ಕೇರಳ: ಕೇರಳ ರಾಜ್ಯದ ವಯನಾಡ್ ಜಿಲ್ಲೆಯಲ್ಲಿ ನಡೆದ ಭೂಕುಸಿತದಲ್ಲಿ 300ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, ಹಲವಾರು ಮಂದಿ ಕಾಣೆಯಾಗಿದ್ದಾರೆ.
ಇನ್ನು ನೆರೆ ಸಂತ್ರಸ್ಥರಿಗೆ ನೆರವಾಗಲು ಹಲವಾರು ನಟ ನಟಿಯರು, ವಿವಿಧ ಸೆಲೆಬ್ರೆಟಿಗಳು ಧಾವಿಸಿದ್ದಾರೆ.
ಇತ್ತ ಟಾಲಿವುಡ್ನ ಮೆಗಾ ಪವರ್ಸ್ಟಾರ್ ಕುಟುಂಬ ಒಂದು ಕೋಟಿ ರೂ. ದೇಣಿಗೆ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಟಾಲಿವುಡ್ನ ಮೆಗಾ ಸ್ಟಾರ್ ಚಿರಂಜೀವಿ ಹಾಗೂ ಅವರ ಪುತ್ರ ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಇಬ್ಬರು ಸೇರಿ ಒಂದು ಕೋಟಿ ದೇಣಿಗೆ ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಚಿರಂಜೀವಿ, ಕಳೆದ ಕೆಲವು ದಿನಗಳಿಂದ ಕೇರಳದಲ್ಲಿ ಪ್ರಕೃತಿಯ ಪ್ರಕೋಪದಿಂದಾಗಿ ನೂರಾರು ಅಮೂಲ್ಯ ಜೀವಗಳ ವಿನಾಶ ಮತ್ತು ನಷ್ಟದಿಂದ ತೀವ್ರ ನೊಂದಿದ್ದೇನೆ.
ವಯನಾಡ್ ದುರಂತದ ಸಂತ್ರಸ್ತರಿಗೆ ನನ್ನ ಹೃದಯವಿದೆ. ಸಂತ್ರಸ್ತರಿಗೆ ನಮ್ಮ ಬೆಂಬಲದ ಸಂಕೇತವಾಗಿ ಚರಣ್ ಮತ್ತು ನಾನು ಒಟ್ಟಾಗಿ 1 ಕೋಟಿ ರೂಪಾಯಿಗಳನ್ನು ಕೇರಳ ಸಿಎಂ ಪರಿಹಾರ ನಿಧಿಗೆ ನೀಡುತ್ತಿದ್ದೇವೆ. ನೋವಿನಲ್ಲಿರುವವರೆಲ್ಲ ಚೇತರಿಸಿಕೊಳ್ಳಲಿ ಎಂದು ನನ್ನ ಪ್ರಾರ್ಥನೆ! ಎಂದು ಸುದೀರ್ಘವಾಗಿ ಬರೆದುಕೊಂಡು ತಮ್ಮ ಮನದಾಳದ ನೋವನ್ನು ವ್ಯಕ್ತಪಡಿಸಿದ್ದಾರೆ.
ಹೊಸದಿಲ್ಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ…
ವಿಧಾನಸಭೆ : ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ…
ಮೈಸೂರು : ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ್ಸ್’ ರಿಯಾಲಿಟಿ ಷೋಗಾಗಿ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ…
ಬೆಳಗಾವಿ : ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಮೈಸೂರು : ಸಿನಿಮಾಗಳು ಮನರಂಜನೆಗಷ್ಟೇ ಸೀಮಿತವಾಗದೆ ಸಾಮಾಜಿಕ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು ಎಂದು ಖ್ಯಾತ ನಿರ್ದೇಶಕ ಬಿ.ಸುರೇಶ್ ಆಶಿಸಿದರು. ನಗರದ…
ಮೈಸೂರು : ಅಲ್ಪಸಂಖ್ಯಾತರ ಸಮುದಾಯ ವಾಸಿಸುವ ಸ್ಥಳಗಳಲ್ಲಿ ಬಾಲ್ಯ ವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಗಳ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮಗಳನ್ನು…