ಮನರಂಜನೆ

‘ಮುದ್ದು ರಾಕ್ಷಸಿ’ಯ ಹಿಂದಿನ ‘ಸೂತ್ರಧಾರಿ’ ಎರಡು ಚಿತ್ರಗಳೊಂದಿಗೆ ಬಂದ ಚಂದನ್ ಶೆಟ್ಟಿ

ನಿಜಜೀವನದಲ್ಲಿ ದಂಪತಿಯಾಗಿದ್ದ ನಿವೇದಿತಾ ಗೌಡ ಮತ್ತು ಚಂದನ್ ಶೆಟ್ಟಿ, ಕಳೆದ ವರ್ಷ ದೂರಾಗಿದ್ದಾರೆ. ಅದಕ್ಕೂ ಮೊದಲು ಅವರಿಬ್ಬರೂ ‘ಮುದ್ದು ರಾಕ್ಷಸಿ’ ಎಂಬ ಚಿತ್ರದಲ್ಲಿ ನಟಿಸುವುದಕ್ಕೆ ಮುಂದಾಗಿದ್ದರು. ಆದರೆ, ನಿವೇದಿತಾ-ಚಂದನ್ ದೂರಾದರೂ, ಚಿತ್ರದ ಚಿತ್ರೀಕರಣ ಮಾತ್ರ ಮುಗಿದಿರಲಿಲ್ಲ. ಈಗ ಈ ಚಿತ್ರದ ಚಿತ್ರೀಕರಣ ಮುಕ್ತಾಯದ ಹಂತಕ್ಕೆ ತಲುಪಿದೆ.

ಪುನೀತ್ ಶ್ರೀನಿವಾಸ್ ನಿರ್ದೇಶನದ ‘ಮುದ್ದು ರಾಕ್ಷಸಿ’ ಚಿತ್ರವನ್ನು ಶ್ರೀ ಚೌಡೇಶ್ವರಿ ಸಿನಿ ಕಂಬೈನ್ಸ್ ಮೂಲಕ ಮೋಹನ್ ಕುಮಾರ್ ನಿರ್ಮಿಸುತ್ತಿದ್ದಾರೆ. ಈ ಚಿತ್ರದಲ್ಲಿ ಚಂದನ್ ಶೆಟ್ಟಿ – ನಿವೇದಿತಾಗೌಡ ವಿಚ್ಛೇದನ ಪಡೆದ ನಂತರ ಬಾಕಿ ಉಳಿದಿದ್ದ ಕೆಲವು ಭಾವನಾತ್ಮಕ ದೃಶ್ಯಗಳ ಚಿತ್ರೀಕರಣವನ್ನು ಇತ್ತೀಚೆಗೆ ವಜ್ರಮುನಿ ಫಾರಂಹೌಸ್‌ನಲ್ಲಿ ನಡೆಸಲಾಯಿತು. ವಿಚ್ಛೇದನದ ನಂತರ ಮೊದಲ ಬಾರಿಗೆ ಚಂದನ್, ನಿವೇದಿತಾ ಮುಖಾಮುಖಿಯಾದರು. ಅಲ್ಲಿ ಇಬ್ಬರೂ ಒಬ್ಬರನ್ನೊಬ್ಬರು ಅಪ್ಪಿಕೊಂಡು ಬೀಳ್ಕೊಡುವ ದೃಶ್ಯವನ್ನು ಚಿತ್ರೀಕರಿಸಲಾಗಿದೆ. ಈ ಸಂದರ್ಭದಲ್ಲಿ ಗ್ಲಿಸರಿನ್ ಹಾಕದಿದ್ದರೂ ನಿವೇದಿತಾ ಕಣ್ಣಂಚಲ್ಲಿ ನೀರು ತುಂಬಿ ಬಂದಿದೆ. ಈ ದೃಶ್ಯದ ಚಿತ್ರೀಕರಣದ ಮೂಲಕ ‘ಮುದ್ದು ರಾಕ್ಷಸಿ’ ಚಿತ್ರದ ಶೂಟಿಂಗ್ ಬಹುತೇಕ ಮುಕ್ತಾಯಗೊಂಡಿದೆ.

ಇನ್ನು, ಮೂರು ವರ್ಷಗಳ ಹಿಂದೆ ‘ಸೂತ್ರಧಾರಿ’ ಎಂಬ ಚಿತ್ರಕ್ಕೆ ಚಂದನ್ ನಾಯಕನಾಗಿದ್ದರು. ಚಿತ್ರೀಕರಣ ಮುಗಿದು ಒಂದು ವರ್ಷವಾದರೂ ಚಿತ್ರದ ಬಿಡುಗಡೆಯ ಸುಳಿವೇ ಇರಲಿಲ್ಲ. ಇದೀಗ ಚಿತ್ರವು ಮೇ ೯ರಂದು ರಾಜ್ಯಾದ್ಯಂತ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ‘ಸೂತ್ರಧಾರಿ’ ಚಿತ್ರಕ್ಕೆ ಕಿರಣ್ ಕುಮಾರ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದು, ನವರಸನ್ ನಿರ್ಮಿಸಿದ್ದಾರೆ.

ಚಂದನ್ ಎದುರು ಅಪೂರ್ವ ನಾಯಕಿಯಾಗಿ ನಟಿಸಿದ್ದು, ಸಂಜನಾ ಆನಂದ ಹಾಡೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ‘ಸೂತ್ರಧಾರಿ’ಯ ಕುರಿತು ಚಂದನ್, ‘ನಾಯಕನಾಗಿ ಇದು ಮೊದಲ ಸಿನಿಮಾ. ಈ ಚಿತ್ರದಲ್ಲಿ ನಟಿಸಿದ ನಂತರ ನನ್ನ ಜೀವನದಲ್ಲಿ ಸಾಕಷ್ಟು ಬದಲಾವಣೆ ಆಗಿದೆ’ ಎಂದಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸಾಲ ಬಾಧೆ ; ದಂಪತಿ ಆತ್ಮಹತ್ಯೆ

ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…

2 hours ago

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

16 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

16 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

16 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

16 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

16 hours ago