karimani malika neenalla (1)
ಈ ಹಿಂದೆ ‘ಯೂ ಟರ್ನ್ 2’ ಚಿತ್ರ ನಿರ್ದೇಶಿಸಿದ್ದ ಚಂದ್ರು ಓಬಯ್ಯ, ಇದೀಗ ‘ಕರಿಮಣಿ ಮಾಲೀಕ ನೀನಲ್ಲ’ ಎಂಬ ಚಿತ್ರವನ್ನು ಸದ್ದಿಲ್ಲದೆ ಮಾಡಿ ಮುಗಿಸಿದ್ದಾರೆ. ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆಯುವುದರ ಜೊತೆಗೆ ನಿರ್ದೇಶನ ಮಾಡಿ, ಚಿತ್ರವನ್ನೂ ನಿರ್ಮಿಸಿದ್ದಾರೆ. ಮೂರು ಹಾಡುಗಳಿಗೆ ಸಂಗೀತ ಸಂಯೋಜಿಸುವ ಮೂಲಕ ಸಂಗೀತ ನಿರ್ದೇಶಕರೂ ಆಗಿದ್ದಾರೆ. ಈ ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆ ಆಗಿದೆ.
ಬಿ.ಎಂ.ಟಿ.ಸಿಯಲ್ಲಿ ಕೆಲಸ ಮಾಡುತ್ತಿರುವ ಮಾರುತಿ ಚಿತ್ರದ ನಾಯಕನಾಗಿದ್ದು, ರಮಿಕ ಸುತಾರ ನಾಯಕಿಯ ಪಾತ್ರ ನಿರ್ವಹಿಸಿದ್ದಾರೆ. ಮತ್ತೊಂದು ಪ್ರಮುಖ ಪಾತ್ರದಲ್ಲಿ ಕಾಕ್ರೋಚ್ ಸುಧಿ ಕಾಣಿಸಿಕೊಂಡಿದ್ದಾರೆ.
‘ಕರಿಮಣಿ ಮಾಲಿಕ ನೀನಲ್ಲ’, ಚಂದ್ರು ನಿರ್ದೇಶನದ ಒಂಬತ್ತನೇ ಚಿತ್ರವಂತೆ. ‘ಇದು ಬೆಂಗಳೂರಿನಲ್ಲೇ ನಡೆದಂಥ ನೈಜ ಘಟನೆ ಆಧಾರಿತ ಚಿತ್ರ. ಎಳನೀರು ಮಾರೋ ಹುಡುಗ, ಹೂ ಮಾರೋ ಹುಡುಗಿಯ ನಡುವೆ ನಡೆಯೋ ವಿಭಿನ್ನ ಪ್ರೇಮಕಥೆ ಇದಾಗಿದ್ದು, ಇವರಿಬ್ಬರ ನಡುವೆ ಮತ್ತೊಬ್ಬನ ಎಂಟ್ರಿ ಆಗುತ್ತದೆ. ಇಲ್ಲಿ ನಾಯಕಿಯ ಕರಿಮಣಿ ಮಾಲೀಕ ಯಾರಾಗ್ತಾರೆ ಅನ್ನೋದೇ ಚಿತ್ರದ ಕಥೆ. ನಾನು ರೆಡಿ ಮಾಡಿಕೊಂಡಿದ್ದ ಕಥೆಗೆ ಇದೇ ಟೈಟಲ್ ಸೂಕ್ತ ಎನಿಸಿ ಈ ಶೀರ್ಷಿಕೆ ಇಟ್ಟಿದ್ದೇನೆ. ಚಿತ್ರದ ಶೀರ್ಷಿಕೆ ಗೀತೆಯನ್ನು ಪಾವಗಡದ ಬಳಿಯಿರುವ ನಿಡಗಲ್ ಬೆಟ್ಟದಲ್ಲಿ ಶೂಟ್ ಮಾಡಿದ್ದೇವೆ. ಚಿತ್ರದಲ್ಲಿ ಮೂರು ಹಾಡುಗಳಿದ್ದು, ಚಿತ್ರಕ್ಕೆ ನಾನೇ ಸಂಗೀತ ಸಂಯೋಜಿಸಿದ್ದೇನೆ’ ಎಂದರು.
ನಂತರ ಚಿತ್ರದ ನಾಯಕ ನಟ ಮಾರುತಿ ಬಿಎಂಟಿಸಿ, ಮಾತನಾಡುತ್ತ ಸದ್ಯ ‘ನಾನೀಗ ಬಿಎಂಟಿಸಿಯಲ್ಲಿ ಕೆಲಸ ಮಾಡುತ್ತಿದ್ದೇನೆ. ಬ್ಯಾಡಗಿ ತಾಲ್ಲೂಕು ಕಾಗಿನೆಲೆಯಲ್ಲಿ ವಿದ್ಯಾಭ್ಯಾಸ ಮಾಡಿದೆ. ವಿದ್ಯಾಭ್ಯಾಸದ ದಿನಗಳಲ್ಲಿ ಅನೇಕ ನಾಟಕಗಳನ್ನು ಮಾಡುತ್ತಿದ್ದೆ. ಚಲನಚಿತ್ರ ಕಲಾವಿದನಾಗಬೇಕೆನ್ನುವುದು ನನ್ನ ಬಹುದಿನಗಳ ಕನಸು. ಆ ಕನಸು ಈ ಚಿತ್ರದ ಮೂಲಕ ಈಡೇರಿದೆ. ಈ ಚಿತ್ರದಲ್ಲಿ ಎಳನೀರು ಮಾರೋ ಹುಡುಗನಾಗಿ ನಟಿಸಿದ್ದೇನೆ’ ಎಂದು ಹೇಳಿದರು.
ರಮಿಕಾ ಸುತಾರ ಮೂಲತಃ ಗುಲ್ಬರ್ಗದವರಂತೆ. ‘ಸಿನಿಮಾ ಬಗ್ಗೆ ಮೊದಲಿಂದಲೂ ಆಸಕ್ತಿಯಿತ್ತು. ಈ ಚಿತ್ರದಲ್ಲಿ ಒಬ್ಬ ಹೂಮಾರುವ ಹುಡುಗಿಯಾಗಿ ನಟಿಸಿದ್ದೇನೆ. ಸ್ವಲ್ಪ ಬಜಾರಿ ತರಹದ ಪಾತ್ರ. ಆಡಿಷನ್ನಲ್ಲಿ ಆಯ್ಕೆ ಆಗಿ ಈ ಚಿತ್ರದಲ್ಲಿ ನಟಿಸಿದ್ದೇನೆ’ ಎಂದು ಹೇಳಿದರು.
ಚಿತ್ರದ ಮತ್ತೊಬ್ಬ ನಾಯಕ ಕಾಕ್ರೋಚ್ ಸುಧೀ ಮಾತನಾಡಿ, ‘ನಾಯಕ-ನಾಯಕಿ ಮಧ್ಯೆ ಬರುವ ಮತ್ತೊಬ್ಬ ವ್ಯಕ್ತಿಯ ಪಾತ್ರವನ್ನು ನಾನು ಮಾಡಿದ್ದೇನೆ. ಮಾರುತಿ ಅವರು ತುಂಬಾ ಕನಸಿಟ್ಟುಕೊಂಡು ಸಿನಿಮಾಗೆ ಬಂದಿದ್ದಾರೆ. ನೀನಲ್ಲ, ನೀನೇ ನಲ್ಲ ಅಂತ ನಾಯಕಿ ಯರ್ಯಾರಿಗೆ ಹೇಳ್ತಾಳೆ ಅನ್ನೋದೇ ಚಿತ್ರದ ಕಥೆ’ ಎಂದರು.
‘ಕರಿಮಣಿ ಮಾಲಿಕ ನೀನಲ್ಲ’ ಚಿತ್ರದಲ್ಲಿ ಮೂಗು ಸುರೇಶ್, ರೇಖಾ ದಾಸ್ ಮುಂತಾದವರು ನಟಿಸಿದ್ದಾರೆ.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…