‘ರಥಾವರ’ ಸಿನಿಮಾ ನಿರ್ದೇಶಿಸಿದ್ದ ಚಂದ್ರಶೇಖರ್ ಬಂಡಿಯಪ್ಪ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ಚೌಕಿದಾರ್’ ಚಿತ್ರದ 53 ದಿನಗಳ ಮೊದಲ ಹಂತದ ಚಿತ್ರೀಕರಣ ಇತ್ತೀಚೆಗೆ ಮುಕ್ತಾಯವಾಗಿದೆ. ನೈಸರ್ಗಿಕ ಸೌಂದರ್ಯಕ್ಕೆ ಖ್ಯಾತಿ ಪಡೆದಿರುವ ಅಂಡಮಾನ್ – ನಿಕೋಬಾರ್ ದ್ವೀಪದಲ್ಲಿ ‘ಚೌಕಿದಾರ್’ ಚಿತ್ರಕ್ಕೆ 10 ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ.
ಶಿವರಾಜಕುಮಾರ್ ಅಭಿನಯದ ‘ಅಂಡಮಾನ್’ ಚಿತ್ರವನ್ನು ಹೊರತುಪಡಿಸಿದರೆ, ಕನ್ನಡದ ಯಾವೊಂದು ಚಿತ್ರವೂ ಈ 26 ವರ್ಷಗಳಲ್ಲಿ ಅಂಡಮಾನ್ನಲ್ಲಿ ಚಿತ್ರೀಕರಣ ಆಗಿರಲಿಲ್ಲ. ಈಗ ‘ಚೌಕಿದಾರ್’ ಚಿತ್ರದ ಹಾಡು ಮತ್ತು ಮಾತಿನ ಭಾಗದ ಚಿತ್ರೀಕರಣ ನಡೆಸಲಾಗಿದೆ. ಚಿತ್ರದ ಶೇ. 60ರಷ್ಟು ಚಿತ್ರೀಕರಣ ಮುಗಿದಿದ್ದು, ಸದ್ಯದಲ್ಲೇ ಎರಡನೇ ಹಂತದ ಚಿತ್ರೀಕರಣ ಪ್ರಾರಂಭವಾಗಲಿದೆ.
ಇದುವರೆಗೂ ಹೆಚ್ಚಾಗಿ ಲವರ್ ಬಾಯ್ ಪಾತ್ರಗಳಲ್ಲೇ ಕಾಣಿಸಿಕೊಂಡಿರುವ ಪೃಥ್ವಿ ಅಂಬಾರ್, ಈ ಚಿತ್ರದಲ್ಲಿಲ ಆ್ಯಕ್ಷನ್ ಹೀರೋ ಆಗಿ ಕಾಣಿಸಿಕೊಳ್ಳುತ್ತಿರುವುದು ವಿಶೇಷ. ಅವರಿಗೆ ನಾಯಕಿಯಾಗಿ ಧನ್ಯಾ ರಾಮ್ಕುಮಾತ್ ನಟಿಸುತ್ತಿದ್ದಾರೆ. ಇದೊಂದು ಫ್ಯಾಮಿಲಿ ಚಿತ್ರವಾಗಿದ್ದು, ಸಾಯಿಕುಮಾರ್ ಮತ್ತು ಪೃಥ್ವಿ ಅಪ್ಪ-ಮಗನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನು, ನಟ ಧರ್ಮ ಬಹಳ ದಿನಗಳ ನಂತರ ಪೂರ್ಣಪ್ರಮಾಣದ ವಿಲನ್ ಆಗಿ ನಟಿಸುತ್ತಿದ್ದಾರೆ.
ಪ್ಯಾನ್ ಇಂಡಿಯಾ ಮಟ್ಟದಲ್ಲಿ ತಯಾರಾಗುತ್ತಿರುವ ‘ಚೌಕಿದಾರ್’ ಚಿತ್ರದಲ್ಲಿ ಪೃಥ್ವಿ ಅಂಬಾರ್, ಧನ್ಯ ರಾಮ್ಕುಮಾರ್, ಸಾಯಿಕುಮಾರ್ ಮುಂತಾದವರು ನಟಿಸುತ್ತಿದ್ದು, ಕಲ್ಲಹಳ್ಳಿ ಚಂದ್ರಶೇಖರ್ ನಿರ್ಮಾಣ ಮಾಡುತ್ತಿದ್ದಾರೆ.
‘ಚೌಕಿದಾರ್’ ಚಿತ್ರಕ್ಕೆ ಸಚಿನ್ ಬಸ್ರೂರು ಸಂಗೀತ ಸಂಯೋಜಿಸುತ್ತಿರುವ ಈ ಚಿತ್ರಕ್ಕೆ ವಿ. ನಾಗೇಂದ್ರ ಪ್ರಸಾದ್, ಪ್ರಮೋದ್ ಮರವಂತೆ, ಸಂತೋಷ್ ನಾಯಕ್ ಸಾಹಿತ್ಯ ಬರೆಯುತ್ತಿದ್ದಾರೆ.
ಮೈಸೂರು: ಮೂವರು ಬೇಟೆಗಾರರ ಎನ್ಕೌಂಟರ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್ ಬೋಸ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…
ಮಹಾದೇಶ್ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…
ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…
ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…