ಈ ವಾರ ‘ಅಜ್ಞಾತವಾಸಿ’ ಚಿತ್ರದ ಜೊತೆಗೆ ಇನ್ನೂ ಎರಡು ಚಿತ್ರಗಳು ಬಿಡುಗಡೆಯಾಗುತ್ತಿವೆ. ಒಂದು ‘ವಿದ್ಯಾಪತಿ’, ಇನ್ನೊಂದು ‘ವಾಮನ’. ‘ವಿದ್ಯಾಪತಿ’ ಒಂದು ಹಾಸ್ಯ ಪ್ರಧಾನ ಚಿತ್ರವಾಗಿದ್ದು, ಧನಂಜಯ ಇದರ ನಿರ್ಮಾಪಕರು. ನಾಗಭೂಷಣ್ ಮತ್ತು ಮಲೈಕಾ ವಸುಪಾಲ್ ನಾಯಕ – ನಾಯಕಿಯರು. ಧನಂಜಯ್ ಮತ್ತು ಗರುಡ ರಾಮ್ ವಿಶೇಷ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈ ಹಿಂದೆ ‘ಇಕ್ಕಟ್’ ನಿರ್ದೇಶಿಸಿದ್ದ ಇಶಾಂ ಮತ್ತು ಹಸೀಂಖಾನ್, ‘ವಿದ್ಯಾಪತಿ’ ಚಿತ್ರವನ್ನು ನಿರ್ದೇಶಿಸಿದ್ದಾರೆ. ನಿರ್ದೇಶನದ ಜೊತೆಗೆ ಕಥೆ-ಚಿತ್ರಕಥೆ ಬರೆದು, ಸಂಕಲನದ ಜವಾಬ್ದಾರಿಯನ್ನೂ ತಾವೇ ಹೊತ್ತುಕೊಂಡಿದ್ದಾರೆ. ಈ ಚಿತ್ರಕ್ಕೆ ಲವಿತ್ ಛಾಯಾಗ್ರಹಣ, ಡಾಸ್ ಮೋಡ್ ಸಂಗೀತ ಸಂಯೋಜನೆ ಇದೆ.
‘ವಾಮನ’ ಚಿತ್ರದಲ್ಲಿ ಧನ್ವೀರ್ ಮತ್ತು ರೀಷ್ಮಾ ಜೊತೆಗೆ ತಾರಾ, ಸಂಪತ್, ಆದಿತ್ಯ ಮೆನನ್, ಶಿವರಾಜ್ ಕೆ. ಆರ್. ಪೇಟೆ, ಅವಿನಾಶ್, ಅಚ್ಯುತ್ ಕುಮಾರ್, ಕಾಕ್ರೋಚ್ ಸುಧಿ, ಭೂಷಣ್ ಮುಂತಾದವರು ಅಭಿನಯಿಸಿದ್ದಾರೆ. ಮಹೇಂದ್ರ ಸಿಂಹ ಛಾಯಾಗ್ರಹಣ ಮತ್ತು ಅಜನೀಶ್ ಶ್ಲೋಕನಾಥ್ ಸಂಗೀತ ಸಂಯೋಜನೆ ಇದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…