ಮುಂಬೈ: ಚೆಕ್ ಬೌನ್ಸ್ ಪ್ರಕರಣದಲ್ಲಿ ತೆಲುಗು ನಿರ್ದೇಶಕ ರಾಮ್ಗೋಪಾಲ್ ವರ್ಮಾ ಅವರನ್ನು ಮುಂಬೈನ ಸ್ಥಳೀಯ ನ್ಯಾಯಾಲಯ ದೋಷಿ ಎಂದು ಘೋಷಿಸಿದ್ದು, 3 ತಿಂಗಳ ಒಳಗಾಗಿ ಹಣ ಪಾವತಿಸದಿದ್ದರೆ 3 ತಿಂಗಳು ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.
2018ರಲ್ಲಿ ಮುಂಬೈನಲ್ಲಿ ರಾಮ್ಗೋಪಾಲ್ ವರ್ಮಾ ವಿರುದ್ಧ ಮಹೇಶ್ಚಂದ್ರ ಮಿಶ್ರಾ ಎನ್ನುವವರು ಚೆಕ್ ಬೌನ್ಸ್ ದೂರು ದಾಖಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಹಲವು ಬಾರಿ ನೋಟಿಸ್ ನೀಡಿತ್ತು. ಆದರೂ ಅವರು ಹಾಜರಾಗಿರಲಿಲ್ಲ.
ಈ ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿದೆ. ರಾಮಗೋಪಾಲ್ ವರ್ಮಾ ಅವರು ಮಿಶ್ರಾ ಅವರಿಗೆ 3.72 ಲಕ್ಷ ರೂಪಾಯಿ ಪರಿಹಾರ ಕೊಡುವಂತೆ ಆದೇಶಿಸಿದೆ. ಒಂದು ವೇಳೆ 3 ತಿಂಗಳ ಒಳಗಾಗಿ ಹಣ ಪಾವತಿಸದೇ ಇದ್ದರೆ 3 ತಿಂಗಳು ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಆದೇಶದಲ್ಲಿ ಹೇಳಿದೆ.
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…