ಮನರಂಜನೆ

‘ಕಾಂತಾರ’ ನಮಗೆ ದೊಡ್ಡ ಸ್ಫೂರ್ತಿ ಎಂದ ತಮಿಳು ನಟ ವಿಕ್ರಮ್

ತಮಿಳು ನಟ ‘ಚಿಯಾನ್‍’ ವಿಕ್ರಮ್ ಅಭಿನಯದ ‘ತಂಗಲನಾನ್’ ಚಿತ್ರವು ಇದೇ ಆಗಸ್ಟ್ 15ರಂದು ಜಗತ್ತಿನಾದ್ಯಂತ ಐದು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಬ್ರಿಟಿಷರ ಆಳ್ವಿಕೆಯ ಸಮಯದಲ್ಲಿ ಕೆಜಿಎಫ್‍ನಲ್ಲಿ ನಡೆದಿರಬಹುದಾದ ಒಂದು ಕಾಲ್ಪನಿಕ ಕಥೆಯನ್ನು ಚಿತ್ರ ಮಾಡಲಾಗಿದೆ. ಅಂದಹಾಗೆ, ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವುದು ಪ. ರಂಜಿತ್. ಈ ಹಿಂದೆ ‘ಕಬಾಲಿ’, ‘ಕಾಲ’ ಮುಂತಾದ ಚಿತ್ರಗಳನ್ನು ನಿರ್ದೇಶಿಸಿದ್ದ ರಂಜಿತ್, ಇದೇ ಮೊದಲ ಬಾರಿಗೆ ವಿಕ್ರಮ್‍ ಅಭಿನಯದ ಚಿತ್ರವೊಂದನ್ನು ನಿರ್ದೇಶಿಸಿದ್ದಾರೆ.

‘ತಂಗಲಾನ್‍ ಚಿತ್ರದ ಪ್ರಚಾರಕ್ಕೆ ಚಿತ್ರತಂಡ ಇತ್ತೀಚೆಗೆ ಬೆಂಗಳೂರಿಗೆ ಬಂದಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ವಿಕ್ರಮ್‍, ‘ನಾನು ಇದುವರೆಗೂ ‘ಅನ್ನಿಯನ್‍’ ಇರಬಹುದು, ‘ಐ’, ‘ಪಿತಾಮಗನ್‍’, ‘ರಾವಣ್’ ಮುಂತಾದ ಚಿತ್ರಗಳಲ್ಲಿ ವಿಭಿನ್ನವಾದ ಪಾತ್ರಗಳನ್ನು ಮಾಡಿದ್ದೇನೆ. ಆದರೆ, ‘ತಂಗಲಾನ್‍’ ಚಿತ್ರಕ್ಕೆ ಹೋಲಿಸಿದರೆ ಅದು ಶೇ. 8ರಷ್ಟು ಮಾತ್ರ. ಇದು ನನ್ನ ಜೀವನದ ಅತ್ಯಂತ ಕಷ್ಟಕರವಾದ ಚಿತ್ರ. ಪ್ರತಿ ದೃಶ್ಯಕ್ಕೂ ನಾವು ಸಾಕಷ್ಟು ಕಷ್ಟಪಟ್ಟಿದ್ದೇವೆ. ಚಿತ್ರೀಕರಣ ಸಮಯದಲ್ಲಿ ಸಾಕಷ್ಟು ಏಟು ಬಿದ್ದಿವೆ. ರೊಮ್ಯಾಂಟಿಕ್‍ ದೃಶ್ಯಗಳು ಸಹ ಕಷ್ಟವಾಗಿತ್ತು’ ಎಂದರು

ಇದು ವಸಾಹತುಶಾಹಿ ಆಡಳಿತ ಕಥೆಯಾದ ಚಿತ್ರ ಎಂದ ವಿಕ್ರಮ, ‘ಬ್ರಿಟಿಷರ ಕಾಲಘಟ್ಟದ ಕಥೆ ಇದು. 100 ವರ್ಷಗಳ ಹಿಂದೆ, ಬ್ರಿಟಿಷರ ಆಳ್ವಿಕೆ ಸಮಯದಲ್ಲಿ ಏನಾಗಿದ್ದರಿಬಹುದು, ಆಗಿನ ಬುಡಕಟ್ಟು ಜನಾಂಗದವರು ಹೇಗಿದ್ದಿರಬಹುದು ಎಂದು ನಮಗೆ ಗೊತ್ತಿಲ್ಲ. ಹಾಗಾಗಿ, ಯಾವ ದೃಶ್ಯವೂ ಸುಲಭವಾಗಿರಲಿಲ್ಲ. ಇಲ್ಲಿ ನಾವು ಅವರ ತರಹ ನಟನೆ ಮಾಡಬೇಕು ಎಂಬುದಕ್ಕಿಂತ, ಅವರ ತರಹ ಇರಬೇಕಿತ್ತು. ನಿಜಕ್ಕೂ ಈ ಚಿತ್ರಕ್ಕಾಗಿ 100 ವರ್ಷಗಳ ಹಿಂದಕ್ಕೊ ಹೋಗುವಂತಾಯಿತು. ಚಿತ್ರಕ್ಕಾಗಿ ತುಂಬಾ ತೂಕ ಕಳೆದುಕೊಂಡೆ. ದೈಹಿಕವಾಗಿ ಬದಲಾಗುವುದಕ್ಕಿಂತ ಮಾನಸಿಕವಾಗಿ ಬದಲಾಗುವುದು ಬಹಳ ಕಷ್ಟವಾಗಿತ್ತು’ ಎಂದರು.

ಈ ಚಿತ್ರ ‘ಕೆಜಿಎಫ್‍’ಗಿಂತ ಬಹಳ ವಿಭಿನ್ನವಾದ ಚಿತ್ರ ಎಂದ ವಿಕ್ರಮ್, ‘ಬರೀ ಜಾನರ್‍ ಅಷ್ಟೇ ಅಲ್ಲ, ಒಟ್ಟಾರೆ ಪರಿಕಲ್ಪನೆಯೇ ಬೇರೆ. ಇಲ್ಲಿ ಜಾತಿ ಪದ್ಧತಿ, ಅಸ್ಪೃಶ್ಯತೆ, ದಬ್ಬಾಳಿಕೆ ಎಲ್ಲದರ ಬಗ್ಗೆ ಹೇಳಲಾಗಿದೆ. ಚಿತ್ರದ ಪ್ರಮುಖ ವಿಷಯವೆಂದರೆ ಅದು ಹುಡುಕಾಟ. ಇಲ್ಲಿ ನನ್ನ ಪಾತ್ರ ಒಂದು ಹುಡುಕಾಟ ನಡೆಸಿದರೆ, ಮಾಳವಿಕಾ ಪಾತ್ರ ಇನ್ನೊಂದರ ಹುಡುಕಾಟದಲ್ಲಿ ಇರುತ್ತದೆ. ಇವೆಲ್ಲವನ್ನೂ ಚಿನ್ನದ ಹುಡುಕಾಟದ ನೆಪದಲ್ಲಿ ಹೇಳಲಾಗುತ್ತದೆ. ಹಾಗಾಗಿ, ಇದು ಯಾವುದೋ ಒಂದು ಭಾಗ, ಭಾಷೆ ಅಥವಾ ಪ್ರಾಂತ್ಯಕ್ಕೆ ಮಾತ್ರ ಸೀಮಿತವಲ್ಲ. ಇದೊಂದು ಯೂನಿವರ್ಸಲ್ ಆದ ಚಿತ್ರ’ ಎಂದರು.

ತಮಿಳು ಚಿತ್ರವಾಗಿದ್ದ ಇದನ್ನು ಪ್ಯಾನ್ ಇಂಡಿಯಾ ಚಿತ್ರ ಮಾಡುವುದಕ್ಕೆ ರಿಷಭ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ’ ದೊಡ್ಡ ಸ್ಫೂರ್ತಿ ಎಂದ ವಿಕ್ರಮ್, ‘ನಾವು ಈ ಚಿತ್ರದ ಚಿತ್ರೀಕರಣ ಮಾಡುವಾಗ ‘ಕಾಂತಾರ’ ಬಿಡುಗಡೆಯಾಯಿತು. ಈ ಚಿತ್ರವನ್ನು ನಾವು ಹೊರಜಗತ್ತಿಗೆ ಹೇಗೆ ತೆಗೆದುಕೊಂಡು ಹೋಗಬೇಕು ಎಂದು ಯೋಚಿಸುತ್ತಿದ್ದಾಗ, ‘ಕಾಂತಾರ’ ದಾರಿ ತೋರಿಸಿತು. ಮಂಗಳೂರಿನ ಕಥೆಯೊಂದು ಜಾಗತಿಕ ಮಟ್ಟದಲ್ಲಿ ಸುದ್ದಿಯಾಗಬಹುದಾದರೆ, ನಾವು ಯಾಕೆ ಪ್ರಯತ್ನ ಮಾಡಬಾರದು ಎಂದನಿಸಿತು. ಆ ನಿಟ್ಟಿನಲ್ಲಿ ‘ಕಾಂತಾರ’ ನಮ್ಮೆಲ್ಲರಿಗೂ ಸ್ಫೂರ್ತಿಯಾಯಿತು. ಕಂಟೆಂಟ್ ಇದ್ದರೆ ಜಗತ್ತಿನ ಯಾವ ಮೂಲೆಗೆ ಬೇಕಾದರೂ ತೆಗೆದುಕೊಂಡು ಹೋಗಬಹುದು ಎಂದು ಆ ಚಿತ್ರ ತೋರಿಸಿತು’ ಎಂದರು ವಿಕ್ರಮ್.

‘ತಂಗಲಾನ್‍’ ಚಿತ್ರದಲ್ಲಿ ವಿಕ್ರಮ್ ಜೊತೆಗೆ, ಮಾಳವಿಕಾ ಮೋಹನನ್ ಹಾಗೂ ಬ್ರಿಟಿಷ್‍ ನಟ ಡೇನಿಯಲ್‍ ಮುಂತಾದವರು ನಟಿಸಿದ್ದು, ಅವರಿಬ್ಬರೂ ಅಂದು ಹಾಜರಿದ್ದರು.

ಭೂಮಿಕಾ

Recent Posts

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

45 seconds ago

ಓದುಗರ ಪತ್ರ: ತರಬೇತಿಗೆ ಅರ್ಜಿ ಏಕೆ ಕರೆದಿಲ್ಲ?

ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…

3 mins ago

ಓದುಗರ ಪತ್ರ: ಬಿಡದಿ ಟೌನ್ ಶಿಪ್: ಎಲ್ಲರೊಂದಿಗೆ ಚರ್ಚಿಸಿ ತೀರ್ಮಾನಕ್ಕೆ ಬರಬೇಕು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…

6 mins ago

‘ರಾಮ ರಾಜಕಾರಣಕ್ಕೆ ಅಗ್ನಿ ಪರೀಕ್ಷೆ..!

ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಭಕ್ತರು ನೀಡಿದ ಸಾವಿರಾರು ಕೋಟಿ ರೂಪಾಯಿ ದೇಣಿಗೆ ಹಣ, ಆಭರಣಗಳ ಕಳ್ಳತನ ಪ್ರಕರಣ ರಾಮಭಕ್ತರ ವಿಶ್ವಾಸವನ್ನು…

8 mins ago

ಇದು ಶೌಚಾಲಯ… ಈಗ ಅನುಪಯುಕ್ತ ವಸ್ತುಗಳ ಗೋದಾಮು!

ಎಚ್.ಎಸ್.ದಿನೇಶ್ ಕುಮಾರ್ ಮೈಸೂರಿನ ಶ್ರೀರಾಂಪುರದ ಉದ್ಯಾನದಲ್ಲಿರುವ ಶೌಚಾಲಯದ ದುಸ್ಥಿತಿ ಮೈಸೂರು: ಜನರ ಲಕ್ಷಾಂತರ ರೂ. ತೆರಿಗೆ ಹಣವನ್ನು ವ್ಯಯಿಸಿ ಕಟ್ಟಿಸಿರುವ…

16 mins ago

ರೈಲು ನಿಲ್ದಾಣ ಮೇಲ್ದರ್ಜೆ ಕಾಮಗಾರಿ ಬಹುತೇಕ ಪೂರ್ಣ

ಪ್ರಸಾದ್ ಲಕ್ಕೂರು ಅಂತಿಮ ಹಂತದಲ್ಲಿ ಮೇಲ್ಸೇತುವೆ, ಲಿಫ್ಟ್, ಎಸ್ಕಲೇಟರ್ ಅಳವಡಿಕೆ; ಆಧುನೀಕರಣಗೊಂಡ ನಿಲ್ದಾಣ ೨ ತಿಂಗಳಲ್ಲಿ ಸೇವೆಗೆ  ಚಾಮರಾಜನಗರ: ಗಡಿ…

19 mins ago