ಮನರಂಜನೆ

ಸಿನಿಮಾ ಒಂದೇ ಅಲ್ಲ, ಜನರಿಗೆ ಸಾವಿರ ಆಯ್ಕೆಗಳಿವೆ: ರಿಷಭ್ ಶೆಟ್ಟಿ

ಮೊದಲು ಹೀಗಿರಲಿಲ್ಲ, ಕೋವಿಡ್‍ ನಂತರ ಜನ ಕ್ರಮೇಣ ಚಿತ್ರಮಂದಿರಗಳಿಂದ ವಿಮುಖರಾದರು. ಇದಕ್ಕೆ ಓಟಿಟಿ ಕಾರಣ ಎನ್ನಲಾಯ್ತು, ಚಿತ್ರಗಳ ಗುಣಮಟ್ಟ ಎಂದು ಹೇಳಲಾಯ್ತು. ಕಾರಣ ಏನೇ ಇರಲಿ, ಮೊದಲಿಗೆ ಹೋಲಿಸಿದರೆ, ಜನ ಚಿತ್ರಮಂದಿರಗಳ ಕಡೆ ಬರುವುದು ಕಡಿಮೆಯಾಗಿದೆ. ಈ ಬಗ್ಗೆ ಸಾಕಷ್ಟು ನಟರು, ನಿರ್ದೇಶಕರು ಮಾತನಾಡಿದ್ದಾರೆ. ಕೆಲವು ದಿನಗಳ ಹಿಂದಷ್ಟೇ ‘ಶಿವಮ್ಮ’ ಚಿತ್ರದ ಪತ್ರಿಕಾಗೋಷ್ಠಿಯ ನಂತರ ರಿಷಭ್‍ ಶೆಟ್ಟಿ ಒಂದಿಷ್ಟು ವಿಷಯಗಳನ್ನು ಹಂಚಿಕೊಂಡಿದ್ದರು.

ಈಗ ಪುನಃ ಒಂದಿಷ್ಟು ಮಾತನಾಡಿದ್ದಾರೆ. ಅದಕ್ಕೆ ವೇದಿಕೆಯಾಗಿದ್ದು ‘ಲಾಫಿಂಗ್‍ ಬುದ್ಧ’ ಚಿತ್ರದ ಹಾಡು ಬಿಡುಗಡೆ ಸಮಾರಂಭ. ಹಾಡು ಬಿಡುಗಡೆಯ ನಂತರ ರಿಷಭ್‍ ಚಿತ್ರರಂಗದ ಕುರಿತು ಕೆಲವು ವಿಷಯಗಳನ್ನು ಹಂಚಿಕೊಳ್ಳುವುದರ ಜೊತೆಗೆ, ಇವತ್ತು ಸಿನಿಮಾ ಒಂದೇ ಅಲ್ಲ, ಜನರ ಮುಂದೆ ಹಲವು ಆಯ್ಕೆಗಳಿವೆ ಎಂದು ಹೇಳಿದ್ದಾರೆ.

ಚಿತ್ರಮಂದಿರದಲ್ಲಿ ನೋಡುವಂಥ ಅನುಭವ ಕೊಟ್ಟರೆ ತಾನೇ ಜನ ಚಿತ್ರಮಂದಿರಗಳಿಗೆ ಬರೋದು ಎನ್ನುವ ರಿಷಭ್, ‘ಜನ ಚಿತ್ರ ನೋಡುತ್ತಿಲ್ಲ ಎಂದು ಬಯ್ಯುವುದು ಸರಿಯಲ್ಲ. ಜನ ಚಿತ್ರಮಂದಿರಕ್ಕೆ ಬರೋದು ಅಲ್ಲಿನ ಅನುಭವ ಪಡೆಯೋಕೆ. ಆದರೆ, ಚಿತ್ರಮಂದಿರಗಳಿಗೆ ಸಿನಿಮಾ ಮಾಡೋದನ್ನು ಕಡಿಮೆ ಮಾಡಿದ್ದಾರೆ. ಕಥೆ, ಚಿತ್ರಗಳು ಚೆನ್ನಾಗಿರಬಹುದು. ಆದರೆ, ಚಿತ್ರಮಂದಿರದಲ್ಲಿ ನೋಡುವ ಅನುಭವ ಕೊಟ್ಟರೆ ತಾನೇ ಜನ ಚಿತ್ರಮಂದಿರಗಳಿಗೆ ಬರೋದು. ಆಮೇಲೆ ಜನ ಬರಲಿಲ್ಲ ಎಂದು ಬಯ್ಯುವುದು ಸರಿಯಲ್ಲ. ಜನರಿಗೆ ಸಾವಿರ ಆಯ್ಕೆಗಳಿವೆ. ಒಮ್ಮೆ ಫೋನ್‍ ತೆಗೆದುಕೊಂಡು ಪ್ರತಿದಿನ ಎಷ್ಟು ಸ್ಕ್ರೀನ್ ಸಮಯ ಆಗಿದೆ ಎಂದು ಗಮನಿಸಿ. ಕನಿಷ್ಠವೆಂದರೂ ಪ್ರತಿಯೊಬ್ಬರೂ ನಾಲ್ಕೈದು ಗಂಟೆಗಳ ಕಾಲ ನಾವು ಮೊಬೈಲ್‍ ನೋಡಿರುತ್ತೇವೆ. ಜನ ಹಾಗೆ ಮೊಬೈಲ್‍ ಒಳಗೆ ಕಳೆದುಹೋಗಿದ್ದಾರೆ’ ಎಂದರು.

‘ಸಿನಿಮಾ ಮಾಡುವವರ ಸಂಖ್ಯೆ ಜಾಸ್ತಿಯಾಗಿರುವುದರಿಂದ, ನೋಡೋರು ಕಡಿಮೆಯಾಗಿದ್ದಾರೆ. ಮನೆಯಲ್ಲಿ ಗಂಡ-ಹೆಂಡತಿ ಯಾವುದೋ ವೀಡಿಯೋ ಶೂಟಿಂಗ್ ಮಾಡುತ್ತಿರುತ್ತಾರೆ. ಅವರೇ ಎಡಿಟ್‍ ಮಾಡಿ, ಮ್ಯೂಸಿಕ್‍ ಮಾಡುತ್ತಿರುತ್ತಾರೆ. ಅದು ಮಿಲಿಯನ್‍ಗಟ್ಟಲೆ ವೀಕ್ಷಣೆ ಆಗುತ್ತಿರುತ್ತದೆ. ಅದರ ಕಾಮೆಂಟ್ಸ್ ನೋಡುವುದರಲ್ಲಿ ಅವರು ಬ್ಯುಸಿಯಾಗಿರುತ್ತಾರೆ. ಅವರು ನಮಗಿಂತ ಬಹಳ ಬ್ಯುಸಿಯಾಗಿರುತ್ತಾರೆ. ಹಾಗಿರುವಾಗ ಅವರು ಚಿತ್ರಮಂದಿರಕ್ಕೇಕೆ ಬರುತ್ತಾರೆ?’ ಎಂದರು.

ಮುಂದಿನ ದಿನಗಳಲ್ಲಿ ಪರಿಸ್ಥಿತಿ ಸುಧಾರಿಸಬಹುದು ಎಂಬ ಆಶಾಭಾವನೆ ಇದೆ ಎಂದ ರಿಷಭ್, ‘ಬಹಳ ದಿನಗಳಿಂದ ಜನ ಚಿತ್ರಮಂದಿರಗಳಿಗೆ ಬಂದಿಲ್ಲ. ‘ಭೀಮ’ದಿಂದ ಜನ ಚಿತ್ರಮಂದಿರಗಳಿಗೆ ಬರಬಹುದು ಎಂಬ ನಂಬಿಕೆ ಇದೆ. ನಂತರ ಗಣೇಶ್‍ ಅವರ ಚಿತ್ರಕ್ಕೆ ಬರಬಹುದು. ‘ಪೌಡರ್‍’ಗೆ ಬರಬಹುದು. ಒಂದಿಷ್ಟು ನಿರೀಕ್ಷೆಯ ಚಿತ್ರಗಳು ಇರುವುದರ ಜೊತೆಗೆ, ಚಿತ್ರಮಂದಿರದಲ್ಲಿ ಒಳ್ಳೆಯ ಅನುಭವ ಕೊಡುವ ಚಿತ್ರಗಳಿರುವುದರಿಂದ ಪರಿಸ್ಥಿತಿ ಸರಿ ಹೋಗಬಹುದು ಎಂಬ ನಂಬಿಕೆ ಇದೆ. ಜನರಿಗೂ ಆ ನಂಬಿಕೆ ಉಳಿದರೆ ಜನ ಇನ್ನಷ್ಟು ಸಂಖ್ಯೆಯಲ್ಲಿ ಬರಬಹುದು ಎಂಬ ಆಶಾಭಾವನೆ ಇದೆ’ ಎಂದರು.

ಭೂಮಿಕಾ

Recent Posts

ಓದುಗರ ಪತ್ರ:  ಕುಸ್ತಿಪಟುಗಳಿಗೆ ತರಬೇತಿ ಸ್ವಾಗತಾರ್ಹ

ರಾಜ್ಯದಲ್ಲಿ ೩೧೫ ಕುಸ್ತಿಪಟುಗಳಿಗೆ ಉಚಿತವಾಗಿ ನುರಿತ ಕುಸ್ತಿ ತರಬೇತುದಾರರಿಂದ ವೈಜ್ಞಾನಿಕ ಕ್ರೀಡಾ ತರಬೇತಿ ನೀಡಲಾಗುತ್ತಿದೆ ಹಾಗೂ ರಾಜ್ಯದಲ್ಲಿ ಕ್ರೀಡಾ ಅಭಿವೃದ್ಧಿಗಾಗಿ…

4 mins ago

ಓದುಗರ ಪತ್ರ:  ರಾಜ್ಯ ಸರ್ಕಾರಿ ನೌಕರರಿಗೆ ವಸ್ತ್ರಸಂಹಿತೆ ಒಳ್ಳೆಯ ಬೆಳವಣಿಗೆ

ರಾಜ್ಯ ಸರ್ಕಾರಿ ನೌಕರರು ಕಚೇರಿಗೆ ಬರುವಾಗ ಸಭ್ಯ ಉಡುಪುಗಳನ್ನು ಧರಿಸಿಕೊಂಡು ಬರುವಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿರುವುದು ಸ್ವಾಗತಾರ್ಹವಾಗಿದೆ. ಕೆಲವು…

8 mins ago

ಓದುಗರ ಪತ್ರ:  ವರುಣ ನಾಲೆಗೆ ತಡೆಗೋಡೆ ನಿರ್ಮಿಸಿ

ಮೈಸೂರಿನ ಲಲಿತಾದ್ರಿಪುರ ರಿಂಗ್ ರಸ್ತೆಯಲ್ಲಿರುವ ಮಾರ್ವೆಲ್ ಶಾಲಾ- ಕಾಲೇಜು ಮುಂಭಾಗದಿಂದ ಸ್ವಲ್ಪ ದೂರ ಸಾಗಿದರೆ ವರುಣ ನಾಲೆ ಕಾಲುವೆ ಸಿಗುತ್ತದೆ.…

9 mins ago

ಮೈಸೂರು ಮುಡಾ ಹಗರಣ: ಇಂದು ಸಿಎಂ ಸಿದ್ದರಾಮಯ್ಯ ಭವಿಷ್ಯ ನಿರ್ಧಾರ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣ ಪ್ರಕರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್‌ಚಿಟ್‌ ಕುರಿತು ಜನಪ್ರತಿನಿಧಿಗಳ ನ್ಯಾಯಾಲಯ ಇಂದು ಆದೇಶ…

12 mins ago

ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಸೈಕ್ಲಿಂಗ್‌

ಕಾಶ್ಮೀರದಿಂದ ಕನ್ಯಾಕುಮಾರಿಯವರೆಗಿನ ಭಾರತದಲ್ಲಿ ಹಲವಾರು ರಾಜ್ಯ, ಹಲವಾರು ಧರ್ಮ, ಹಲವಾರು ಆಹಾರ ವೈವಿಧ್ಯತೆ, ಹಲವಾರು ಭಾಷೆ, ಹಲವಾರು ಸಂಸ್ಕ ತಿಗಳು…

53 mins ago

ಅಡಕೆಗೆ ಎಲೆಚುಕ್ಕಿ, ಹಳದಿ ರೋಗ ಬಾಧೆ

ಕೊಡಗು ಜಿಲ್ಲೆಯಲ್ಲಿಯೂ ಕಾಣಿಸಿಕೊಳ್ಳುತ್ತಿರುವ ರೋಗ; ಹತೋಟಿಗೆ ಔಷಧಿ ಜೊತೆಗೆ ಸೂಕ್ತ ಪರಿಹಾರಕ್ಕೆ ಒತ್ತಾಯ ಮಡಿಕೇರಿ: ವಾಣಿಜ್ಯ ಬೆಳೆಯಾಗಿ ಕೃಷಿಕರ ಬದುಕಿಗೆ ಆಶ್ರಯವಾಗಿರುವ…

1 hour ago