ನಿಜಜೀವನದಲ್ಲಿ ದಂಪತಿಯಾಗಿದ್ದ ನಿವೇದಿತಾ ಗೌಡ ಮತ್ತು ಚಂದನ್ ಶೆಟ್ಟಿ, ಕಳೆದ ವರ್ಷ ದೂರಾಗಿದ್ದಾರೆ. ಅದಕ್ಕೂ ಮೊದಲು ಅವರಿಬ್ಬರೂ ‘ಮುದ್ದು ರಾಕ್ಷಸಿ’ ಎಂಬ ಚಿತ್ರದಲ್ಲಿ ನಟಿಸುವುದಕ್ಕೆ ಮುಂದಾಗಿದ್ದರು. ಆದರೆ, ನಿವೇದಿತಾ-ಚಂದನ್ ದೂರಾದರೂ, ಚಿತ್ರದ ಚಿತ್ರೀಕರಣ ಮಾತ್ರ ಮುಗಿದಿರಲಿಲ್ಲ. ಈಗ ಈ ಚಿತ್ರದ ಚಿತ್ರೀಕರಣ ಮುಕ್ತಾಯದ ಹಂತಕ್ಕೆ ತಲುಪಿದೆ.
ಪುನೀತ್ ಶ್ರೀನಿವಾಸ್ ನಿರ್ದೇಶನದ ‘ಮುದ್ದು ರಾಕ್ಷಸಿ’ ಚಿತ್ರವನ್ನು ಶ್ರೀ ಚೌಡೇಶ್ವರಿ ಸಿನಿ ಕಂಬೈನ್ಸ್ ಮೂಲಕ ಮೋಹನ್ ಕುಮಾರ್ ನಿರ್ಮಿಸುತ್ತಿದ್ದಾರೆ. ಈ ಚಿತ್ರದಲ್ಲಿ ಚಂದನ್ ಶೆಟ್ಟಿ – ನಿವೇದಿತಾಗೌಡ ವಿಚ್ಛೇದನ ಪಡೆದ ನಂತರ ಬಾಕಿ ಉಳಿದಿದ್ದ ಕೆಲವು ಭಾವನಾತ್ಮಕ ದೃಶ್ಯಗಳ ಚಿತ್ರೀಕರಣವನ್ನು ಇತ್ತೀಚೆಗೆ ವಜ್ರಮುನಿ ಫಾರಂಹೌಸ್ನಲ್ಲಿ ನಡೆಸಲಾಯಿತು. ವಿಚ್ಛೇದನದ ನಂತರ ಮೊದಲ ಬಾರಿಗೆ ಚಂದನ್, ನಿವೇದಿತಾ ಮುಖಾಮುಖಿಯಾದರು. ಅಲ್ಲಿ ಇಬ್ಬರೂ ಒಬ್ಬರನ್ನೊಬ್ಬರು ಅಪ್ಪಿಕೊಂಡು ಬೀಳ್ಕೊಡುವ ದೃಶ್ಯವನ್ನು ಚಿತ್ರೀಕರಿಸಲಾಗಿದೆ. ಈ ಸಂದರ್ಭದಲ್ಲಿ ಗ್ಲಿಸರಿನ್ ಹಾಕದಿದ್ದರೂ ನಿವೇದಿತಾ ಕಣ್ಣಂಚಲ್ಲಿ ನೀರು ತುಂಬಿ ಬಂದಿದೆ. ಈ ದೃಶ್ಯದ ಚಿತ್ರೀಕರಣದ ಮೂಲಕ ‘ಮುದ್ದು ರಾಕ್ಷಸಿ’ ಚಿತ್ರದ ಶೂಟಿಂಗ್ ಬಹುತೇಕ ಮುಕ್ತಾಯಗೊಂಡಿದೆ.
ಇನ್ನು, ಮೂರು ವರ್ಷಗಳ ಹಿಂದೆ ‘ಸೂತ್ರಧಾರಿ’ ಎಂಬ ಚಿತ್ರಕ್ಕೆ ಚಂದನ್ ನಾಯಕನಾಗಿದ್ದರು. ಚಿತ್ರೀಕರಣ ಮುಗಿದು ಒಂದು ವರ್ಷವಾದರೂ ಚಿತ್ರದ ಬಿಡುಗಡೆಯ ಸುಳಿವೇ ಇರಲಿಲ್ಲ. ಇದೀಗ ಚಿತ್ರವು ಮೇ ೯ರಂದು ರಾಜ್ಯಾದ್ಯಂತ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ‘ಸೂತ್ರಧಾರಿ’ ಚಿತ್ರಕ್ಕೆ ಕಿರಣ್ ಕುಮಾರ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದು, ನವರಸನ್ ನಿರ್ಮಿಸಿದ್ದಾರೆ.
ಚಂದನ್ ಎದುರು ಅಪೂರ್ವ ನಾಯಕಿಯಾಗಿ ನಟಿಸಿದ್ದು, ಸಂಜನಾ ಆನಂದ ಹಾಡೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ‘ಸೂತ್ರಧಾರಿ’ಯ ಕುರಿತು ಚಂದನ್, ‘ನಾಯಕನಾಗಿ ಇದು ಮೊದಲ ಸಿನಿಮಾ. ಈ ಚಿತ್ರದಲ್ಲಿ ನಟಿಸಿದ ನಂತರ ನನ್ನ ಜೀವನದಲ್ಲಿ ಸಾಕಷ್ಟು ಬದಲಾವಣೆ ಆಗಿದೆ’ ಎಂದಿದ್ದಾರೆ.
ಬೆಂಗಳೂರು: ಡಿ.ಕೆ.ಶಿವಕುಮಾರ್ ಅವರ ಪದಗ್ರಹಣಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಬುಧವಾರ ರಾಜ್ಯದ ನೂತನ ಸಿಎಂ ಆಗಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ…
ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಸೂರ್ಯನಗರದಲ್ಲಿ ನಿರ್ಮಾಣಗೊಳ್ಳಲಿರುವ ದೇಶದ ಎರಡನೇ ಅತಿದೊಡ್ಡ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ರಾಜ್ಯ ಸರ್ಕಾರದಿಂದ ಶಂಕುಸ್ಥಾಪನೆ ನೆರವೇರಿಸಲಾಗಿದೆ.…
ಈ ಬಾರಿಯ ಬೇಸಿಗೆಯ ಧಗೆ ಮಧ್ಯಾಹ್ನದ ವೇಳೆ ಯಾರೂ ಹೊರಗಡೆ ಓಡಾಡದಂತೆ ಮಾಡಿದೆ. ವಾಹನ ಸವಾರರ ಸ್ಥಿತಿಯಂತೂ ಹೇಳತೀರದು. ರಸ್ತೆ…
ರಾಜ್ಯದಲ್ಲಿ ಅತ್ಯಂತ ಪ್ರಬಲ ನಾಯಕರಲ್ಲಿ ಸಿದ್ದರಾಮಯ್ಯನವರೂ ಕೂಡ ಒಬ್ಬರು. ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವುದರ ಮೂಲಕ ಅವರ ಆಡಳಿತ…
ಕೆ.ಪಿ.ನಾಗರಾಜ್, ಮೈಸೂರು ಕರ್ನಾಟಕ ರಾಜಕೀಯ ವ್ಯಾಕರಣವನ್ನೇ ಬದಲಾಯಿಸಿದ ಸಿದ್ದರಾಮಯ್ಯ ಮೈಸೂರು ರಾಜಕಾರಣ ಅಂದರೆ ಒಮ್ಮೆ ಒಡೆಯರ್ ಯುಗ, ನಂತರ ದೇವರಾಜ…
ಮಹಾತ್ಮ ಗಾಂಧೀಜಿ ಅವರ ಆತ್ಮಕತೆಗೆ ನೂರು ವರ್ಷ ಸಂದಿರುವುದು ಸಂತಸದ ವಿಷಯ. ಇವತ್ತು ಗಾಂಧಿಜಿ ಅವರ ವಿಚಾರಕ್ಕೆ ಏನಾಗುತ್ತಿದೆ? ಆಚಾರಕ್ಕೆ…