ಈ ವಾರ ‘ಅಜ್ಞಾತವಾಸಿ’ ಚಿತ್ರದ ಜೊತೆಗೆ ಇನ್ನೂ ಎರಡು ಚಿತ್ರಗಳು ಬಿಡುಗಡೆಯಾಗುತ್ತಿವೆ. ಒಂದು ‘ವಿದ್ಯಾಪತಿ’, ಇನ್ನೊಂದು ‘ವಾಮನ’. ‘ವಿದ್ಯಾಪತಿ’ ಒಂದು ಹಾಸ್ಯ ಪ್ರಧಾನ ಚಿತ್ರವಾಗಿದ್ದು, ಧನಂಜಯ ಇದರ ನಿರ್ಮಾಪಕರು. ನಾಗಭೂಷಣ್ ಮತ್ತು ಮಲೈಕಾ ವಸುಪಾಲ್ ನಾಯಕ – ನಾಯಕಿಯರು. ಧನಂಜಯ್ ಮತ್ತು ಗರುಡ ರಾಮ್ ವಿಶೇಷ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈ ಹಿಂದೆ ‘ಇಕ್ಕಟ್’ ನಿರ್ದೇಶಿಸಿದ್ದ ಇಶಾಂ ಮತ್ತು ಹಸೀಂಖಾನ್, ‘ವಿದ್ಯಾಪತಿ’ ಚಿತ್ರವನ್ನು ನಿರ್ದೇಶಿಸಿದ್ದಾರೆ. ನಿರ್ದೇಶನದ ಜೊತೆಗೆ ಕಥೆ-ಚಿತ್ರಕಥೆ ಬರೆದು, ಸಂಕಲನದ ಜವಾಬ್ದಾರಿಯನ್ನೂ ತಾವೇ ಹೊತ್ತುಕೊಂಡಿದ್ದಾರೆ. ಈ ಚಿತ್ರಕ್ಕೆ ಲವಿತ್ ಛಾಯಾಗ್ರಹಣ, ಡಾಸ್ ಮೋಡ್ ಸಂಗೀತ ಸಂಯೋಜನೆ ಇದೆ.
‘ವಾಮನ’ ಚಿತ್ರದಲ್ಲಿ ಧನ್ವೀರ್ ಮತ್ತು ರೀಷ್ಮಾ ಜೊತೆಗೆ ತಾರಾ, ಸಂಪತ್, ಆದಿತ್ಯ ಮೆನನ್, ಶಿವರಾಜ್ ಕೆ. ಆರ್. ಪೇಟೆ, ಅವಿನಾಶ್, ಅಚ್ಯುತ್ ಕುಮಾರ್, ಕಾಕ್ರೋಚ್ ಸುಧಿ, ಭೂಷಣ್ ಮುಂತಾದವರು ಅಭಿನಯಿಸಿದ್ದಾರೆ. ಮಹೇಂದ್ರ ಸಿಂಹ ಛಾಯಾಗ್ರಹಣ ಮತ್ತು ಅಜನೀಶ್ ಶ್ಲೋಕನಾಥ್ ಸಂಗೀತ ಸಂಯೋಜನೆ ಇದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…