ದರು. ಚಿತ್ರೀಕರಣ ಮುಗಿದು ಒಂದು ವರ್ಷವಾದರೂ ಚಿತ್ರದ ಬಿಡುಗಡೆಯ ಸುಳಿವೇ ಇರಲಿಲ್ಲ. ಇದೀಗ ಚಿತ್ರವು ಮೇ ೯ರಂದು ರಾಜ್ಯಾದ್ಯಂತ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ‘ಸೂತ್ರಧಾರಿ’ ಚಿತ್ರಕ್ಕೆ ಕಿರಣ್ ಕುಮಾರ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದು, ನವರಸನ್ ನಿರ್ಮಿಸಿದ್ದಾರೆ.

ಚಂದನ್ ಎದುರು ಅಪೂರ್ವ ನಾಯಕಿಯಾಗಿ ನಟಿಸಿದ್ದು, ಸಂಜನಾ ಆನಂದ ಹಾಡೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ‘ಸೂತ್ರಧಾರಿ’ಯ ಕುರಿತು ಚಂದನ್, ‘ನಾಯಕನಾಗಿ ಇದು ಮೊದಲ ಸಿನಿಮಾ. ಈ ಚಿತ್ರದಲ್ಲಿ ನಟಿಸಿದ ನಂತರ ನನ್ನ ಜೀವನದಲ್ಲಿ ಸಾಕಷ್ಟು ಬದಲಾವಣೆ ಆಗಿದೆ’ ಎಂದಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಾಂದಲಪಟ್ಟಿಯಲ್ಲಿ ಮುಂದುವರಿದ ರಸ್ತೆ ದುರಸ್ತಿ ಕಾರ್ಯ

ಬೃಹತ್ ಯಂತ್ರ ಬಳಸದೆ ಕೆಲಸ; ಇನ್ನೂ 10-15 ದಿನ ಪ್ರವಾಸಿಗರ ಪ್ರವೇಶಕ್ಕಿಲ್ಲ ಅವಕಾಶ ನವೀನ್ ಡಿಸೋಜ ಮಡಿಕೇರಿ : ಕೊಡಗಿನ…

8 mins ago

ಜಿಲ್ಲೆಯಲ್ಲಿ ಜಾನುವಾರುಗಳ ಮೇವು-ನೀರಿಗಿಲ್ಲ ಬರ!

ಮುಂದಿನ 34 ವಾರಗಳಿಗೆ ಆಗುವಷ್ಟು ಮೇವು ದಾಸ್ತಾನು; ಸದ್ಯಕ್ಕೆ ಕುಡಿಯುವ ನೀರಿನ ಸಮಸ್ಯೆಯೂ ದೂರ ಕೆ.ಬಿ.ರಮೇಶ ನಾಯಕ ಮೈಸೂರು :…

26 mins ago

ಆರ್.ಟಿ.ವಿಠಲಮೂರ್ತಿ ಅವರ ಬೆಂಗಳೂರು ಡೈರಿ ; ಸಂಪುಟ ಪುನರಚನೆಗೆ ಸಜ್ಜಾದ ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟ ಪುನರಚನೆಗೆ ತಯಾರಿ ಆರಂಭಿಸಿದ್ದಾರೆ. ಬಜೆಟ್ ಅಧಿವೇಶನ ಮುಗಿದ ನಂತರ ದಿಲ್ಲಿಗೆ ತೆರಳಲಿರುವ ಸಿದ್ದರಾಮಯ್ಯ ಅವರು ಕಾಂಗ್ರೆಸ್…

41 mins ago

ಮಾಗುಡಿಲು ಗ್ರಾಮಕ್ಕೆ ಸಂಜೆಯ ನಂತರ ಬಸ್‌ ಇಲ್ಲದೆ ತೊಂದರೆ

ಸರಗೂರು ಕಡೆಯಿಂದ ಗ್ರಾಮಕ್ಕೆ ಸೇತುವೆ ನಿರ್ಮಿಸುವಂತೆ ಗ್ರಾಮಸ್ಥರ ಆಗ್ರಹ ದಾಸೇಗೌಡ ಸರಗೂರು : ತಾಲ್ಲೂಕಿನ ಮಾಗುಡಿಲು ಗ್ರಾಮದಲ್ಲಿ ಪ್ರತಿದಿನ ಕೆಎಸ್ಆರ್‌ಟಿಸಿ…

1 hour ago

ಬಾವಿ ನೀರಿಗಾಗಿ ಅನಸೂಯ ಅವಿಸ್ಮರಣೀಯ ಹೋರಾಟ

ಆನಂದ್ ತೇಲ್ತುಂಬ್ಡೆ ಅಮ್ಮನೂ ಹೋರಾಟಗಾರರು! ವಿ.ಎಲ್.ನರಸಿಂಹಮೂರ್ತಿ ಹೆಸರಾಂತ ಚಿಂತಕ, ಮಾನವ ಮಾನವ ಹಕ್ಕುಗಳ 'ಹೋರಾಟ ಗಾರ ಡಾ.ಆನಂದ್ ತೇಲ್ತುಂಬ್ಡೆಯವರ ತಾಯಿ…

3 hours ago

ಆಂದೋಲನ ಸಂಪಾದಕೀಯ | ರೈಲ್ವೆ ಇಲಾಖೆಗೆ ಕನ್ನಡ, ಕನ್ನಡಿಗರ ಬಗ್ಗೆ ತಾತ್ಸಾರ ಸಲ್ಲದು

ರೈಲ್ವೆ ಇಲಾಖೆಯಲ್ಲಿ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ಎಂಬುದು ಇಂದು ನಿನ್ನೆಯ ಆರೋಪವಲ್ಲ. ಮೊದಲಿನಿಂದಲೂ ಈ ಆರೋಪ ಇದೆ. ರೈಲ್ವೆಯಲ್ಲಿ ಸ್ಥಳೀಯರಿಗೆ ಉದ್ಯೋಗದಲ್ಲಿ…

3 hours ago