ಮನರಂಜನೆ

ಚಲನಚಿತ್ರ ವೀಕ್ಷಕರಿಗೆ ಸಿಹಿ ಸುದ್ದಿ; ಈ ದಿನದಂದು ಮಲ್ಟಿಪ್ಲೆಕ್ಸ್ ಟಿಕೆಟ್ ಬೆಲೆ 99ಕ್ಕೆ ಇಳಿಕೆ

ಬೆಂಗಳೂರು: ‘ಮಲ್ಟಿಫ್ಲೆಕ್ಸ್ ಅಸೋಸಿಯೇಷನ್ ಆಫ್ ಇಂಡಿಯಾ’ ವತಿಯಿಂದ ಸೆ.20ರಂದು ರಾಷ್ಟ್ರೀಯ ಸಿನಿಮಾ ದಿನದ ಪ್ರಯುಕ್ತ ಚಲನಚಿತ್ರ ಪ್ರಿಯರಿಗೆ ರಾಷ್ಟ್ರವ್ಯಾಪಿ ಚಿತ್ರಮಂದಿರಗಳಲ್ಲಿ ಟಿಕೆಟ್‌ ದರವನ್ನು 99 ರೂ.ಗೆ ಇಳಿಕೆ ಮಾಡಿ ಸಿನಿಮಾ ವೀಕ್ಷಕರಿಗೆ ಸಿಹಿ ಸುದ್ದಿ ನೀಡಲು ನಿರ್ಧರಿಸಿದೆ.

ರಾಷ್ಟ್ರೀಯ ಸಿನಿಮಾ ದಿನದ ಅಂಗವಾಗಿ ಸೆ.20ರಂದು ಸಿನಿಮಾ ವೀಕ್ಷಿಸುವ ಪ್ರೇಕ್ಷಕರಿಗೆ ಕೈಗೆಟುಕುವ ಬೆಲೆಯಲ್ಲಿ ವಿಶೇಷ ರಿಯಾಯಿತಿ ನೀಡಲಾಗುತ್ತಿದೆ. ಅಲ್ಲದೆ ಆ ದಿನ ಸಿನಿಪೊಲೀಸ್, ಪಿವಿಆರ್, ಐನಾಕ್ಸ್, ಮೀರಜ್, ಸಿಟಿಪ್ರೈಡ್ ಒಳಗೊಂಡಂತೆ ಇನ್ನಿತರ 4000ಕ್ಕೂ ಅಧಿಕ ಥಿಯೇಟರ್‌ಗಳಲ್ಲಿ ರಾಷ್ಟ್ರೀಯ ಸಿನಿಮಾ ದಿನವನ್ನು ಆಚರಸಲಿದೆ. ಹೀಗಾಗಿ ದೇಶದ್ಯಾಂತ ಸಿನಿಮಾ ವೀಕ್ಷಿಸುವ ಪ್ರೇಕ್ಷಕರು ಕೇವಲ 99 ರೂ.ಗೆ ಚಲನಚಿತ್ರ ನೋಡುವ ಅವಕಾಶ ನೀಡಲಾಗಿದೆ.

ಮಲ್ಟಿಪ್ಲೆಕ್ಸ್‌ ಅಸೋಸಿಯೇಷನ್‌ ಆಫ್‌ ಇಂಡಿಯಾ ಟಿಕೆಟ್‌ ದರ ಇಳಿಕೆ ಮಾಡಿರುವುದಲ್ಲದೆ, ಚಿತ್ರಮಂದಿರಗಳಲ್ಲೇ ಆಹಾರ ಪದಾರ್ಥಗಳ ಮೇಲೆ ಒಳ್ಳೆಯ ಆಫರ್‌ಗಳನ್ನು ನೀಡಿದೆ. ಪ್ರಸ್ತುತ ರಾಜ್ಯದಲ್ಲಿ ಕೃಷ್ಣಂ ಪ್ರಣಯ ಸಖಿ, ಇಬ್ಬನಿ ತಬ್ಬಿದ ಇಳೆಯಲಿ,‌ ಸ್ತ್ರೀ 2, ಇನ್ನಿತರ ಚಲನಚಿತ್ರಗಳು ಚಿತ್ರಮಂದಿರಗಳಲ್ಲಿ ಸದ್ದು ಮಾಡುತ್ತಿವೆ. ಈ ಮಧ್ಯೆ ಟಿಕೆಟ್‌ ದರವನ್ನು 99 ರೂ.ಗೆ ಇಳಿಕೆ ಮಾಡಿ ಸಿನಿಮಾ ಪ್ರಿಯರಿಗೆ ಸಿಹಿ ಸುದ್ದಿ ಕೊಟ್ಟಿದೆ. ಈ ಕುರಿತು ಥಿಯೇಟರ್‌ಗಳ ವೈಬ್‌ಸೈಟ್‌ನಲ್ಲಿ ಸಂಪೂರ್ಣ ವಿವರ ದೊರಕಲಿದೆ. ಅಷ್ಟೇ ಅಲ್ಲದೆ ಆನ್‌ಲೈನ್‌ನಲ್ಲಿ ಸಹ ಸಿನಿಮಾ ಟಿಕೆಟ್ ಬುಕ್ಕಿಂಗ್ ಅವಕಾಶ ಕಲ್ಪಿಸಲಾಗಿದೆ.

ಅರ್ಚನ ಎಸ್‌ ಎಸ್

Recent Posts

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

47 mins ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

1 hour ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

1 hour ago

ಕರ್ನಾಟಕ ಪಬ್ಲಿಕ್ ಶಾಲೆಗೆ ಮೇಲ್ದರ್ಜೇಗೇರಿಸಲು ಅಗತ್ಯ ಕ್ರಮ: ʻಜಿಟಿಡಿʼ

ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…

2 hours ago

ಪಶ್ಚಿಮಘಟ್ಟ: 16114 ಚ.ಕಿ.ಮೀ. ಪರಿಸರ ಸೂಕ್ಷ್ಮ ಪ್ರದೇಶ ಮಿತಿ ಸೂಕ್ತ :ಈಶ್ವರ ಖಂಡ್ರೆ

ಪಶ್ಚಿಮಘಟ್ಟ ಕುರಿತ ಕಸ್ತೂರಿ ರಂಗನ್ ವರದಿ ಬಗ್ಗೆ ಬಾಧ್ಯಸ್ಥರ ಸಭೆ ಬೆಂಗಳೂರು: ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ…

2 hours ago

ರಾಜ್ಯದಲ್ಲಿ ತುರ್ತು ಪರಿಸ್ಥಿತಿ, ರಾಜ್ಯಪಾಲರ ಅಧಿಕಾರ ಕಿತ್ತುಕೊಳ್ಳುವ ಪ್ರಯತ್ನ: ಆರ್‌.ಅಶೋಕ

ಕಾಂಗ್ರೆಸ್‌ ಮಾಡುವ ಪಾಪಕ್ಕೆ ಮುಂದಿನ ದಿನಗಳಲ್ಲಿ ಪಶ್ಚಾತ್ತಾಪ ಪಡಬೇಕಾಗುತ್ತದೆ ದೊಡ್ಡಬಳ್ಳಾಪುರ: ಕರ್ನಾಟಕದಲ್ಲಿ ತುರ್ತು ಪರಿಸ್ಥಿತಿ ಸೃಷ್ಟಿಯಾಗಿದ್ದು, ಪೊಲೀಸರನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ…

2 hours ago