ಮನರಂಜನೆ

ಮಗನನ್ನು ಹೀರೋ ಮಾಡಲು ಹೊರಟ ಚರಣ್ ರಾಜ್: ಸದ್ಯದಲ್ಲೇ ಚಿತ್ರ ಪ್ರಾರಂಭ

‘ಪಾರಿಜಾತ’ ಚಿತ್ರದ ಮೂಲಕ ಕನ್ನಡದಲ್ಲಿ ಹೀರೋ ಆಗಿ, ನಂತರ ಕನ್ನಡ, ತೆಲುಗು, ತಮಿಳು ಸೇರಿದಂತೆ ಬೇರೆ ಭಾಷೆಗಳಲ್ಲಿ ನೂರಾರು ಚಿತ್ರಗಳಲ್ಲಿ ನಟಿಸಿರುವ ಚರಣ್‍ ರಾಜ್‍, ಇದೀಗ ನಿರ್ದೇಶನಕ್ಕಿಳಿದಿದ್ದಾರೆ. ಹಾಗಂತ ಅವರಿಗೆ ನಿರ್ದೇಶನ ಹೊಸದಲ್ಲ. ಈಗಾಗಲೇ ಅವರು ತೆಲುಗು-ತಮಿಳಿನಲ್ಲಿ ಚಿತ್ರ ನಿರ್ದೇಶನ ಮಾಡಿದ್ದು, ಇದೀಗ ಮೊದಲ ಬಾರಿಗೆ ಕನ್ನಡದಲ್ಲಿ ಚಿತ್ರ ನಿರ್ದೇಶನಕ್ಕೆ ಕೈಹಾಕಿದ್ದಾರೆ.

ಈ ಬಾರಿ, ಅವರು ತಮ್ಮ ಮಗನನ್ನು ಕನ್ನಡದಲ್ಲಿ ಪರಿಚಯಿಸುತ್ತಿರುವುದಷ್ಟೇ ಅಲ್ಲ, ಆತನನ್ನು ಅವರೇ ನಿರ್ದೇಶನ ಮಾಡುವುದಕ್ಕೆ ಮುಂದಾಗಿದ್ದಾರೆ. ಚರಣ್ ರಾಜ್ ಅವರ ದ್ವಿತೀಯ ಪುತ್ರ ದೇವ್ ಚರಣ್ ರಾಜ್ ಈ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಈ ಹಿಂದೆ ದೇವ್ ಅಭಿನಯದಲ್ಲಿ ಚರಣ್‍ ರಾಜ್‍, ತಮಿಳಿನಲ್ಲಿ ‘ಕುಪ್ಪನ್‍’ ಎಂಬ ಚಿತ್ರ ನಿರ್ದೇಶಿಸುವ ಮೂಲಕ ಆತನನ್ನು ಪರಿಚಯಿಸಿದ್ದರು. ಈಗ ಅವರು ತಮ್ಮ ಮಗನನ್ನು ಕನ್ನಡದಲ್ಲಿ ಪರಿಚಯಿಸುತ್ತಿದ್ದಾರೆ.

ಚರಣ್ ರಾಜ್ ನಿರ್ದೇಶಿಸಲಿರುವ ಹೊಸ ಚಿತ್ರವು ಮಾರ್ಚ್ ಅಂತ್ಯದಲ್ಲಿ ಆರಂಭವಾಗಲಿದೆ. ಕನ್ನಡ, ತಮಿಳು, ತೆಲುಗು ಮೂರು ಭಾಷೆಗಳಲ್ಲಿ ಈ ಚಿತ್ರ ಮೂಡಿಬರಲಿದ್ದು, ABCR ಫಿಲಂ ಫ್ಯಾಕ್ಟರಿ ಬ್ಯಾನರ್ ನಲ್ಲಿ ಅಶ್ವಥ್ ಬಳಗೆರೆ ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

ಬಹುಭಾಷಾ ನಟ ಕಿಶೋರ್ ಸಹ ಈ ಚಿತ್ರದಲ್ಲಿ ನಟಿಸಲಿದ್ದು, ಸಾಗರ್ ಗುರುರಾಜ್ ಸಂಗೀತ ನಿಹಾಗೂ ಪೃಥ್ವಿ ಛಾಯಾಗ್ರಹಣವಿರುವ ಈ ಚಿತ್ರದ ಪಾರ್ತವರ್ಗದ ಆಯ್ಕೆ ಆಗುತ್ತಿದೆ.

ಈ ಚಿತ್ರದ ಕುರಿತು ಮಾತನಾಡುವ ಚರಣ್‍ ರಾಜ್‍, ‘ಇದೊಂದು ಮರ್ಡರ್ ಮಿಸ್ಟರಿ ಕಥಾಹಂದರ ಹೊಂದಿರುವ ಚಿತ್ರ. ನಾನೇ ಚಿತ್ರಕಥೆ ಬರೆದು ನಿರ್ದೇಶಿಸುತ್ತಿದ್ದೇನೆ. ಈ ಚಿತ್ರದ ಬಹುತೇಕ ಚಿತ್ರೀಕರಣ ಕಾಲೇಜ್‍ನಲ್ಲೇ ನಡೆಯಲಿದ್ದು, ಕಾಲೇಜ್ ರಜಾ ಶುರುವಾದ ತಕ್ಷಣ ನಮ್ಮ ಚಿತ್ರದ ಚಿತ್ರೀಕರಣ ಸಹ ಆರಂಭವಾಗಲಿದೆ. ಕನ್ನಡದ ಚಿತ್ರೀಕರಣ ಬೆಂಗಳೂರಿನಲ್ಲಿ, ತಮಿಳಿನ ಚಿತ್ರೀಕರಣ ಪಾಂಡಿಚೇರಿ ಹಾಗೂ ಕಡಲೂರಿನಲ್ಲಿ ಮತ್ತು ತೆಲುಗು ಭಾಷೆಯ ಚಿತ್ರೀಕರಣ ಹೊಂಗನೂರು ಮುಂತಾದ ಕಡೆ ನಡೆಯಲಿದೆ. ಈ ಚಿತ್ರದ ಮೂಲಕ ನನ್ನ ದ್ವಿತೀಯ ಪುತ್ರ ದೇವ್ ಚರಣ್ ರಾಜ್ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾನೆ. ನನಗೆ ತೋರಿದ ಪ್ರೀತಿ ಹಾಗೂ ನೀಡಿದ ಪ್ರೋತ್ಸಾಹವನ್ನು ಮಗನಿಗೂ ಕೊಡಿ’ ಮನವಿ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

50 mins ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

3 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

4 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

4 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

7 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

8 hours ago