ಮನರಂಜನೆ

‘ಜೀನಿಯಸ್ ಮುತ್ತ’ನ ಜೊತೆಯಾದ ‘ಚಿನ್ನಾರಿ ಮುತ್ತ’

ವಿಜಯ್‍ ರಾಘವೇಂದ್ರ ಅವರಿಗೆ ದೊಡ್ಡ ಜನಪ್ರಿಯತೆ ತಂದುಕೊಟ್ಟ ಚಿತ್ರವೆಂದರೆ ಅದು ‘ಚಿನ್ನಾರಿ ಮುತ್ತ’. ನಾಗಾಭರಣ ನಿರ್ದೇಶನದ ಈ ಚಿತ್ರವು ಜನರ ಮನಸ್ಸಿನಲ್ಲಿ ಅದೆಷ್ಟು ಹಸಿರಾಗಿದೆಯೆಂದರೆ, ಈಗಲೂ ವಿಜಯ್‍ ರಾಘವೇಂದ್ರ ಅವರನ್ನು ‘ಚಿನ್ನಾರಿ ಮುತ್ತ’ನಾಗಿಯೇ ಪ್ರೀತಿಸುತ್ತಾರೆ. ಈಗ ಆ ‘ಚಿನ್ನಾರಿ ಮುತ್ತ’, ‘ಜೀನಿಯಸ್‍ ಮುತ್ತ’ನಿಗೆ ಬೆಂಬಲವಾಗಿ ನಿಂತಿದ್ದಾರೆ.

ಹಿರಿಯ ನಿರ್ದೇಶಕ ಟಿ.ಎಸ್. ನಾಗಾಭರಣ ಅವರ ಪತ್ನಿ ನಾಗಿಣಿ ಭರಣ ಸದ್ದಿಲ್ಲದೆ ಒಂದು ಚಿತ್ರವನ್ನು ನಿರ್ದೇಶಿಸಿದ್ದು, ಚಿತ್ರಕ್ಕೆ ‘ಜೀನಿಯಸ್‍ ಮುತ್ತ’ ಎಂಬ ಹೆಸರಿಡಲಾಗಿದೆ. ಜಿ.ಎಸ್ ಲತಾ ಜೈಪ್ರಕಾಶ್ ನಿರ್ಮಾಣದ ಈ ಚಿತ್ರದಲ್ಲಿ ‘ಜೀನಿಯಸ್ ಮುತ್ತ’ನಾಗಿ ಮಾಸ್ಟರ್ ಶ್ರೇಯಸ್ ಜೈಪ್ರಕಾಶ್ ನಟಿಸಿದ್ದಾರೆ. ವಿಶೇಷ ಪಾತ್ರದಲ್ಲಿ ವಿಜಯ್‍ ರಾಘವೇಂದ್ರ ಸಹ ಅಭಿನಯಿಸಿದ್ದಾರೆ. ಈ ಚಿತ್ರದ ಚಿತ್ರೀಕರಣ ಮುಗಿದಿದ್ದು, ಆಗಸ್ಟ್ ತಿಂಗಳಲ್ಲಿ ಬಿಡುಗಡೆಯಾಗಲಿದೆ.

ನಾಗಿಣಿ ಭರಣ ಅವರಿಗೆ ಪರಿಚಯಸ್ಥರೆಲ್ಲರೂ ಹಲವು ವರ್ಷಗಳಿಂದ ನಿರ್ದೇಶನ ಮಾಡುವಂತೆ ಒತ್ತಾಯಿಸುತ್ತಲೇ ಇದ್ದರಂತೆ. ‘ಒಮ್ಮೆ ನಿರ್ಮಾಪಕಿ ಲತಾ ತಮ್ಮ ಮಗನನ್ನು ಚಿತ್ರರಂಗಕ್ಕೆ ಪರಿಚಯಿಸುತ್ತಿದ್ದೇನೆ, ನೀವೇ ಚಿತ್ರ ನಿರ್ದೇಶಿಸಬೇಕೆಂದರು. ಅವರ ಒತ್ತಾಯಕ್ಕೆ ಮಣಿದು ನನ್ನ ಸ್ನೇಹಿತರ ತಂಡದೊಂದಿಗೆ ಸೇರಿ ಈ ಚಿತ್ರದ ಕಥೆ ಮಾಡಿದೆ. ಈ ಚಿತ್ರದ ಚಿತ್ರೀಕರಣ ಹೆಚ್ಚಾಗಿ ಬಿಳಿಗಿರಿರಂಗನ ಬೆಟ್ಟದಲ್ಲಿ ನಡೆದಿದೆ. ಈಗಾಗಲೇ ಒಂದು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಹಾಗೂ ವಿದೇಶಗಳಲ್ಲಿ ನಮ್ಮ ಚಿತ್ರದ ಪ್ರದರ್ಶನವಾಗಿದೆ. ನೋಡಿದವರು ಮೆಚ್ಚುಗೆ ಮಾತುಗಳಾಡಿದ್ದಾರೆ. ಆಗಸ್ಟ್ ನಲ್ಲಿ ಚಿತ್ರವನ್ನು ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ’ ಎಂದು ನಾಗಿಣಿ ಭರಣ ತಿಳಿಸಿದರು.

ಒಬ್ಬ ಸಾಮಾನ್ಯ ಹುಡುಗ ತನ್ನ ಬುದ್ಧಿಶಂತಿಕೆಯಿಂದ ದೊಡ್ಡದನ್ನು ಸಾಧಿಸುತ್ತಾನೆ ಎಂದು ಸಾರುವ ಈ ಚಿತ್ರದಲ್ಲಿ ‘ಜೀನಿಯಸ್‍ ಮುತ್ತ’ನಾಗಿ ಶ್ರೇಯಸ್‍ ನಟಿಸಿದ್ದಾರೆ. ‘ನಾನು ಭರಣ ಸರ್ ಅವರ ಬಳಿ ನಟನೆ ಕಲಿತಿದ್ದೇನೆ. ಆನಂತರ ಅಮ್ಮನಿಗೆ ನಾನು ನಟಿಸಬೇಕೆಂದು ಆಸೆಯಾಯಿತು. ಈ ಚಿತ್ರದಲ್ಲಿ ‘ಜೀನಿಯಸ್ ಮುತ್ತ’ನಾಗಿ ಅಭಿನಯಿಸಿದ್ದೇನೆ’ ಎಂದರು.

ನಾಗಾಭರಣ ಅವರಿಗೆ ತಾನು ಯಾವಾಗಲೂ ಆಭಾರಿ ಎನ್ನುವ ವಿಜಯ್‍ ರಾಘವೇಂದ್ರ, ‘ನನ್ನನ್ನು ಎಲ್ಲರೂ ವಿಜಯ ರಾಘವೇಂದ್ರ ಅನ್ನುವುದಕ್ಕಿಂತ ‘ಚಿನ್ನಾರಿ ಮುತ್ತ’ ಎನ್ನುವುದೇ ಹೆಚ್ಚು. ಅಂತಹ ಸೂಪರ್ ಹಿಟ್ ಚಿತ್ರದಲ್ಲಿ ನಟಿಸಲು ನನಗೆ ಅವಕಾಶ ನೀಡಿದವರು ನಾಗಾಭರಣ ಸರ್. ಈಗ ನಾಗಿಣಿ ಭರಣ ಅವರ ಮೊದಲ ನಿರ್ದೇಶನದಲ್ಲೂ ನಾನು ನಟಿಸಿರುವುದು ಖುಷಿಯಾಗಿದೆ’ ಎಂದು ವಿಜಯ ರಾಘವೇಂದ್ರ ತಿಳಿಸಿದರು.

‘ಜೀನಿಯಸ್‍ ಮುತ್ತ’ ಚಿತ್ರದಲ್ಲಿ ಮಾಸ್ಟರ್ ಶ್ರೇಯಸ್ಸ, ವಿಜಯ್ ರಾಘವೇಂದ್ರ, ಟಿ.ಎಸ್. ನಾಗಾಭರಣ, ಗಿರಿಜಾ ಲೋಕೇಶ್, ಸುಂದರರಾಜ್, ಪನ್ನಗಾಭರಣ ಮುಂತಾದವರು ಚಿತ್ರದಲ್ಲಿ ನಟಿಸಿದ್ದಾರೆ. ಚಿತ್ರಕ್ಕೆ ಬಾಪು ಪದ್ಮನಾಭ ಸಂಗೀತ ಸಂಯೋಜಿಸಿದ್ದಾರೆ.

ಭೂಮಿಕಾ

Recent Posts

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

9 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

14 hours ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

14 hours ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

14 hours ago

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

19 hours ago

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಪತ್ತೆ: ಆರೋಗ್ಯ ಇಲಾಖೆಯಿಂದ ಹೈಅಲರ್ಟ್‌

ಕೋಯಿಕ್ಕೋಡ್:‌ ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್‌ ಸೋಂಕು ಹರಡಿರುವ ನಡುವೆ ನಿಫಾ ವೈರಸ್‌ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…

19 hours ago