ಮನರಂಜನೆ

‘ಕಾಂತಾರ’ ನಮಗೆ ದೊಡ್ಡ ಸ್ಫೂರ್ತಿ ಎಂದ ತಮಿಳು ನಟ ವಿಕ್ರಮ್

ತಮಿಳು ನಟ ‘ಚಿಯಾನ್‍’ ವಿಕ್ರಮ್ ಅಭಿನಯದ ‘ತಂಗಲನಾನ್’ ಚಿತ್ರವು ಇದೇ ಆಗಸ್ಟ್ 15ರಂದು ಜಗತ್ತಿನಾದ್ಯಂತ ಐದು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಬ್ರಿಟಿಷರ ಆಳ್ವಿಕೆಯ ಸಮಯದಲ್ಲಿ ಕೆಜಿಎಫ್‍ನಲ್ಲಿ ನಡೆದಿರಬಹುದಾದ ಒಂದು ಕಾಲ್ಪನಿಕ ಕಥೆಯನ್ನು ಚಿತ್ರ ಮಾಡಲಾಗಿದೆ. ಅಂದಹಾಗೆ, ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವುದು ಪ. ರಂಜಿತ್. ಈ ಹಿಂದೆ ‘ಕಬಾಲಿ’, ‘ಕಾಲ’ ಮುಂತಾದ ಚಿತ್ರಗಳನ್ನು ನಿರ್ದೇಶಿಸಿದ್ದ ರಂಜಿತ್, ಇದೇ ಮೊದಲ ಬಾರಿಗೆ ವಿಕ್ರಮ್‍ ಅಭಿನಯದ ಚಿತ್ರವೊಂದನ್ನು ನಿರ್ದೇಶಿಸಿದ್ದಾರೆ.

‘ತಂಗಲಾನ್‍ ಚಿತ್ರದ ಪ್ರಚಾರಕ್ಕೆ ಚಿತ್ರತಂಡ ಇತ್ತೀಚೆಗೆ ಬೆಂಗಳೂರಿಗೆ ಬಂದಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ವಿಕ್ರಮ್‍, ‘ನಾನು ಇದುವರೆಗೂ ‘ಅನ್ನಿಯನ್‍’ ಇರಬಹುದು, ‘ಐ’, ‘ಪಿತಾಮಗನ್‍’, ‘ರಾವಣ್’ ಮುಂತಾದ ಚಿತ್ರಗಳಲ್ಲಿ ವಿಭಿನ್ನವಾದ ಪಾತ್ರಗಳನ್ನು ಮಾಡಿದ್ದೇನೆ. ಆದರೆ, ‘ತಂಗಲಾನ್‍’ ಚಿತ್ರಕ್ಕೆ ಹೋಲಿಸಿದರೆ ಅದು ಶೇ. 8ರಷ್ಟು ಮಾತ್ರ. ಇದು ನನ್ನ ಜೀವನದ ಅತ್ಯಂತ ಕಷ್ಟಕರವಾದ ಚಿತ್ರ. ಪ್ರತಿ ದೃಶ್ಯಕ್ಕೂ ನಾವು ಸಾಕಷ್ಟು ಕಷ್ಟಪಟ್ಟಿದ್ದೇವೆ. ಚಿತ್ರೀಕರಣ ಸಮಯದಲ್ಲಿ ಸಾಕಷ್ಟು ಏಟು ಬಿದ್ದಿವೆ. ರೊಮ್ಯಾಂಟಿಕ್‍ ದೃಶ್ಯಗಳು ಸಹ ಕಷ್ಟವಾಗಿತ್ತು’ ಎಂದರು

ಇದು ವಸಾಹತುಶಾಹಿ ಆಡಳಿತ ಕಥೆಯಾದ ಚಿತ್ರ ಎಂದ ವಿಕ್ರಮ, ‘ಬ್ರಿಟಿಷರ ಕಾಲಘಟ್ಟದ ಕಥೆ ಇದು. 100 ವರ್ಷಗಳ ಹಿಂದೆ, ಬ್ರಿಟಿಷರ ಆಳ್ವಿಕೆ ಸಮಯದಲ್ಲಿ ಏನಾಗಿದ್ದರಿಬಹುದು, ಆಗಿನ ಬುಡಕಟ್ಟು ಜನಾಂಗದವರು ಹೇಗಿದ್ದಿರಬಹುದು ಎಂದು ನಮಗೆ ಗೊತ್ತಿಲ್ಲ. ಹಾಗಾಗಿ, ಯಾವ ದೃಶ್ಯವೂ ಸುಲಭವಾಗಿರಲಿಲ್ಲ. ಇಲ್ಲಿ ನಾವು ಅವರ ತರಹ ನಟನೆ ಮಾಡಬೇಕು ಎಂಬುದಕ್ಕಿಂತ, ಅವರ ತರಹ ಇರಬೇಕಿತ್ತು. ನಿಜಕ್ಕೂ ಈ ಚಿತ್ರಕ್ಕಾಗಿ 100 ವರ್ಷಗಳ ಹಿಂದಕ್ಕೊ ಹೋಗುವಂತಾಯಿತು. ಚಿತ್ರಕ್ಕಾಗಿ ತುಂಬಾ ತೂಕ ಕಳೆದುಕೊಂಡೆ. ದೈಹಿಕವಾಗಿ ಬದಲಾಗುವುದಕ್ಕಿಂತ ಮಾನಸಿಕವಾಗಿ ಬದಲಾಗುವುದು ಬಹಳ ಕಷ್ಟವಾಗಿತ್ತು’ ಎಂದರು.

ಈ ಚಿತ್ರ ‘ಕೆಜಿಎಫ್‍’ಗಿಂತ ಬಹಳ ವಿಭಿನ್ನವಾದ ಚಿತ್ರ ಎಂದ ವಿಕ್ರಮ್, ‘ಬರೀ ಜಾನರ್‍ ಅಷ್ಟೇ ಅಲ್ಲ, ಒಟ್ಟಾರೆ ಪರಿಕಲ್ಪನೆಯೇ ಬೇರೆ. ಇಲ್ಲಿ ಜಾತಿ ಪದ್ಧತಿ, ಅಸ್ಪೃಶ್ಯತೆ, ದಬ್ಬಾಳಿಕೆ ಎಲ್ಲದರ ಬಗ್ಗೆ ಹೇಳಲಾಗಿದೆ. ಚಿತ್ರದ ಪ್ರಮುಖ ವಿಷಯವೆಂದರೆ ಅದು ಹುಡುಕಾಟ. ಇಲ್ಲಿ ನನ್ನ ಪಾತ್ರ ಒಂದು ಹುಡುಕಾಟ ನಡೆಸಿದರೆ, ಮಾಳವಿಕಾ ಪಾತ್ರ ಇನ್ನೊಂದರ ಹುಡುಕಾಟದಲ್ಲಿ ಇರುತ್ತದೆ. ಇವೆಲ್ಲವನ್ನೂ ಚಿನ್ನದ ಹುಡುಕಾಟದ ನೆಪದಲ್ಲಿ ಹೇಳಲಾಗುತ್ತದೆ. ಹಾಗಾಗಿ, ಇದು ಯಾವುದೋ ಒಂದು ಭಾಗ, ಭಾಷೆ ಅಥವಾ ಪ್ರಾಂತ್ಯಕ್ಕೆ ಮಾತ್ರ ಸೀಮಿತವಲ್ಲ. ಇದೊಂದು ಯೂನಿವರ್ಸಲ್ ಆದ ಚಿತ್ರ’ ಎಂದರು.

ತಮಿಳು ಚಿತ್ರವಾಗಿದ್ದ ಇದನ್ನು ಪ್ಯಾನ್ ಇಂಡಿಯಾ ಚಿತ್ರ ಮಾಡುವುದಕ್ಕೆ ರಿಷಭ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ’ ದೊಡ್ಡ ಸ್ಫೂರ್ತಿ ಎಂದ ವಿಕ್ರಮ್, ‘ನಾವು ಈ ಚಿತ್ರದ ಚಿತ್ರೀಕರಣ ಮಾಡುವಾಗ ‘ಕಾಂತಾರ’ ಬಿಡುಗಡೆಯಾಯಿತು. ಈ ಚಿತ್ರವನ್ನು ನಾವು ಹೊರಜಗತ್ತಿಗೆ ಹೇಗೆ ತೆಗೆದುಕೊಂಡು ಹೋಗಬೇಕು ಎಂದು ಯೋಚಿಸುತ್ತಿದ್ದಾಗ, ‘ಕಾಂತಾರ’ ದಾರಿ ತೋರಿಸಿತು. ಮಂಗಳೂರಿನ ಕಥೆಯೊಂದು ಜಾಗತಿಕ ಮಟ್ಟದಲ್ಲಿ ಸುದ್ದಿಯಾಗಬಹುದಾದರೆ, ನಾವು ಯಾಕೆ ಪ್ರಯತ್ನ ಮಾಡಬಾರದು ಎಂದನಿಸಿತು. ಆ ನಿಟ್ಟಿನಲ್ಲಿ ‘ಕಾಂತಾರ’ ನಮ್ಮೆಲ್ಲರಿಗೂ ಸ್ಫೂರ್ತಿಯಾಯಿತು. ಕಂಟೆಂಟ್ ಇದ್ದರೆ ಜಗತ್ತಿನ ಯಾವ ಮೂಲೆಗೆ ಬೇಕಾದರೂ ತೆಗೆದುಕೊಂಡು ಹೋಗಬಹುದು ಎಂದು ಆ ಚಿತ್ರ ತೋರಿಸಿತು’ ಎಂದರು ವಿಕ್ರಮ್.

‘ತಂಗಲಾನ್‍’ ಚಿತ್ರದಲ್ಲಿ ವಿಕ್ರಮ್ ಜೊತೆಗೆ, ಮಾಳವಿಕಾ ಮೋಹನನ್ ಹಾಗೂ ಬ್ರಿಟಿಷ್‍ ನಟ ಡೇನಿಯಲ್‍ ಮುಂತಾದವರು ನಟಿಸಿದ್ದು, ಅವರಿಬ್ಬರೂ ಅಂದು ಹಾಜರಿದ್ದರು.

ಭೂಮಿಕಾ

Recent Posts

ಉಪಸಭಾಪತಿಗೆ ಚಿತ್ರಹಿಂಸೆ ಆರೋಪ : ಐಪಿಎಸ್‌ ಅಧಿಕಾರಿ ಬಂಧನ

ಅಮರಾವತಿ : ಹಿಂದಿನ ವೈಎಸ್‍ಆರ್‍ಸಿಪಿ ಆಡಳಿತದ ಅವಧಿಯಲ್ಲಿ ಆಂಧ್ರ ವಿಧಾನಸಭೆಯ ಪ್ರಸ್ತುತ ಉಪಸಭಾಪತಿ ಕೆ. ರಘುರಾಮ ಕೃಷ್ಣ ರಾಜು ಅವರ…

1 hour ago

ಮಾರ್ಚ್‌ 11ರಿಂದ ವೈದ್ಯಾಧಿಕಾರಿಗಳ ಮುಷ್ಕರ : ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್ 11ರಿಂದ…

2 hours ago

ಟ್ರಂಪ್‌ ಜಾಗತಿಕ ಸುಂಕ ರದ್ದು : ವರದಿ

ವಾಷಿಂಗ್ಟನ್ : ಕಾನೂನುಬಾಹಿರವಾಗಿ ಟ್ರಂಪ್ ವಿಧಿಸಿದ್ದ ಆಮದು ಸುಂಕ ಸಂಗ್ರಹವನ್ನ ಅಮೆರಿಕ ನಿಲ್ಲಿಸಲಿದೆ ಎಂದು ಯುಎಸ್ ಕಸ್ಟಮ್ಸ್ ಮತ್ತು ಗಡಿ…

2 hours ago

ಸಫಾರಿ ಆದಾಯದ ಶೇ.35 ಭಾಗ ಕಾಡಿನಂಚಿನ ಜನಕಲ್ಯಾಣಕ್ಕೆ ಬಳಕೆ : ಖಂಡ್ರೆ

ಬೆಂಗಳೂರು : ಸಫಾರಿಯಿಂದ ಬರುವ ಆದಾಯದಲ್ಲಿ ಶೇ.35ರಷ್ಟನ್ನು ಕಾಡಿನಂಚಿನ ಗ್ರಾಮದ ಜನರ ಕಲ್ಯಾಣಕ್ಕಾಗಿ ಬಳಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಗ್ರಾಮಗಳಲ್ಲಿ…

2 hours ago

ವನ್ಯಜೀವಿ ಸಂಚಾರ | ಕಾಡಂಚಿನ ಗ್ರಾಮದ ಮುಖಂಡರಿಗೆ ಮಾಹಿತಿ ರವಾನಿಸಲು ಖಂಡ್ರೆ ಸೂಚನೆ

ಬೆಂಗಳೂರು : ಅರಣ್ಯದಂಚಿನ ಜಮೀನುಗಳಲ್ಲಿ ವನ್ಯಜೀವಿಗಳ ಸಂಚಾರದ ಬಗ್ಗೆ ಕಮಾಂಡ್ ಕೇಂದ್ರಕ್ಕೆ ಮಾಹಿತಿ ಬಂದ ಕೂಡಲೇ ತೋಟದ ಬೆಳೆಗಾರರ ಸಂಘಟನೆ…

3 hours ago

ಮನರೇಗಾ ನಾಶ | ಜನರ ಅನ್ನ ಕಿತ್ತುಕೊಳ್ಳುತ್ತಿರುವ ಕೇಂದ್ರ ; ಸಿಎಂ ಸಿದ್ದರಾಮಯ್ಯ

ಚಿಕ್ಕಬಳ್ಳಾಪುರ : ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್…

3 hours ago