ಮನರಂಜನೆ

ಸಿನಿಮಾ ಒಂದೇ ಅಲ್ಲ, ಜನರಿಗೆ ಸಾವಿರ ಆಯ್ಕೆಗಳಿವೆ: ರಿಷಭ್ ಶೆಟ್ಟಿ

ಮೊದಲು ಹೀಗಿರಲಿಲ್ಲ, ಕೋವಿಡ್‍ ನಂತರ ಜನ ಕ್ರಮೇಣ ಚಿತ್ರಮಂದಿರಗಳಿಂದ ವಿಮುಖರಾದರು. ಇದಕ್ಕೆ ಓಟಿಟಿ ಕಾರಣ ಎನ್ನಲಾಯ್ತು, ಚಿತ್ರಗಳ ಗುಣಮಟ್ಟ ಎಂದು ಹೇಳಲಾಯ್ತು. ಕಾರಣ ಏನೇ ಇರಲಿ, ಮೊದಲಿಗೆ ಹೋಲಿಸಿದರೆ, ಜನ ಚಿತ್ರಮಂದಿರಗಳ ಕಡೆ ಬರುವುದು ಕಡಿಮೆಯಾಗಿದೆ. ಈ ಬಗ್ಗೆ ಸಾಕಷ್ಟು ನಟರು, ನಿರ್ದೇಶಕರು ಮಾತನಾಡಿದ್ದಾರೆ. ಕೆಲವು ದಿನಗಳ ಹಿಂದಷ್ಟೇ ‘ಶಿವಮ್ಮ’ ಚಿತ್ರದ ಪತ್ರಿಕಾಗೋಷ್ಠಿಯ ನಂತರ ರಿಷಭ್‍ ಶೆಟ್ಟಿ ಒಂದಿಷ್ಟು ವಿಷಯಗಳನ್ನು ಹಂಚಿಕೊಂಡಿದ್ದರು.

ಈಗ ಪುನಃ ಒಂದಿಷ್ಟು ಮಾತನಾಡಿದ್ದಾರೆ. ಅದಕ್ಕೆ ವೇದಿಕೆಯಾಗಿದ್ದು ‘ಲಾಫಿಂಗ್‍ ಬುದ್ಧ’ ಚಿತ್ರದ ಹಾಡು ಬಿಡುಗಡೆ ಸಮಾರಂಭ. ಹಾಡು ಬಿಡುಗಡೆಯ ನಂತರ ರಿಷಭ್‍ ಚಿತ್ರರಂಗದ ಕುರಿತು ಕೆಲವು ವಿಷಯಗಳನ್ನು ಹಂಚಿಕೊಳ್ಳುವುದರ ಜೊತೆಗೆ, ಇವತ್ತು ಸಿನಿಮಾ ಒಂದೇ ಅಲ್ಲ, ಜನರ ಮುಂದೆ ಹಲವು ಆಯ್ಕೆಗಳಿವೆ ಎಂದು ಹೇಳಿದ್ದಾರೆ.

ಚಿತ್ರಮಂದಿರದಲ್ಲಿ ನೋಡುವಂಥ ಅನುಭವ ಕೊಟ್ಟರೆ ತಾನೇ ಜನ ಚಿತ್ರಮಂದಿರಗಳಿಗೆ ಬರೋದು ಎನ್ನುವ ರಿಷಭ್, ‘ಜನ ಚಿತ್ರ ನೋಡುತ್ತಿಲ್ಲ ಎಂದು ಬಯ್ಯುವುದು ಸರಿಯಲ್ಲ. ಜನ ಚಿತ್ರಮಂದಿರಕ್ಕೆ ಬರೋದು ಅಲ್ಲಿನ ಅನುಭವ ಪಡೆಯೋಕೆ. ಆದರೆ, ಚಿತ್ರಮಂದಿರಗಳಿಗೆ ಸಿನಿಮಾ ಮಾಡೋದನ್ನು ಕಡಿಮೆ ಮಾಡಿದ್ದಾರೆ. ಕಥೆ, ಚಿತ್ರಗಳು ಚೆನ್ನಾಗಿರಬಹುದು. ಆದರೆ, ಚಿತ್ರಮಂದಿರದಲ್ಲಿ ನೋಡುವ ಅನುಭವ ಕೊಟ್ಟರೆ ತಾನೇ ಜನ ಚಿತ್ರಮಂದಿರಗಳಿಗೆ ಬರೋದು. ಆಮೇಲೆ ಜನ ಬರಲಿಲ್ಲ ಎಂದು ಬಯ್ಯುವುದು ಸರಿಯಲ್ಲ. ಜನರಿಗೆ ಸಾವಿರ ಆಯ್ಕೆಗಳಿವೆ. ಒಮ್ಮೆ ಫೋನ್‍ ತೆಗೆದುಕೊಂಡು ಪ್ರತಿದಿನ ಎಷ್ಟು ಸ್ಕ್ರೀನ್ ಸಮಯ ಆಗಿದೆ ಎಂದು ಗಮನಿಸಿ. ಕನಿಷ್ಠವೆಂದರೂ ಪ್ರತಿಯೊಬ್ಬರೂ ನಾಲ್ಕೈದು ಗಂಟೆಗಳ ಕಾಲ ನಾವು ಮೊಬೈಲ್‍ ನೋಡಿರುತ್ತೇವೆ. ಜನ ಹಾಗೆ ಮೊಬೈಲ್‍ ಒಳಗೆ ಕಳೆದುಹೋಗಿದ್ದಾರೆ’ ಎಂದರು.

‘ಸಿನಿಮಾ ಮಾಡುವವರ ಸಂಖ್ಯೆ ಜಾಸ್ತಿಯಾಗಿರುವುದರಿಂದ, ನೋಡೋರು ಕಡಿಮೆಯಾಗಿದ್ದಾರೆ. ಮನೆಯಲ್ಲಿ ಗಂಡ-ಹೆಂಡತಿ ಯಾವುದೋ ವೀಡಿಯೋ ಶೂಟಿಂಗ್ ಮಾಡುತ್ತಿರುತ್ತಾರೆ. ಅವರೇ ಎಡಿಟ್‍ ಮಾಡಿ, ಮ್ಯೂಸಿಕ್‍ ಮಾಡುತ್ತಿರುತ್ತಾರೆ. ಅದು ಮಿಲಿಯನ್‍ಗಟ್ಟಲೆ ವೀಕ್ಷಣೆ ಆಗುತ್ತಿರುತ್ತದೆ. ಅದರ ಕಾಮೆಂಟ್ಸ್ ನೋಡುವುದರಲ್ಲಿ ಅವರು ಬ್ಯುಸಿಯಾಗಿರುತ್ತಾರೆ. ಅವರು ನಮಗಿಂತ ಬಹಳ ಬ್ಯುಸಿಯಾಗಿರುತ್ತಾರೆ. ಹಾಗಿರುವಾಗ ಅವರು ಚಿತ್ರಮಂದಿರಕ್ಕೇಕೆ ಬರುತ್ತಾರೆ?’ ಎಂದರು.

ಮುಂದಿನ ದಿನಗಳಲ್ಲಿ ಪರಿಸ್ಥಿತಿ ಸುಧಾರಿಸಬಹುದು ಎಂಬ ಆಶಾಭಾವನೆ ಇದೆ ಎಂದ ರಿಷಭ್, ‘ಬಹಳ ದಿನಗಳಿಂದ ಜನ ಚಿತ್ರಮಂದಿರಗಳಿಗೆ ಬಂದಿಲ್ಲ. ‘ಭೀಮ’ದಿಂದ ಜನ ಚಿತ್ರಮಂದಿರಗಳಿಗೆ ಬರಬಹುದು ಎಂಬ ನಂಬಿಕೆ ಇದೆ. ನಂತರ ಗಣೇಶ್‍ ಅವರ ಚಿತ್ರಕ್ಕೆ ಬರಬಹುದು. ‘ಪೌಡರ್‍’ಗೆ ಬರಬಹುದು. ಒಂದಿಷ್ಟು ನಿರೀಕ್ಷೆಯ ಚಿತ್ರಗಳು ಇರುವುದರ ಜೊತೆಗೆ, ಚಿತ್ರಮಂದಿರದಲ್ಲಿ ಒಳ್ಳೆಯ ಅನುಭವ ಕೊಡುವ ಚಿತ್ರಗಳಿರುವುದರಿಂದ ಪರಿಸ್ಥಿತಿ ಸರಿ ಹೋಗಬಹುದು ಎಂಬ ನಂಬಿಕೆ ಇದೆ. ಜನರಿಗೂ ಆ ನಂಬಿಕೆ ಉಳಿದರೆ ಜನ ಇನ್ನಷ್ಟು ಸಂಖ್ಯೆಯಲ್ಲಿ ಬರಬಹುದು ಎಂಬ ಆಶಾಭಾವನೆ ಇದೆ’ ಎಂದರು.

ಭೂಮಿಕಾ

Recent Posts

ಹೆಬ್ಜುಲ್ಲಾ ಭದ್ರಕೋಟೆ ಟಾರ್ಗೆಟ್‌ ಮಾಡಿ ಇಸ್ರೇಲ್‌ ದಾಳಿ: 11 ಮಂದಿ ಸಾವು

ಬೈರುತ್‌: ಅಮೇರಿಕಾ-ಇರಾನ್‌ ಮಾತುಕತೆ ವಿಫಲವಾದ ಕೆಲವೇ ಗಂಟೆಗಳ ನಂತರ ಹೆಬ್ಜುಲ್ಲಾ ಭದ್ರಕೋಟೆಯನ್ನು ಗುರಿಯಾಗಿಸಿಕೊಂಡು ಇಸ್ರೇಲ್‌ ನಡೆಸಿದ ದಾಳಿಯಲ್ಲಿ 11 ಮಂದಿ…

5 mins ago

ಶಕ್ತಿ ಯೋಜನೆ ಟಿಕೆಟ್ ದುರ್ಬಳಕೆ : ಬಿಎಂಟಿಸಿ ಐವರು ಕಂಡಕ್ಟರ್‌ ಅಮಾನತು

ಬೆಂಗಳೂರು : ಶಕ್ತಿ ಯೋಜನೆಯ ಮಹಿಳಾ ಟಿಕೆಟ್‌ಗಳನ್ನು ಪುರುಷ ಪ್ರಯಾಣಿಕರಿಗೂ ನೀಡಿ ಹಣ ಸಂಗ್ರಹಿಸಿ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ…

56 mins ago

ಕೃಷಿ ಪದವಿ ಪಡೆಯಲು ಸುವರ್ಣ ಅವಕಾಶ : 50% ಮೀಸಲು, ಏಪ್ರಿಲ್ 29ಕ್ಕೆ ಪ್ರಾಯೋಗಿಕ ಪರೀಕ್ಷೆ

ಮೈಸೂರು : ರಾಜ್ಯದಲ್ಲಿ ಕೃಷಿ, ತೋಟಗಾರಿಕೆ, ಪಶುವೈದ್ಯಕೀಯ ಮತ್ತು ಅರಣ್ಯ ಶಾಸ್ತ್ರ ಪದವಿಗಳಿಗೆ ಕೃಷಿಕರ ಕೋಟಾದಡಿ (50%) ಅಡಿಯಲ್ಲಿ ವಿದ್ಯಾರ್ಥಿಗಳಿಗೆ…

1 hour ago

ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ

ಮುಂಬೈ : ಖ್ಯಾತ ಗಾಯಕಿ ಆಶಾ ಭೋಸ್ಲೆ (92) ಅವರು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಆಶಾ ಭೋಸ್ಲೆ ಅವರಿಗೆ…

2 hours ago

ಸಚಿವ ಸಂಪುಟ ಪುನರಾಚನೆಗೆ ಒತ್ತಡ ; ಕಾಂಗ್ರೆಸ್ ಶಾಸಕರು ಇಂದು ದೆಹಲಿಗೆ.

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ಪುನರಾಚನೆಗೆ ಒತ್ತಡ ಹೆಚ್ಚಾಗಿದ್ದು, 20ಕ್ಕೂ ಹೆಚ್ಚು ಶಾಸಕರು ಇಂದು (ಭಾನುವಾರ)…

2 hours ago

ಓದುಗರ ಪತ್ರ | ಕಿಕ್ಕೇರಿ ಕೆರೆಗೆ ಕೆಎಸ್‌ನ ಹೆಸರು ನಾಮಕರಣ ಶ್ಲಾಘನೀಯ

ಕನ್ನಡಕ್ಕೆ ಶ್ರೇಷ್ಠ ದಾಂಪತ್ಯ ಗೀತೆಗಳನ್ನು ನೀಡಿದ, ಪ್ರೇಮಕವಿಯೆಂದೇ ಹೆಸರಾದ ನಾಡಿನ ಹಿರಿಯ ಕವಿ ಕೆ.ಎಸ್.ನರಸಿಂಹಸ್ವಾಮಿ ಅವರ ಗೌರವಾರ್ಥವಾಗಿ ಹುಟ್ಟೂರಾದ ಕಿಕ್ಕೇರಿಯ…

3 hours ago