ಮನರಂಜನೆ

ಚಿತ್ರಮಂಜರಿ | ಈ ವಾರ ತೆರೆಕಾಣುವ ಸಿನಿಮಾಗಳಿವು

ಈ ವಾರ ‘ಅಜ್ಞಾತವಾಸಿ’ ಚಿತ್ರದ ಜೊತೆಗೆ ಇನ್ನೂ ಎರಡು ಚಿತ್ರಗಳು ಬಿಡುಗಡೆಯಾಗುತ್ತಿವೆ. ಒಂದು ‘ವಿದ್ಯಾಪತಿ’, ಇನ್ನೊಂದು ‘ವಾಮನ’. ‘ವಿದ್ಯಾಪತಿ’ ಒಂದು ಹಾಸ್ಯ ಪ್ರಧಾನ ಚಿತ್ರವಾಗಿದ್ದು, ಧನಂಜಯ ಇದರ ನಿರ್ಮಾಪಕರು. ನಾಗಭೂಷಣ್ ಮತ್ತು ಮಲೈಕಾ ವಸುಪಾಲ್ ನಾಯಕ – ನಾಯಕಿಯರು. ಧನಂಜಯ್ ಮತ್ತು ಗರುಡ ರಾಮ್ ವಿಶೇಷ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈ ಹಿಂದೆ ‘ಇಕ್ಕಟ್’ ನಿರ್ದೇಶಿಸಿದ್ದ ಇಶಾಂ ಮತ್ತು ಹಸೀಂಖಾನ್, ‘ವಿದ್ಯಾಪತಿ’ ಚಿತ್ರವನ್ನು ನಿರ್ದೇಶಿಸಿದ್ದಾರೆ. ನಿರ್ದೇಶನದ ಜೊತೆಗೆ ಕಥೆ-ಚಿತ್ರಕಥೆ ಬರೆದು, ಸಂಕಲನದ ಜವಾಬ್ದಾರಿಯನ್ನೂ ತಾವೇ ಹೊತ್ತುಕೊಂಡಿದ್ದಾರೆ. ಈ ಚಿತ್ರಕ್ಕೆ ಲವಿತ್ ಛಾಯಾಗ್ರಹಣ, ಡಾಸ್ ಮೋಡ್ ಸಂಗೀತ ಸಂಯೋಜನೆ ಇದೆ.

‘ವಾಮನ’ ಚಿತ್ರದಲ್ಲಿ ಧನ್ವೀರ್ ಮತ್ತು ರೀಷ್ಮಾ ಜೊತೆಗೆ ತಾರಾ, ಸಂಪತ್, ಆದಿತ್ಯ ಮೆನನ್, ಶಿವರಾಜ್ ಕೆ. ಆರ್. ಪೇಟೆ, ಅವಿನಾಶ್, ಅಚ್ಯುತ್ ಕುಮಾರ್, ಕಾಕ್ರೋಚ್ ಸುಧಿ, ಭೂಷಣ್ ಮುಂತಾದವರು ಅಭಿನಯಿಸಿದ್ದಾರೆ. ಮಹೇಂದ್ರ ಸಿಂಹ ಛಾಯಾಗ್ರಹಣ ಮತ್ತು ಅಜನೀಶ್ ಶ್ಲೋಕನಾಥ್ ಸಂಗೀತ ಸಂಯೋಜನೆ ಇದೆ.

 

ಆಂದೋಲನ ಡೆಸ್ಕ್

Recent Posts

ಹವಾಮಾನ ಏರುಪೇರಿನಿಂದಾಗಿ ಕಾಳುಮೆಣಸಿಗೂ ಕಂಟಕ

ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್‌ ಡಿಸೋಜ ಮಡಿಕೇರಿ: ಈ ಬಾರಿಯ…

23 seconds ago

ಅವಳಿ ತಾಲ್ಲೂಕುಗಳಲ್ಲಿ ಭತ್ತದ ಕಟಾವು ಜೋರು

ಭೇರ್ಯ ಮಹೇಶ್‌ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…

13 mins ago

ಗಬ್ಬೆದ್ದು ನಾರುತ್ತಿರುವ ಚರಂಡಿಗಳು, ಸಾಂಕ್ರಾಮಿಕ ರೋಗದ ಭೀತಿ

ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ…

19 mins ago

ಸರಗೂರಿನಲ್ಲಿ ಬೀದಿ ನಾಯಿಗಳ ಹಾವಳಿ : ತತ್ತರಿಸಿದ ಜನತೆ

ಸರಗೂರು : ಪಟ್ಟಣ ಪಂಚಾಯಿತಿ ವ್ಯಾಪ್ತಿ ಯಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನ ಸಾಮಾನ್ಯರು ತತ್ತರಿಸಿ ಆತಂಕದಲ್ಲಿದ್ದರೂ ನಿಯಂ ತ್ರಣ…

27 mins ago

ಕುಕ್ಕರಹಳ್ಳಿ ಕೆರೆ ಸ್ವಚ್ಛತೆಗೆ ಗೋವಾದಿಂದ ದೋಣಿ ಖರೀದಿ

ನುರಿತ ತಜ್ಞರ ತಂಡದಿಂದ ಕೆರೆ ಸ್ವಚ್ಛತೆ ಆರಂಭಿಸಲು ತಯಾರಿ ಮೈಸೂರು : ಪ್ರವಾಸಿಗರು ಹಾಗೂ ವಾಯುವಿಹಾರಿಗಳ ನೆಚ್ಚಿನ ತಾಣವಾದ ಕುಕ್ಕರಹಳ್ಳಿ…

37 mins ago

ಓದುಗರ ಪತ್ರ | ಸೂಚನಾ ಫಲಕಗಳನ್ನು ಸರಿಪಡಿಸಿ

ಮೈಸೂರು ನಗರದ ಪ್ರತಿಯೊಂದೂ ವಾರ್ಡ್‌ನ ಪ್ರತಿ ಮಾರ್ಗದಲ್ಲೂ ಮೈಸೂರು ಮಹಾ ನಗರ ಪಾಲಿಕೆಯಿಂದ ವಾರ್ಡ್ ಸಂಖ್ಯೆ, ವಾರ್ಡ್‌ನ್ನು ಪ್ರತಿನಿಧಿಸುವ ಪಾಲಿಕೆ…

40 mins ago