‘ರಥಾವರ’ ಸಿನಿಮಾ ನಿರ್ದೇಶಿಸಿದ್ದ ಚಂದ್ರಶೇಖರ್ ಬಂಡಿಯಪ್ಪ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ಚೌಕಿದಾರ್’ ಚಿತ್ರದ 53 ದಿನಗಳ ಮೊದಲ ಹಂತದ ಚಿತ್ರೀಕರಣ ಇತ್ತೀಚೆಗೆ ಮುಕ್ತಾಯವಾಗಿದೆ. ನೈಸರ್ಗಿಕ ಸೌಂದರ್ಯಕ್ಕೆ ಖ್ಯಾತಿ ಪಡೆದಿರುವ ಅಂಡಮಾನ್ – ನಿಕೋಬಾರ್ ದ್ವೀಪದಲ್ಲಿ ‘ಚೌಕಿದಾರ್’ ಚಿತ್ರಕ್ಕೆ 10 ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ.
ಶಿವರಾಜಕುಮಾರ್ ಅಭಿನಯದ ‘ಅಂಡಮಾನ್’ ಚಿತ್ರವನ್ನು ಹೊರತುಪಡಿಸಿದರೆ, ಕನ್ನಡದ ಯಾವೊಂದು ಚಿತ್ರವೂ ಈ 26 ವರ್ಷಗಳಲ್ಲಿ ಅಂಡಮಾನ್ನಲ್ಲಿ ಚಿತ್ರೀಕರಣ ಆಗಿರಲಿಲ್ಲ. ಈಗ ‘ಚೌಕಿದಾರ್’ ಚಿತ್ರದ ಹಾಡು ಮತ್ತು ಮಾತಿನ ಭಾಗದ ಚಿತ್ರೀಕರಣ ನಡೆಸಲಾಗಿದೆ. ಚಿತ್ರದ ಶೇ. 60ರಷ್ಟು ಚಿತ್ರೀಕರಣ ಮುಗಿದಿದ್ದು, ಸದ್ಯದಲ್ಲೇ ಎರಡನೇ ಹಂತದ ಚಿತ್ರೀಕರಣ ಪ್ರಾರಂಭವಾಗಲಿದೆ.
ಇದುವರೆಗೂ ಹೆಚ್ಚಾಗಿ ಲವರ್ ಬಾಯ್ ಪಾತ್ರಗಳಲ್ಲೇ ಕಾಣಿಸಿಕೊಂಡಿರುವ ಪೃಥ್ವಿ ಅಂಬಾರ್, ಈ ಚಿತ್ರದಲ್ಲಿಲ ಆ್ಯಕ್ಷನ್ ಹೀರೋ ಆಗಿ ಕಾಣಿಸಿಕೊಳ್ಳುತ್ತಿರುವುದು ವಿಶೇಷ. ಅವರಿಗೆ ನಾಯಕಿಯಾಗಿ ಧನ್ಯಾ ರಾಮ್ಕುಮಾತ್ ನಟಿಸುತ್ತಿದ್ದಾರೆ. ಇದೊಂದು ಫ್ಯಾಮಿಲಿ ಚಿತ್ರವಾಗಿದ್ದು, ಸಾಯಿಕುಮಾರ್ ಮತ್ತು ಪೃಥ್ವಿ ಅಪ್ಪ-ಮಗನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನು, ನಟ ಧರ್ಮ ಬಹಳ ದಿನಗಳ ನಂತರ ಪೂರ್ಣಪ್ರಮಾಣದ ವಿಲನ್ ಆಗಿ ನಟಿಸುತ್ತಿದ್ದಾರೆ.
ಪ್ಯಾನ್ ಇಂಡಿಯಾ ಮಟ್ಟದಲ್ಲಿ ತಯಾರಾಗುತ್ತಿರುವ ‘ಚೌಕಿದಾರ್’ ಚಿತ್ರದಲ್ಲಿ ಪೃಥ್ವಿ ಅಂಬಾರ್, ಧನ್ಯ ರಾಮ್ಕುಮಾರ್, ಸಾಯಿಕುಮಾರ್ ಮುಂತಾದವರು ನಟಿಸುತ್ತಿದ್ದು, ಕಲ್ಲಹಳ್ಳಿ ಚಂದ್ರಶೇಖರ್ ನಿರ್ಮಾಣ ಮಾಡುತ್ತಿದ್ದಾರೆ.
‘ಚೌಕಿದಾರ್’ ಚಿತ್ರಕ್ಕೆ ಸಚಿನ್ ಬಸ್ರೂರು ಸಂಗೀತ ಸಂಯೋಜಿಸುತ್ತಿರುವ ಈ ಚಿತ್ರಕ್ಕೆ ವಿ. ನಾಗೇಂದ್ರ ಪ್ರಸಾದ್, ಪ್ರಮೋದ್ ಮರವಂತೆ, ಸಂತೋಷ್ ನಾಯಕ್ ಸಾಹಿತ್ಯ ಬರೆಯುತ್ತಿದ್ದಾರೆ.
ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್ಟಿಸಿ ಬಸ್…
ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…
ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…
ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…