ಮನರಂಜನೆ

ಚಲನಚಿತ್ರ ವೀಕ್ಷಕರಿಗೆ ಸಿಹಿ ಸುದ್ದಿ; ಈ ದಿನದಂದು ಮಲ್ಟಿಪ್ಲೆಕ್ಸ್ ಟಿಕೆಟ್ ಬೆಲೆ 99ಕ್ಕೆ ಇಳಿಕೆ

ಬೆಂಗಳೂರು: ‘ಮಲ್ಟಿಫ್ಲೆಕ್ಸ್ ಅಸೋಸಿಯೇಷನ್ ಆಫ್ ಇಂಡಿಯಾ’ ವತಿಯಿಂದ ಸೆ.20ರಂದು ರಾಷ್ಟ್ರೀಯ ಸಿನಿಮಾ ದಿನದ ಪ್ರಯುಕ್ತ ಚಲನಚಿತ್ರ ಪ್ರಿಯರಿಗೆ ರಾಷ್ಟ್ರವ್ಯಾಪಿ ಚಿತ್ರಮಂದಿರಗಳಲ್ಲಿ ಟಿಕೆಟ್‌ ದರವನ್ನು 99 ರೂ.ಗೆ ಇಳಿಕೆ ಮಾಡಿ ಸಿನಿಮಾ ವೀಕ್ಷಕರಿಗೆ ಸಿಹಿ ಸುದ್ದಿ ನೀಡಲು ನಿರ್ಧರಿಸಿದೆ.

ರಾಷ್ಟ್ರೀಯ ಸಿನಿಮಾ ದಿನದ ಅಂಗವಾಗಿ ಸೆ.20ರಂದು ಸಿನಿಮಾ ವೀಕ್ಷಿಸುವ ಪ್ರೇಕ್ಷಕರಿಗೆ ಕೈಗೆಟುಕುವ ಬೆಲೆಯಲ್ಲಿ ವಿಶೇಷ ರಿಯಾಯಿತಿ ನೀಡಲಾಗುತ್ತಿದೆ. ಅಲ್ಲದೆ ಆ ದಿನ ಸಿನಿಪೊಲೀಸ್, ಪಿವಿಆರ್, ಐನಾಕ್ಸ್, ಮೀರಜ್, ಸಿಟಿಪ್ರೈಡ್ ಒಳಗೊಂಡಂತೆ ಇನ್ನಿತರ 4000ಕ್ಕೂ ಅಧಿಕ ಥಿಯೇಟರ್‌ಗಳಲ್ಲಿ ರಾಷ್ಟ್ರೀಯ ಸಿನಿಮಾ ದಿನವನ್ನು ಆಚರಸಲಿದೆ. ಹೀಗಾಗಿ ದೇಶದ್ಯಾಂತ ಸಿನಿಮಾ ವೀಕ್ಷಿಸುವ ಪ್ರೇಕ್ಷಕರು ಕೇವಲ 99 ರೂ.ಗೆ ಚಲನಚಿತ್ರ ನೋಡುವ ಅವಕಾಶ ನೀಡಲಾಗಿದೆ.

ಮಲ್ಟಿಪ್ಲೆಕ್ಸ್‌ ಅಸೋಸಿಯೇಷನ್‌ ಆಫ್‌ ಇಂಡಿಯಾ ಟಿಕೆಟ್‌ ದರ ಇಳಿಕೆ ಮಾಡಿರುವುದಲ್ಲದೆ, ಚಿತ್ರಮಂದಿರಗಳಲ್ಲೇ ಆಹಾರ ಪದಾರ್ಥಗಳ ಮೇಲೆ ಒಳ್ಳೆಯ ಆಫರ್‌ಗಳನ್ನು ನೀಡಿದೆ. ಪ್ರಸ್ತುತ ರಾಜ್ಯದಲ್ಲಿ ಕೃಷ್ಣಂ ಪ್ರಣಯ ಸಖಿ, ಇಬ್ಬನಿ ತಬ್ಬಿದ ಇಳೆಯಲಿ,‌ ಸ್ತ್ರೀ 2, ಇನ್ನಿತರ ಚಲನಚಿತ್ರಗಳು ಚಿತ್ರಮಂದಿರಗಳಲ್ಲಿ ಸದ್ದು ಮಾಡುತ್ತಿವೆ. ಈ ಮಧ್ಯೆ ಟಿಕೆಟ್‌ ದರವನ್ನು 99 ರೂ.ಗೆ ಇಳಿಕೆ ಮಾಡಿ ಸಿನಿಮಾ ಪ್ರಿಯರಿಗೆ ಸಿಹಿ ಸುದ್ದಿ ಕೊಟ್ಟಿದೆ. ಈ ಕುರಿತು ಥಿಯೇಟರ್‌ಗಳ ವೈಬ್‌ಸೈಟ್‌ನಲ್ಲಿ ಸಂಪೂರ್ಣ ವಿವರ ದೊರಕಲಿದೆ. ಅಷ್ಟೇ ಅಲ್ಲದೆ ಆನ್‌ಲೈನ್‌ನಲ್ಲಿ ಸಹ ಸಿನಿಮಾ ಟಿಕೆಟ್ ಬುಕ್ಕಿಂಗ್ ಅವಕಾಶ ಕಲ್ಪಿಸಲಾಗಿದೆ.

ಅರ್ಚನ ಎಸ್‌ ಎಸ್

Recent Posts

ಚಾ.ನಗರ | ಟೊಮೆಟೊ ದರ ಕುಸಿತ; ರೈತರಿಂದ ಹೆದ್ದಾರಿ ತಡೆ

ಚಾಮರಾಜನಗರ : ಟೊಮೆಟೊ ದರ ಕುಸಿತ ಖಂಡಿಸಿ, ಬೆಲೆ ತಾರತಮ್ಯ ವಿರೋಧಿಸಿ ತಾಲ್ಲೂಕಿನ ಚಿಕ್ಕಹೊಳೆ ಚೆಕ್‌ಪೋಸ್ಟ್ ಬಳಿ ಸಾಮೂಹಿಕ ನಾಯಕತ್ವದ…

4 hours ago

ಪಂಜಾಬ್‌ | ಪಾಕ್‌ ಪೋಷಿತ ಉಗ್ರ ಘಟಕದ ಮೇಲೆ ದಾಳಿ, ಇಬ್ಬರ ಬಂಧನ

ಅಮೃತಸರ : ಪಂಜಾಬ್‌ ಪೊಲೀಸರು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಪೋಷಿತ ಭಯೋತ್ಪಾದಕ ಘಟಕವೊಂದನ್ನು ಭೇದಿಸಿ, ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ.…

4 hours ago

ಅಮೆರಿಕದೊಂದಿಗೆ ಮಾತುಕತೆ ಇಲ್ಲ, ದೀರ್ಘಕಾಲದ ಯುದ್ಧಕ್ಕೆ ಸಿದ್ಧ ; ಇರಾನ್‌

ಹೊಸದಿಲ್ಲಿ : ಇರಾನ್‌ ನಮ್ಮ ಜೊತೆ ಮಾತುಕತೆಗೆ ಸಿದ್ಧವಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿಕೆಯನ್ನು ತಳ್ಳಿ ಹಾಕಿರುವ…

5 hours ago

ನಂಜನಗೂಡು | ನಾಲೆಯಲ್ಲಿ ನವಜಾತ ಶಿಶು ಪತ್ತೆ

ನಂಜನಗೂಡು : ನವಜಾತ ಶಿಶುವನ್ನು ನಾಲೆಗೆ ಎಸೆದ ದುರಂತ ಘಟನೆ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶ್ರೀ…

5 hours ago

ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ : ಮುಖ್ಯಮಂತ್ರಿ

ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ…

6 hours ago

ಮಹದೇಶ್ವರ ಬೆಟ್ಟ | ದಾಸೋಹ-ಲಾಡು ಪ್ರಸಾದಕ್ಕೆ ಸಿಲಿಂಡರ್ ಕೊರತೆ ಇಲ್ಲ ; ಅಪಪ್ರಚಾರಕ್ಕೆ ಕಿವಿಗೊಡದಿರಿ

ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…

8 hours ago