ಕೇರಳ: ಕೇರಳ ರಾಜ್ಯದ ವಯನಾಡ್ ಜಿಲ್ಲೆಯಲ್ಲಿ ನಡೆದ ಭೂಕುಸಿತದಲ್ಲಿ 300ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, ಹಲವಾರು ಮಂದಿ ಕಾಣೆಯಾಗಿದ್ದಾರೆ.
ಇನ್ನು ನೆರೆ ಸಂತ್ರಸ್ಥರಿಗೆ ನೆರವಾಗಲು ಹಲವಾರು ನಟ ನಟಿಯರು, ವಿವಿಧ ಸೆಲೆಬ್ರೆಟಿಗಳು ಧಾವಿಸಿದ್ದಾರೆ.
ಇತ್ತ ಟಾಲಿವುಡ್ನ ಮೆಗಾ ಪವರ್ಸ್ಟಾರ್ ಕುಟುಂಬ ಒಂದು ಕೋಟಿ ರೂ. ದೇಣಿಗೆ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಟಾಲಿವುಡ್ನ ಮೆಗಾ ಸ್ಟಾರ್ ಚಿರಂಜೀವಿ ಹಾಗೂ ಅವರ ಪುತ್ರ ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಇಬ್ಬರು ಸೇರಿ ಒಂದು ಕೋಟಿ ದೇಣಿಗೆ ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಚಿರಂಜೀವಿ, ಕಳೆದ ಕೆಲವು ದಿನಗಳಿಂದ ಕೇರಳದಲ್ಲಿ ಪ್ರಕೃತಿಯ ಪ್ರಕೋಪದಿಂದಾಗಿ ನೂರಾರು ಅಮೂಲ್ಯ ಜೀವಗಳ ವಿನಾಶ ಮತ್ತು ನಷ್ಟದಿಂದ ತೀವ್ರ ನೊಂದಿದ್ದೇನೆ.
ವಯನಾಡ್ ದುರಂತದ ಸಂತ್ರಸ್ತರಿಗೆ ನನ್ನ ಹೃದಯವಿದೆ. ಸಂತ್ರಸ್ತರಿಗೆ ನಮ್ಮ ಬೆಂಬಲದ ಸಂಕೇತವಾಗಿ ಚರಣ್ ಮತ್ತು ನಾನು ಒಟ್ಟಾಗಿ 1 ಕೋಟಿ ರೂಪಾಯಿಗಳನ್ನು ಕೇರಳ ಸಿಎಂ ಪರಿಹಾರ ನಿಧಿಗೆ ನೀಡುತ್ತಿದ್ದೇವೆ. ನೋವಿನಲ್ಲಿರುವವರೆಲ್ಲ ಚೇತರಿಸಿಕೊಳ್ಳಲಿ ಎಂದು ನನ್ನ ಪ್ರಾರ್ಥನೆ! ಎಂದು ಸುದೀರ್ಘವಾಗಿ ಬರೆದುಕೊಂಡು ತಮ್ಮ ಮನದಾಳದ ನೋವನ್ನು ವ್ಯಕ್ತಪಡಿಸಿದ್ದಾರೆ.
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…
ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…
ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…
ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…