ಕೇರಳ: ಕೇರಳ ರಾಜ್ಯದ ವಯನಾಡ್ ಜಿಲ್ಲೆಯಲ್ಲಿ ನಡೆದ ಭೂಕುಸಿತದಲ್ಲಿ 300ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, ಹಲವಾರು ಮಂದಿ ಕಾಣೆಯಾಗಿದ್ದಾರೆ.
ಇನ್ನು ನೆರೆ ಸಂತ್ರಸ್ಥರಿಗೆ ನೆರವಾಗಲು ಹಲವಾರು ನಟ ನಟಿಯರು, ವಿವಿಧ ಸೆಲೆಬ್ರೆಟಿಗಳು ಧಾವಿಸಿದ್ದಾರೆ.
ಇತ್ತ ಟಾಲಿವುಡ್ನ ಮೆಗಾ ಪವರ್ಸ್ಟಾರ್ ಕುಟುಂಬ ಒಂದು ಕೋಟಿ ರೂ. ದೇಣಿಗೆ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಟಾಲಿವುಡ್ನ ಮೆಗಾ ಸ್ಟಾರ್ ಚಿರಂಜೀವಿ ಹಾಗೂ ಅವರ ಪುತ್ರ ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಇಬ್ಬರು ಸೇರಿ ಒಂದು ಕೋಟಿ ದೇಣಿಗೆ ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಚಿರಂಜೀವಿ, ಕಳೆದ ಕೆಲವು ದಿನಗಳಿಂದ ಕೇರಳದಲ್ಲಿ ಪ್ರಕೃತಿಯ ಪ್ರಕೋಪದಿಂದಾಗಿ ನೂರಾರು ಅಮೂಲ್ಯ ಜೀವಗಳ ವಿನಾಶ ಮತ್ತು ನಷ್ಟದಿಂದ ತೀವ್ರ ನೊಂದಿದ್ದೇನೆ.
ವಯನಾಡ್ ದುರಂತದ ಸಂತ್ರಸ್ತರಿಗೆ ನನ್ನ ಹೃದಯವಿದೆ. ಸಂತ್ರಸ್ತರಿಗೆ ನಮ್ಮ ಬೆಂಬಲದ ಸಂಕೇತವಾಗಿ ಚರಣ್ ಮತ್ತು ನಾನು ಒಟ್ಟಾಗಿ 1 ಕೋಟಿ ರೂಪಾಯಿಗಳನ್ನು ಕೇರಳ ಸಿಎಂ ಪರಿಹಾರ ನಿಧಿಗೆ ನೀಡುತ್ತಿದ್ದೇವೆ. ನೋವಿನಲ್ಲಿರುವವರೆಲ್ಲ ಚೇತರಿಸಿಕೊಳ್ಳಲಿ ಎಂದು ನನ್ನ ಪ್ರಾರ್ಥನೆ! ಎಂದು ಸುದೀರ್ಘವಾಗಿ ಬರೆದುಕೊಂಡು ತಮ್ಮ ಮನದಾಳದ ನೋವನ್ನು ವ್ಯಕ್ತಪಡಿಸಿದ್ದಾರೆ.
ಮೈಸೂರು : ಸಿದ್ದರಾಮಯ್ಯ ಅವರೇ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯುವ ಆಸೆ ಇದೆ. ಹೈಕಮಾಂಡ್ ಏನೇ ತೀರ್ಮಾನ ಮಾಡಿದರೂ…
ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಎಂ.ಸತ್ಯವರ ಗ್ರಾಮದ ಸಮೀಪದ ಹೊಸಕೋಟೆ-ದಾಬಸ್ಪೇಟೆ ರಾಷ್ಟ್ರೀಯ ಹೆದ್ದಾರಿ (NH-648) ಮತ್ತು…
ಮೈಸೂರಿನ ರಾಮಕೃಷ್ಣ ನಗರದಲ್ಲಿರುವ, ರಾಮಕೃಷ್ಣ ವೃತ್ತದಿಂದ (ಆಂದೋಲನ ಸರ್ಕಲ್), ಕುವೆಂಪು ನಗರದ ಕಾಂಪ್ಲೆಕ್ ತನಕದ ಸುಮಾರು ಒಂದು ಕಿ.ಮೀ. ದೂರದ…
ಹನೂರು : ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆ.14 ರಿಂದ 18 ರವರೆಗೆ ಐದು ದಿನಗಳ…
ಮುಂಬೈ : ಲಂಡನ್ನಿನಲ್ಲಿ ಇದ್ದುಕೊಂಡು ದೇಶ ಭ್ರಷ್ಟ ಆರ್ಥಿಕ ಅಪರಾಧಿಗಳ ಕಾಯ್ದೆಯ (ಎಫ್ಇಒ) ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸುವ ಬದಲು, ಭಾರತಕ್ಕೆ…
ಚುನಾವಣೆ ಕಳೆದು ಚಲನಚಿತ್ರ ವಾಣಿಜ್ಯ ಮಂಡಳಿಗೆ ಹೊಸ ಭಾರವಾಹಿಗಳ ಆಯ್ಕೆ ಆಗಿದೆ. ನಟ, ನಿರ್ಮಾಪಕಿ ಜಯಮಾಲ ನೇತೃತ್ವದ ಆಡಳಿತ ಮಂಡಳಿ…