ಬೆಂಗಳೂರು: ‘ಮಲ್ಟಿಫ್ಲೆಕ್ಸ್ ಅಸೋಸಿಯೇಷನ್ ಆಫ್ ಇಂಡಿಯಾ’ ವತಿಯಿಂದ ಸೆ.20ರಂದು ರಾಷ್ಟ್ರೀಯ ಸಿನಿಮಾ ದಿನದ ಪ್ರಯುಕ್ತ ಚಲನಚಿತ್ರ ಪ್ರಿಯರಿಗೆ ರಾಷ್ಟ್ರವ್ಯಾಪಿ ಚಿತ್ರಮಂದಿರಗಳಲ್ಲಿ ಟಿಕೆಟ್ ದರವನ್ನು 99 ರೂ.ಗೆ ಇಳಿಕೆ ಮಾಡಿ ಸಿನಿಮಾ ವೀಕ್ಷಕರಿಗೆ ಸಿಹಿ ಸುದ್ದಿ ನೀಡಲು ನಿರ್ಧರಿಸಿದೆ.
ರಾಷ್ಟ್ರೀಯ ಸಿನಿಮಾ ದಿನದ ಅಂಗವಾಗಿ ಸೆ.20ರಂದು ಸಿನಿಮಾ ವೀಕ್ಷಿಸುವ ಪ್ರೇಕ್ಷಕರಿಗೆ ಕೈಗೆಟುಕುವ ಬೆಲೆಯಲ್ಲಿ ವಿಶೇಷ ರಿಯಾಯಿತಿ ನೀಡಲಾಗುತ್ತಿದೆ. ಅಲ್ಲದೆ ಆ ದಿನ ಸಿನಿಪೊಲೀಸ್, ಪಿವಿಆರ್, ಐನಾಕ್ಸ್, ಮೀರಜ್, ಸಿಟಿಪ್ರೈಡ್ ಒಳಗೊಂಡಂತೆ ಇನ್ನಿತರ 4000ಕ್ಕೂ ಅಧಿಕ ಥಿಯೇಟರ್ಗಳಲ್ಲಿ ರಾಷ್ಟ್ರೀಯ ಸಿನಿಮಾ ದಿನವನ್ನು ಆಚರಸಲಿದೆ. ಹೀಗಾಗಿ ದೇಶದ್ಯಾಂತ ಸಿನಿಮಾ ವೀಕ್ಷಿಸುವ ಪ್ರೇಕ್ಷಕರು ಕೇವಲ 99 ರೂ.ಗೆ ಚಲನಚಿತ್ರ ನೋಡುವ ಅವಕಾಶ ನೀಡಲಾಗಿದೆ.
ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ಟಿಕೆಟ್ ದರ ಇಳಿಕೆ ಮಾಡಿರುವುದಲ್ಲದೆ, ಚಿತ್ರಮಂದಿರಗಳಲ್ಲೇ ಆಹಾರ ಪದಾರ್ಥಗಳ ಮೇಲೆ ಒಳ್ಳೆಯ ಆಫರ್ಗಳನ್ನು ನೀಡಿದೆ. ಪ್ರಸ್ತುತ ರಾಜ್ಯದಲ್ಲಿ ಕೃಷ್ಣಂ ಪ್ರಣಯ ಸಖಿ, ಇಬ್ಬನಿ ತಬ್ಬಿದ ಇಳೆಯಲಿ, ಸ್ತ್ರೀ 2, ಇನ್ನಿತರ ಚಲನಚಿತ್ರಗಳು ಚಿತ್ರಮಂದಿರಗಳಲ್ಲಿ ಸದ್ದು ಮಾಡುತ್ತಿವೆ. ಈ ಮಧ್ಯೆ ಟಿಕೆಟ್ ದರವನ್ನು 99 ರೂ.ಗೆ ಇಳಿಕೆ ಮಾಡಿ ಸಿನಿಮಾ ಪ್ರಿಯರಿಗೆ ಸಿಹಿ ಸುದ್ದಿ ಕೊಟ್ಟಿದೆ. ಈ ಕುರಿತು ಥಿಯೇಟರ್ಗಳ ವೈಬ್ಸೈಟ್ನಲ್ಲಿ ಸಂಪೂರ್ಣ ವಿವರ ದೊರಕಲಿದೆ. ಅಷ್ಟೇ ಅಲ್ಲದೆ ಆನ್ಲೈನ್ನಲ್ಲಿ ಸಹ ಸಿನಿಮಾ ಟಿಕೆಟ್ ಬುಕ್ಕಿಂಗ್ ಅವಕಾಶ ಕಲ್ಪಿಸಲಾಗಿದೆ.
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…