ಮನರಂಜನೆ

‘ಜೀನಿಯಸ್ ಮುತ್ತ’ನ ಜೊತೆಯಾದ ‘ಚಿನ್ನಾರಿ ಮುತ್ತ’

ವಿಜಯ್‍ ರಾಘವೇಂದ್ರ ಅವರಿಗೆ ದೊಡ್ಡ ಜನಪ್ರಿಯತೆ ತಂದುಕೊಟ್ಟ ಚಿತ್ರವೆಂದರೆ ಅದು ‘ಚಿನ್ನಾರಿ ಮುತ್ತ’. ನಾಗಾಭರಣ ನಿರ್ದೇಶನದ ಈ ಚಿತ್ರವು ಜನರ ಮನಸ್ಸಿನಲ್ಲಿ ಅದೆಷ್ಟು ಹಸಿರಾಗಿದೆಯೆಂದರೆ, ಈಗಲೂ ವಿಜಯ್‍ ರಾಘವೇಂದ್ರ ಅವರನ್ನು ‘ಚಿನ್ನಾರಿ ಮುತ್ತ’ನಾಗಿಯೇ ಪ್ರೀತಿಸುತ್ತಾರೆ. ಈಗ ಆ ‘ಚಿನ್ನಾರಿ ಮುತ್ತ’, ‘ಜೀನಿಯಸ್‍ ಮುತ್ತ’ನಿಗೆ ಬೆಂಬಲವಾಗಿ ನಿಂತಿದ್ದಾರೆ.

ಹಿರಿಯ ನಿರ್ದೇಶಕ ಟಿ.ಎಸ್. ನಾಗಾಭರಣ ಅವರ ಪತ್ನಿ ನಾಗಿಣಿ ಭರಣ ಸದ್ದಿಲ್ಲದೆ ಒಂದು ಚಿತ್ರವನ್ನು ನಿರ್ದೇಶಿಸಿದ್ದು, ಚಿತ್ರಕ್ಕೆ ‘ಜೀನಿಯಸ್‍ ಮುತ್ತ’ ಎಂಬ ಹೆಸರಿಡಲಾಗಿದೆ. ಜಿ.ಎಸ್ ಲತಾ ಜೈಪ್ರಕಾಶ್ ನಿರ್ಮಾಣದ ಈ ಚಿತ್ರದಲ್ಲಿ ‘ಜೀನಿಯಸ್ ಮುತ್ತ’ನಾಗಿ ಮಾಸ್ಟರ್ ಶ್ರೇಯಸ್ ಜೈಪ್ರಕಾಶ್ ನಟಿಸಿದ್ದಾರೆ. ವಿಶೇಷ ಪಾತ್ರದಲ್ಲಿ ವಿಜಯ್‍ ರಾಘವೇಂದ್ರ ಸಹ ಅಭಿನಯಿಸಿದ್ದಾರೆ. ಈ ಚಿತ್ರದ ಚಿತ್ರೀಕರಣ ಮುಗಿದಿದ್ದು, ಆಗಸ್ಟ್ ತಿಂಗಳಲ್ಲಿ ಬಿಡುಗಡೆಯಾಗಲಿದೆ.

ನಾಗಿಣಿ ಭರಣ ಅವರಿಗೆ ಪರಿಚಯಸ್ಥರೆಲ್ಲರೂ ಹಲವು ವರ್ಷಗಳಿಂದ ನಿರ್ದೇಶನ ಮಾಡುವಂತೆ ಒತ್ತಾಯಿಸುತ್ತಲೇ ಇದ್ದರಂತೆ. ‘ಒಮ್ಮೆ ನಿರ್ಮಾಪಕಿ ಲತಾ ತಮ್ಮ ಮಗನನ್ನು ಚಿತ್ರರಂಗಕ್ಕೆ ಪರಿಚಯಿಸುತ್ತಿದ್ದೇನೆ, ನೀವೇ ಚಿತ್ರ ನಿರ್ದೇಶಿಸಬೇಕೆಂದರು. ಅವರ ಒತ್ತಾಯಕ್ಕೆ ಮಣಿದು ನನ್ನ ಸ್ನೇಹಿತರ ತಂಡದೊಂದಿಗೆ ಸೇರಿ ಈ ಚಿತ್ರದ ಕಥೆ ಮಾಡಿದೆ. ಈ ಚಿತ್ರದ ಚಿತ್ರೀಕರಣ ಹೆಚ್ಚಾಗಿ ಬಿಳಿಗಿರಿರಂಗನ ಬೆಟ್ಟದಲ್ಲಿ ನಡೆದಿದೆ. ಈಗಾಗಲೇ ಒಂದು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಹಾಗೂ ವಿದೇಶಗಳಲ್ಲಿ ನಮ್ಮ ಚಿತ್ರದ ಪ್ರದರ್ಶನವಾಗಿದೆ. ನೋಡಿದವರು ಮೆಚ್ಚುಗೆ ಮಾತುಗಳಾಡಿದ್ದಾರೆ. ಆಗಸ್ಟ್ ನಲ್ಲಿ ಚಿತ್ರವನ್ನು ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ’ ಎಂದು ನಾಗಿಣಿ ಭರಣ ತಿಳಿಸಿದರು.

ಒಬ್ಬ ಸಾಮಾನ್ಯ ಹುಡುಗ ತನ್ನ ಬುದ್ಧಿಶಂತಿಕೆಯಿಂದ ದೊಡ್ಡದನ್ನು ಸಾಧಿಸುತ್ತಾನೆ ಎಂದು ಸಾರುವ ಈ ಚಿತ್ರದಲ್ಲಿ ‘ಜೀನಿಯಸ್‍ ಮುತ್ತ’ನಾಗಿ ಶ್ರೇಯಸ್‍ ನಟಿಸಿದ್ದಾರೆ. ‘ನಾನು ಭರಣ ಸರ್ ಅವರ ಬಳಿ ನಟನೆ ಕಲಿತಿದ್ದೇನೆ. ಆನಂತರ ಅಮ್ಮನಿಗೆ ನಾನು ನಟಿಸಬೇಕೆಂದು ಆಸೆಯಾಯಿತು. ಈ ಚಿತ್ರದಲ್ಲಿ ‘ಜೀನಿಯಸ್ ಮುತ್ತ’ನಾಗಿ ಅಭಿನಯಿಸಿದ್ದೇನೆ’ ಎಂದರು.

ನಾಗಾಭರಣ ಅವರಿಗೆ ತಾನು ಯಾವಾಗಲೂ ಆಭಾರಿ ಎನ್ನುವ ವಿಜಯ್‍ ರಾಘವೇಂದ್ರ, ‘ನನ್ನನ್ನು ಎಲ್ಲರೂ ವಿಜಯ ರಾಘವೇಂದ್ರ ಅನ್ನುವುದಕ್ಕಿಂತ ‘ಚಿನ್ನಾರಿ ಮುತ್ತ’ ಎನ್ನುವುದೇ ಹೆಚ್ಚು. ಅಂತಹ ಸೂಪರ್ ಹಿಟ್ ಚಿತ್ರದಲ್ಲಿ ನಟಿಸಲು ನನಗೆ ಅವಕಾಶ ನೀಡಿದವರು ನಾಗಾಭರಣ ಸರ್. ಈಗ ನಾಗಿಣಿ ಭರಣ ಅವರ ಮೊದಲ ನಿರ್ದೇಶನದಲ್ಲೂ ನಾನು ನಟಿಸಿರುವುದು ಖುಷಿಯಾಗಿದೆ’ ಎಂದು ವಿಜಯ ರಾಘವೇಂದ್ರ ತಿಳಿಸಿದರು.

‘ಜೀನಿಯಸ್‍ ಮುತ್ತ’ ಚಿತ್ರದಲ್ಲಿ ಮಾಸ್ಟರ್ ಶ್ರೇಯಸ್ಸ, ವಿಜಯ್ ರಾಘವೇಂದ್ರ, ಟಿ.ಎಸ್. ನಾಗಾಭರಣ, ಗಿರಿಜಾ ಲೋಕೇಶ್, ಸುಂದರರಾಜ್, ಪನ್ನಗಾಭರಣ ಮುಂತಾದವರು ಚಿತ್ರದಲ್ಲಿ ನಟಿಸಿದ್ದಾರೆ. ಚಿತ್ರಕ್ಕೆ ಬಾಪು ಪದ್ಮನಾಭ ಸಂಗೀತ ಸಂಯೋಜಿಸಿದ್ದಾರೆ.

ಭೂಮಿಕಾ

Recent Posts

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾವು: 10ಕ್ಕೂ ಹೆಚ್ಚು ಮಂದಿಗೆ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ…

10 mins ago

ಒಳಮೀಸಲಾತಿ ಹಂಚಿಕೆಗೆ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

ಬೆಂಗಳೂರು: ಒಳಮೀಸಲಾತಿ ಬಗ್ಗೆ ಹಲವು ವರ್ಷಗಳಿಂದ ಇದ್ದ ಗೊಂದಲಗಳಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೆರೆ ಎಳೆದಿದೆ. ಸಿಎಂ ಸಿದ್ದರಾಮಯ್ಯ…

4 hours ago

ಸೋಮವಾರಪೇಟೆ: ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ

ಸೋಮವಾರಪೇಟೆ: ತಾಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿನ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.…

5 hours ago

ಎಎಪಿ ತೊರೆದು ಬಿಜೆಪಿ ಸೇರಿದ 7 ರಾಜ್ಯಸಭಾ ಸದಸ್ಯರು

ನವದೆಹಲಿ: ಆಮ್‌ ಆದ್ಮಿ ಪಕ್ಷಕ್ಕೆ ಬಿಗ್‌ ಶಾಕ್‌ ಎದುರಾಗಿದ್ದು, ರಾಘವ್‌ ಚಡ್ಡಾ ಸೇರಿದಂತೆ ಏಳು ರಾಜ್ಯಸಭಾ ಸಂಸದರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…

5 hours ago

ಮೈಸೂರು| ಚಲುವಾಂಬ ಆಸ್ಪತ್ರೆಗೆ ಸಂಸದ ಯದುವೀರ್‌ ಒಡೆಯರ್‌ ದಿಢೀರ್‌ ಭೇಟಿ

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ದಿಢೀರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು.…

6 hours ago

ಕೃಷಿ ಕ್ಷೇತ್ರದಲ್ಲಿನ ಹೊಸ ಬದಲಾವಣೆಗಳು ಪ್ರತಿ ರೈತರನ್ನೂ ತಲುಪಬೇಕು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೃಷಿ ಕ್ಷೇತ್ರದಲ್ಲಿನ ಹೊಸ ಬದಲಾವಣೆಗಳು ಪ್ರತಿ ರೈತರನ್ನೂ ತಲುಪಬೇಕು. ಈ ದಿಸೆಯಲ್ಲಿ ಎಫ್‌ಕೆಸಿಸಿಐನ ಪ್ರಯತ್ನ ಉತ್ತಮವಾಗಿದೆ ಎಂದು ಮುಖ್ಯಮಂತ್ರಿ…

6 hours ago