ಈ ವಾರ ‘ಅಜ್ಞಾತವಾಸಿ’ ಚಿತ್ರದ ಜೊತೆಗೆ ಇನ್ನೂ ಎರಡು ಚಿತ್ರಗಳು ಬಿಡುಗಡೆಯಾಗುತ್ತಿವೆ. ಒಂದು ‘ವಿದ್ಯಾಪತಿ’, ಇನ್ನೊಂದು ‘ವಾಮನ’. ‘ವಿದ್ಯಾಪತಿ’ ಒಂದು ಹಾಸ್ಯ ಪ್ರಧಾನ ಚಿತ್ರವಾಗಿದ್ದು, ಧನಂಜಯ ಇದರ ನಿರ್ಮಾಪಕರು. ನಾಗಭೂಷಣ್ ಮತ್ತು ಮಲೈಕಾ ವಸುಪಾಲ್ ನಾಯಕ – ನಾಯಕಿಯರು. ಧನಂಜಯ್ ಮತ್ತು ಗರುಡ ರಾಮ್ ವಿಶೇಷ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈ ಹಿಂದೆ ‘ಇಕ್ಕಟ್’ ನಿರ್ದೇಶಿಸಿದ್ದ ಇಶಾಂ ಮತ್ತು ಹಸೀಂಖಾನ್, ‘ವಿದ್ಯಾಪತಿ’ ಚಿತ್ರವನ್ನು ನಿರ್ದೇಶಿಸಿದ್ದಾರೆ. ನಿರ್ದೇಶನದ ಜೊತೆಗೆ ಕಥೆ-ಚಿತ್ರಕಥೆ ಬರೆದು, ಸಂಕಲನದ ಜವಾಬ್ದಾರಿಯನ್ನೂ ತಾವೇ ಹೊತ್ತುಕೊಂಡಿದ್ದಾರೆ. ಈ ಚಿತ್ರಕ್ಕೆ ಲವಿತ್ ಛಾಯಾಗ್ರಹಣ, ಡಾಸ್ ಮೋಡ್ ಸಂಗೀತ ಸಂಯೋಜನೆ ಇದೆ.
‘ವಾಮನ’ ಚಿತ್ರದಲ್ಲಿ ಧನ್ವೀರ್ ಮತ್ತು ರೀಷ್ಮಾ ಜೊತೆಗೆ ತಾರಾ, ಸಂಪತ್, ಆದಿತ್ಯ ಮೆನನ್, ಶಿವರಾಜ್ ಕೆ. ಆರ್. ಪೇಟೆ, ಅವಿನಾಶ್, ಅಚ್ಯುತ್ ಕುಮಾರ್, ಕಾಕ್ರೋಚ್ ಸುಧಿ, ಭೂಷಣ್ ಮುಂತಾದವರು ಅಭಿನಯಿಸಿದ್ದಾರೆ. ಮಹೇಂದ್ರ ಸಿಂಹ ಛಾಯಾಗ್ರಹಣ ಮತ್ತು ಅಜನೀಶ್ ಶ್ಲೋಕನಾಥ್ ಸಂಗೀತ ಸಂಯೋಜನೆ ಇದೆ.
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…
ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…
ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…
ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…
ರೇಣುಕಾ ನಿಡುಗುಂದಿ ಯಾವುದೇ ಒಬ್ಬ ಸರ್ವಾಧಿಕಾರಿ ಅಥವಾ ಭ್ರಷ್ಟ ರಾಜಕಾರಣಿ ಜನರಲ್ಲಿ ತನ್ನ ಬಗ್ಗೆ ಭಯ ಹುಟ್ಟಿಸಿ ಆಡಳಿತ ನಡೆಸುತ್ತಾನೆ.…