ಕೇರಳ: ಕೇರಳ ರಾಜ್ಯದ ವಯನಾಡ್ ಜಿಲ್ಲೆಯಲ್ಲಿ ನಡೆದ ಭೂಕುಸಿತದಲ್ಲಿ 300ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, ಹಲವಾರು ಮಂದಿ ಕಾಣೆಯಾಗಿದ್ದಾರೆ.
ಇನ್ನು ನೆರೆ ಸಂತ್ರಸ್ಥರಿಗೆ ನೆರವಾಗಲು ಹಲವಾರು ನಟ ನಟಿಯರು, ವಿವಿಧ ಸೆಲೆಬ್ರೆಟಿಗಳು ಧಾವಿಸಿದ್ದಾರೆ.
ಇತ್ತ ಟಾಲಿವುಡ್ನ ಮೆಗಾ ಪವರ್ಸ್ಟಾರ್ ಕುಟುಂಬ ಒಂದು ಕೋಟಿ ರೂ. ದೇಣಿಗೆ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಟಾಲಿವುಡ್ನ ಮೆಗಾ ಸ್ಟಾರ್ ಚಿರಂಜೀವಿ ಹಾಗೂ ಅವರ ಪುತ್ರ ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಇಬ್ಬರು ಸೇರಿ ಒಂದು ಕೋಟಿ ದೇಣಿಗೆ ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಚಿರಂಜೀವಿ, ಕಳೆದ ಕೆಲವು ದಿನಗಳಿಂದ ಕೇರಳದಲ್ಲಿ ಪ್ರಕೃತಿಯ ಪ್ರಕೋಪದಿಂದಾಗಿ ನೂರಾರು ಅಮೂಲ್ಯ ಜೀವಗಳ ವಿನಾಶ ಮತ್ತು ನಷ್ಟದಿಂದ ತೀವ್ರ ನೊಂದಿದ್ದೇನೆ.
ವಯನಾಡ್ ದುರಂತದ ಸಂತ್ರಸ್ತರಿಗೆ ನನ್ನ ಹೃದಯವಿದೆ. ಸಂತ್ರಸ್ತರಿಗೆ ನಮ್ಮ ಬೆಂಬಲದ ಸಂಕೇತವಾಗಿ ಚರಣ್ ಮತ್ತು ನಾನು ಒಟ್ಟಾಗಿ 1 ಕೋಟಿ ರೂಪಾಯಿಗಳನ್ನು ಕೇರಳ ಸಿಎಂ ಪರಿಹಾರ ನಿಧಿಗೆ ನೀಡುತ್ತಿದ್ದೇವೆ. ನೋವಿನಲ್ಲಿರುವವರೆಲ್ಲ ಚೇತರಿಸಿಕೊಳ್ಳಲಿ ಎಂದು ನನ್ನ ಪ್ರಾರ್ಥನೆ! ಎಂದು ಸುದೀರ್ಘವಾಗಿ ಬರೆದುಕೊಂಡು ತಮ್ಮ ಮನದಾಳದ ನೋವನ್ನು ವ್ಯಕ್ತಪಡಿಸಿದ್ದಾರೆ.
ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…