ಮನರಂಜನೆ

ಚಲನಚಿತ್ರ ವೀಕ್ಷಕರಿಗೆ ಸಿಹಿ ಸುದ್ದಿ; ಈ ದಿನದಂದು ಮಲ್ಟಿಪ್ಲೆಕ್ಸ್ ಟಿಕೆಟ್ ಬೆಲೆ 99ಕ್ಕೆ ಇಳಿಕೆ

ಬೆಂಗಳೂರು: ‘ಮಲ್ಟಿಫ್ಲೆಕ್ಸ್ ಅಸೋಸಿಯೇಷನ್ ಆಫ್ ಇಂಡಿಯಾ’ ವತಿಯಿಂದ ಸೆ.20ರಂದು ರಾಷ್ಟ್ರೀಯ ಸಿನಿಮಾ ದಿನದ ಪ್ರಯುಕ್ತ ಚಲನಚಿತ್ರ ಪ್ರಿಯರಿಗೆ ರಾಷ್ಟ್ರವ್ಯಾಪಿ ಚಿತ್ರಮಂದಿರಗಳಲ್ಲಿ ಟಿಕೆಟ್‌ ದರವನ್ನು 99 ರೂ.ಗೆ ಇಳಿಕೆ ಮಾಡಿ ಸಿನಿಮಾ ವೀಕ್ಷಕರಿಗೆ ಸಿಹಿ ಸುದ್ದಿ ನೀಡಲು ನಿರ್ಧರಿಸಿದೆ.

ರಾಷ್ಟ್ರೀಯ ಸಿನಿಮಾ ದಿನದ ಅಂಗವಾಗಿ ಸೆ.20ರಂದು ಸಿನಿಮಾ ವೀಕ್ಷಿಸುವ ಪ್ರೇಕ್ಷಕರಿಗೆ ಕೈಗೆಟುಕುವ ಬೆಲೆಯಲ್ಲಿ ವಿಶೇಷ ರಿಯಾಯಿತಿ ನೀಡಲಾಗುತ್ತಿದೆ. ಅಲ್ಲದೆ ಆ ದಿನ ಸಿನಿಪೊಲೀಸ್, ಪಿವಿಆರ್, ಐನಾಕ್ಸ್, ಮೀರಜ್, ಸಿಟಿಪ್ರೈಡ್ ಒಳಗೊಂಡಂತೆ ಇನ್ನಿತರ 4000ಕ್ಕೂ ಅಧಿಕ ಥಿಯೇಟರ್‌ಗಳಲ್ಲಿ ರಾಷ್ಟ್ರೀಯ ಸಿನಿಮಾ ದಿನವನ್ನು ಆಚರಸಲಿದೆ. ಹೀಗಾಗಿ ದೇಶದ್ಯಾಂತ ಸಿನಿಮಾ ವೀಕ್ಷಿಸುವ ಪ್ರೇಕ್ಷಕರು ಕೇವಲ 99 ರೂ.ಗೆ ಚಲನಚಿತ್ರ ನೋಡುವ ಅವಕಾಶ ನೀಡಲಾಗಿದೆ.

ಮಲ್ಟಿಪ್ಲೆಕ್ಸ್‌ ಅಸೋಸಿಯೇಷನ್‌ ಆಫ್‌ ಇಂಡಿಯಾ ಟಿಕೆಟ್‌ ದರ ಇಳಿಕೆ ಮಾಡಿರುವುದಲ್ಲದೆ, ಚಿತ್ರಮಂದಿರಗಳಲ್ಲೇ ಆಹಾರ ಪದಾರ್ಥಗಳ ಮೇಲೆ ಒಳ್ಳೆಯ ಆಫರ್‌ಗಳನ್ನು ನೀಡಿದೆ. ಪ್ರಸ್ತುತ ರಾಜ್ಯದಲ್ಲಿ ಕೃಷ್ಣಂ ಪ್ರಣಯ ಸಖಿ, ಇಬ್ಬನಿ ತಬ್ಬಿದ ಇಳೆಯಲಿ,‌ ಸ್ತ್ರೀ 2, ಇನ್ನಿತರ ಚಲನಚಿತ್ರಗಳು ಚಿತ್ರಮಂದಿರಗಳಲ್ಲಿ ಸದ್ದು ಮಾಡುತ್ತಿವೆ. ಈ ಮಧ್ಯೆ ಟಿಕೆಟ್‌ ದರವನ್ನು 99 ರೂ.ಗೆ ಇಳಿಕೆ ಮಾಡಿ ಸಿನಿಮಾ ಪ್ರಿಯರಿಗೆ ಸಿಹಿ ಸುದ್ದಿ ಕೊಟ್ಟಿದೆ. ಈ ಕುರಿತು ಥಿಯೇಟರ್‌ಗಳ ವೈಬ್‌ಸೈಟ್‌ನಲ್ಲಿ ಸಂಪೂರ್ಣ ವಿವರ ದೊರಕಲಿದೆ. ಅಷ್ಟೇ ಅಲ್ಲದೆ ಆನ್‌ಲೈನ್‌ನಲ್ಲಿ ಸಹ ಸಿನಿಮಾ ಟಿಕೆಟ್ ಬುಕ್ಕಿಂಗ್ ಅವಕಾಶ ಕಲ್ಪಿಸಲಾಗಿದೆ.

ಅರ್ಚನ ಎಸ್‌ ಎಸ್

Recent Posts

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

45 mins ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

2 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

3 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

3 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

3 hours ago

ವಿಕಸಿತ ಭಾರತಕ್ಕೆ ಕೈಜೋಡಿಸಿ : ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ

ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…

5 hours ago