ಮನರಂಜನೆ

ಚಲನಚಿತ್ರ ವೀಕ್ಷಕರಿಗೆ ಸಿಹಿ ಸುದ್ದಿ; ಈ ದಿನದಂದು ಮಲ್ಟಿಪ್ಲೆಕ್ಸ್ ಟಿಕೆಟ್ ಬೆಲೆ 99ಕ್ಕೆ ಇಳಿಕೆ

ಬೆಂಗಳೂರು: ‘ಮಲ್ಟಿಫ್ಲೆಕ್ಸ್ ಅಸೋಸಿಯೇಷನ್ ಆಫ್ ಇಂಡಿಯಾ’ ವತಿಯಿಂದ ಸೆ.20ರಂದು ರಾಷ್ಟ್ರೀಯ ಸಿನಿಮಾ ದಿನದ ಪ್ರಯುಕ್ತ ಚಲನಚಿತ್ರ ಪ್ರಿಯರಿಗೆ ರಾಷ್ಟ್ರವ್ಯಾಪಿ ಚಿತ್ರಮಂದಿರಗಳಲ್ಲಿ ಟಿಕೆಟ್‌ ದರವನ್ನು 99 ರೂ.ಗೆ ಇಳಿಕೆ ಮಾಡಿ ಸಿನಿಮಾ ವೀಕ್ಷಕರಿಗೆ ಸಿಹಿ ಸುದ್ದಿ ನೀಡಲು ನಿರ್ಧರಿಸಿದೆ.

ರಾಷ್ಟ್ರೀಯ ಸಿನಿಮಾ ದಿನದ ಅಂಗವಾಗಿ ಸೆ.20ರಂದು ಸಿನಿಮಾ ವೀಕ್ಷಿಸುವ ಪ್ರೇಕ್ಷಕರಿಗೆ ಕೈಗೆಟುಕುವ ಬೆಲೆಯಲ್ಲಿ ವಿಶೇಷ ರಿಯಾಯಿತಿ ನೀಡಲಾಗುತ್ತಿದೆ. ಅಲ್ಲದೆ ಆ ದಿನ ಸಿನಿಪೊಲೀಸ್, ಪಿವಿಆರ್, ಐನಾಕ್ಸ್, ಮೀರಜ್, ಸಿಟಿಪ್ರೈಡ್ ಒಳಗೊಂಡಂತೆ ಇನ್ನಿತರ 4000ಕ್ಕೂ ಅಧಿಕ ಥಿಯೇಟರ್‌ಗಳಲ್ಲಿ ರಾಷ್ಟ್ರೀಯ ಸಿನಿಮಾ ದಿನವನ್ನು ಆಚರಸಲಿದೆ. ಹೀಗಾಗಿ ದೇಶದ್ಯಾಂತ ಸಿನಿಮಾ ವೀಕ್ಷಿಸುವ ಪ್ರೇಕ್ಷಕರು ಕೇವಲ 99 ರೂ.ಗೆ ಚಲನಚಿತ್ರ ನೋಡುವ ಅವಕಾಶ ನೀಡಲಾಗಿದೆ.

ಮಲ್ಟಿಪ್ಲೆಕ್ಸ್‌ ಅಸೋಸಿಯೇಷನ್‌ ಆಫ್‌ ಇಂಡಿಯಾ ಟಿಕೆಟ್‌ ದರ ಇಳಿಕೆ ಮಾಡಿರುವುದಲ್ಲದೆ, ಚಿತ್ರಮಂದಿರಗಳಲ್ಲೇ ಆಹಾರ ಪದಾರ್ಥಗಳ ಮೇಲೆ ಒಳ್ಳೆಯ ಆಫರ್‌ಗಳನ್ನು ನೀಡಿದೆ. ಪ್ರಸ್ತುತ ರಾಜ್ಯದಲ್ಲಿ ಕೃಷ್ಣಂ ಪ್ರಣಯ ಸಖಿ, ಇಬ್ಬನಿ ತಬ್ಬಿದ ಇಳೆಯಲಿ,‌ ಸ್ತ್ರೀ 2, ಇನ್ನಿತರ ಚಲನಚಿತ್ರಗಳು ಚಿತ್ರಮಂದಿರಗಳಲ್ಲಿ ಸದ್ದು ಮಾಡುತ್ತಿವೆ. ಈ ಮಧ್ಯೆ ಟಿಕೆಟ್‌ ದರವನ್ನು 99 ರೂ.ಗೆ ಇಳಿಕೆ ಮಾಡಿ ಸಿನಿಮಾ ಪ್ರಿಯರಿಗೆ ಸಿಹಿ ಸುದ್ದಿ ಕೊಟ್ಟಿದೆ. ಈ ಕುರಿತು ಥಿಯೇಟರ್‌ಗಳ ವೈಬ್‌ಸೈಟ್‌ನಲ್ಲಿ ಸಂಪೂರ್ಣ ವಿವರ ದೊರಕಲಿದೆ. ಅಷ್ಟೇ ಅಲ್ಲದೆ ಆನ್‌ಲೈನ್‌ನಲ್ಲಿ ಸಹ ಸಿನಿಮಾ ಟಿಕೆಟ್ ಬುಕ್ಕಿಂಗ್ ಅವಕಾಶ ಕಲ್ಪಿಸಲಾಗಿದೆ.

ಅರ್ಚನ ಎಸ್‌ ಎಸ್

Recent Posts

ಬೆಂಗಳೂರಿನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ

ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…

17 seconds ago

ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಪ್ರಕರಣ: ರಾಜೀವ್‌ ಗೌಡಗೆ ಹೈಕೋರ್ಟ್‌ ತರಾಟೆ

ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್‌ ತೀವ್ರ…

10 mins ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ತಡೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…

27 mins ago

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಈಶ್ವರ್‌ ಖಂಡ್ರೆ ಆಯ್ಕೆ

ಬೆಂಗಳೂರು: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ…

49 mins ago

ಜಂಟಿ ಅಧಿವೇಶನದಲ್ಲಿ ನರೇಗಾ ಯೋಜನೆ ಬಗ್ಗೆ ವಿಶೇಷ ಚರ್ಚೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಜನವರಿ.22ರಿಂದ ಜನವರಿ.31ರವರೆಗೆ ಜಂಟಿ ಅಧಿವೇಶನ ನಡೆಯಲಿದ್ದು, ನರೇಗಾ ಯೋಜನೆ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

1 hour ago

ಲಕ್ಕುಂಡಿ ಗ್ರಾಮದಲ್ಲಿ ಬಗೆದಷ್ಟು ಪತ್ತೆಯಾಗುತ್ತಿವೆ ಪುರಾತನ ವಸ್ತುಗಳು

ಗದಗ: ತಾಲ್ಲೂಕಿನ ಲಕ್ಕುಂಡಿ ಗ್ರಾಮದ ಬಗೆದಷ್ಟೂ ಪುರಾತನ ವಸ್ತುಗಳು ಪತ್ತೆಯಾಗುತ್ತಲೇ ಇವೆ. ಇದೀಗ ಚೌಕಿಮಠ ಕುಟುಂಬದ ವಾಸದ ಮನೆಯೊಳಗೆ ಅಪರೂಪದ…

1 hour ago