ಮನರಂಜನೆ

‘ಜೋಡೆತ್ತು’ ಜತೆ ಬಂದ ಚಿಕ್ಕಣ್ಣ: ಮೂರು ಭಾಷೆಗಳಲ್ಲಿ ಮಹೇಶ್‍ ಸಿನಿಮಾ

ಚಿಕ್ಕಣ್ಣ ಅಭಿನಯದಲ್ಲಿ ‘ಅಯೋಗ್ಯ’ ಖ್ಯಾತಿಯ ಮಹೇಶ್‍ ಒಂದು ಚಿತ್ರವನ್ನು ನಿರ್ದೇಶಿಸುತ್ತಿದ್ದು, ಆ ಚಿತ್ರವನ್ನು ಸೋಮಶೇಖರ್ (ಕಟ್ಟಿಗೇನಹಳ್ಳಿ) ನಿರ್ಮಿಸುತ್ತಿದ್ದಾರೆ ಎಂಬ ಸುದ್ದಿ ಕೆಲವು ತಿಂಗಳುಗಳ ಹಿಂದೆ ಕೇಳಿಬಂದಿತ್ತು. ಆ ಚಿತ್ರ ಭಾನುವಾರ ಸೆಟ್ಟೇರಿದೆ.

ನಿರ್ದೇಶಕ-ನಿರ್ಮಾಪಕ ಆರ್.ಚಂದ್ರು ಚಿತ್ರದ ಮೊದಲ ದೃಶ್ಯಕ್ಕೆ ಕ್ಯಾಮೆರಾ ಸ್ವಿಚ್‍ ಆನ್‍ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರೆ, ಶರಣ್ ಆರಂಭ ಫಲಕ ತೋರಿಸಿ, ಟೈಟಲ್ ಟೀಸರ್ ಬಿಡುಗಡೆ ಮಾಡಿದರು. ಚಿತ್ರಕ್ಕೆ ‘ಜೋಡೆತ್ತು’ ಎಂಬ ಹೆಸರನ್ನು ಇಡಲಾಗಿದೆ.

ಸದ್ಯ ಚಿಕ್ಕಣ್ಣ ಹಾಗೂ ತೆಲುಗಿನ ಸುನಿಲ್ ಕಾಣಿಸಿಕೊಂಡಿರುವ ಟೈಟಲ್ ಟೀಸರ್ ಹರಿಬಿಡಲಾಗಿದ್ದು, ಡಿ ಬೀಟ್ಸ್ ಯೂಟ್ಯೂಬ್ ಚಾನಲ್‌ನಲ್ಲಿ ಬಿಡುಗಡೆಯಾಗಿದೆ. ಕನ್ನಡ ಸೇರಿದಂತೆ ತಮಿಳು ಹಾಗೂ ತೆಲುಗಿನಲ್ಲಿ ಈ ಸಿನಿಮಾ ತಯಾರಾಗುತ್ತಿದ್ದು, ಆಯಾ ಭಾಷೆಯ ಕಲಾವಿದರು ಈ ಸಿನಿಮಾದಲ್ಲಿ ನಟಿಸಲಿದ್ದಾರಂತೆ.

ಇದು 80ರ ದಶಕದ ಕಾಲಘಟ್ಟದ ಸಿನಿಮಾ ಎನ್ನುವ ಚಿಕ್ಕಣ್ಣ, ‘ನಿಜವಾದ ‘ಜೋಡೆತ್ತು’ ಯಾರೆಂಬುದನ್ನು ಸದ್ಯದಲ್ಲೇ ತಿಳಿಸುತ್ತೇವೆ. ಇದು ನನ್ನ ವೃತ್ತಿಜೀವನದಲ್ಲೇ ದೊಡ್ಡ ಬಜೆಟ್‌ನ ಸಿನಿಮಾ. ಹಳ್ಳಿಯಲ್ಲಿ ಶುರುವಾಗಿ ಹಳ್ಳಿಯಲ್ಲೇ ಮುಗಿಯುವ ಸಿನಿಮಾ. ಫ್ಯಾಮಿಲಿ ಸೆಂಟಿಮೆಂಟ್, ಕಾಮಿಡಿ, ಆಕ್ಷನ್ ಎಲ್ಲಾ ಅಂಶಗಳೂ ಕೂಡಿರುವ ಸಿನಿಮಾವಿದು. ನವೆಂಬರ್‌ನಿಂದ ಚಿತ್ರೀಕರಣ ಶುರುವಾಗಲಿದೆ’ ಎಂದರು.

ನಿರ್ದೇಶಕ ಮಹೇಶ್‍ ಮಾತನಾಡಿ, ‘ಈ ಚಿತ್ರದಲ್ಲಿ ಚಿಕ್ಕಣ್ಣ ಅವರ ಪಾತ್ರ ಹಾಗೂ ಗೆಟಪ್ ಎರಡೂ ಭಿನ್ನವಾಗಿದೆ. ಕಥೆಯಲ್ಲಿ ಗಟ್ಟಿತನವಿದೆ. ಇದು ಪಕ್ಕಾ ದೇಸಿ ಸೊಗಡಿನಲ್ಲಿ ತಯಾರಾಗುತ್ತಿರುವ ಸಿನಿಮಾ. ನಾನೂ ಮಂಡ್ಯ ಸೀಮೆಯಿಂದ ಬಂದಿರುವುದರಿಂದ ಅಲ್ಲಿನ ಸೊಗಡನ್ನು ಈ ಸಿನಿಮಾದಲ್ಲಿ ಸಾಧ್ಯವಾದಷ್ಟೂ ಕಟ್ಟಿಕೊಡಲು ಪ್ರಯತ್ನಿಸುತ್ತೇನೆ’ ಎಂದರು.

ಆಕಾಶ್ ಎಂಟರ್‌ಪ್ರೈಸಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಮೂರನೇ ಚಿತ್ರವಿದು. ಈ ಚಿತ್ರಕ್ಕೆ ವಿ.ಹರಿಕೃಷ್ಣ ಐದು ಹಾಡುಗಳನ್ನು ಸಂಯೋಜಿಸಲಿದ್ದಾರೆ. ಸುಧಾಕರ್ ಎಸ್. ರಾಜ್ ‘ಜೋಡೆತ್ತು’ ಛಾಯಾಗ್ರಹಣ ಮಾಡಿದರೆ, ಮಾಸ್ತಿ, ರಾಜಶೇಖರ್ ಹಾಗೂ ರಘು ನಿಡುವಳ್ಳಿ ಈ ಚಿತ್ರಕ್ಕೆ ಸಂಭಾಷಣೆ ಬರೆಯುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕ್ಯಾತನಹಳ್ಳಿಯಲ್ಲಿ ಅರ್ಧಕ್ಕೆ ನಿಂತ ಕಾಮಗಾರಿಗಳು

ಮಹೇಶ್ ಕರೋಠಿ ಕಿಕ್ಕೇರಿ: ಇಲ್ಲಿಗೆ ಸಮೀಪದ ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕ್ಯಾತನಹಳ್ಳಿ ಗ್ರಾಮದಲ್ಲಿ ಕಳೆದ ೨-೩ ವರ್ಷಗಳಿಂದ ಹಲವು…

4 hours ago

ಓದುಗರ ಪತ್ರ: ಬಂದರು ಎಂದರೆ…

ನೆಂಟರಿಷ್ಟರು ಮನೆಗೆ ಬಂದರು ಎಂದರೆ... ಏನು ಎತ್ತ, ಹೇಗೆ ಅವರ ಆತಿಥ್ಯ? ಇಂಥ ಸಂಕಷ್ಟಗಳಿಗೆಲ್ಲಾ ಕಾರಣ,ಬಂದ್ ಆಗಿರುವ ಆ ಹಾರ್ಮುಜ್…

4 hours ago

ಓದುಗರ ಪತ್ರ: ರಸ್ತೆ ಡುಬ್ಬಗಳಿಗೆ ಬಿಳಿ ಬಣ್ಣ ಬಳಿಯಿರಿ

ಮೈಸೂರಿನಿಂದ ಎಚ್.ಡಿ.ಕೋಟೆ ಮಾರ್ಗದಲ್ಲಿ ಬರುವ ಮಾದಾಪುರ ಗ್ರಾಮದಿಂದ ಕೆ. ಬೆಳತ್ತೂರು ಹಾಗೂ ಲೆಂಕೆ ಗ್ರಾಮದವರೆಗೂ ರಸ್ತೆ ಡಾಂಬರೀಕರಣವಾಗಿದೆ. ಈ ರಸ್ತೆಯಲ್ಲಿ…

4 hours ago

ಓದುಗರ ಪತ್ರ: ರಾಜಕೀಯದ ಪ್ರಚಾರ ಸಾಧನವಾಗುತ್ತಿರುವ ಜಾತ್ರೆಗಳು

ಜಾತ್ರೆಗಳು ಹಾಗೂ ಹಬ್ಬಗಳು ಗ್ರಾಮದ ಎಲ್ಲಾ ಜನರು ಒಟ್ಟುಗೂಡಿ ಮಾಡುವ ಕಾರ್ಯಕ್ರಮವಾಗಿವೆ. ಇದರಲ್ಲಿ ಜನರ ಒಗ್ಗಟ್ಟು, ಪರಸ್ಪರ ಸಹಕಾರ ಕಾಣುತ್ತೇವೆ.…

4 hours ago

ಓದುಗರ ಪತ್ರ: ಸೆಸ್ಕ್ ಯುಜಿ ಕೇಬಲ್ ಮುಂಜಾಗ್ರತೆ ವಹಿಸಿ

ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್)ದಿಂದ ಅಂಡರ್ ಗ್ರೌಂಡ್ ಕೇಬಲ್ ಅನ್ನು ಅಳಡಿಸುತ್ತಿದ್ದು, ಕಾಮಗಾರಿಯ…

4 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಕೆನೆಪದರ ಪರಿಶಿಷ್ಟರಿಗೆ ಬೇಡವೆನ್ನುವ ಕೇಂದ್ರಕ್ಕೆ ಮತ್ತೆ ಸುಪ್ರೀಂ ತಾಕೀತು

ಮೀಸಲಾತಿ ವ್ಯವಸ್ಥೆ ಜಾರಿ ಸಂಬಂಧ ಪರ ಮತ್ತು ವಿರೋಧದ ಚರ್ಚೆ ಹಾದಿ ಬೀದಿ, ಹಳ್ಳಿಯ ಪಂಚಾಯಿತಿ ಕಟ್ಟೆಗಳಲ್ಲಿ ಮತ್ತು ಖಾಸಗಿಯಾಗಿ…

4 hours ago