ಮನರಂಜನೆ

ಹೀರೊ ಆದ ಕಾಕ್ರೋಚ್ ಸುಧೀ: ಶುರುವಾಯ್ತು ‘ಚೈಲ್ಡು’

‘ಸಲಗ’ ಚಿತ್ರದಲ್ಲಿ ‘ಕಾಕ್ರೋಚ್‍’ ಪಾತ್ರದ ಮೂಲಕ ಬಹಳ ಜನಪ್ರಿಯವಾದ ಸುಧಿ, ನೆಗೆಟಿವ್ ಪಾತ್ರದಲ್ಲೇ ಹೆಚ್ಚಾಗಿ ಕಾಣಿಸಿಕೊಂಡವರು. ಹೀಗಿರುವಾಗಲೇ, ಅವರು ಹೊಸ ಚಿತ್ರವೊಂದಕ್ಕೆ ಹೀರೋ ಆಗಿದ್ದಾರೆ. ಸುಧಿ ಅಭಿನಯದ ‘ಚೈಲ್ಡು’ ಎಂಬ ಚಿತ್ರ ಇತ್ತೀಚೆಗೆ ಸೆಟ್ಟೇರಿದ್ದು, ಸದ್ಯದಲ್ಲೇ ಚಿತ್ರೀಕರಣ ಪ್ರಾರಂಭವಾಗಲಿದೆ.

ಕಮಲ ಫಿಲಂಸ್ ಲಾಂಛನದಲ್ಲಿ ಚಂದ್ರಶೇಖರ್ ಕೆ ನಿರ್ಮಿಸುತ್ತಿರುವ, ‘ಚೈಲ್ಡು’ ಚಿತ್ರವನ್ನು ಈ ಹಿಂದೆ ‘ಹಫ್ತಾ’ ನಿರ್ದೇಶಿಸಿದ್ದ ಪ್ರಕಾಶ್‍ ಹೆಬ್ಬಾಳ್‍ ಕಥೆ-ಚಿತ್ರಕಥೆ ಬರೆದು ನಿರ್ದೇಶಿಸುತ್ತಿದ್ದಾರೆ. ತಾರಾ ಅನುರಾಧ, ಅಶ್ವಿನ್ ಹಾಸನ್, ವಲ್ಲಭ್, ಉದಯ್ ಪ್ರಸನ್ನ ಮುಂತಾದವರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ.

‘ಚೈಲ್ಡು’ ಕುರಿತು ಮಾತನಾಡುವ ಪ್ರಕಾಶ್, ‘ಈ ಚಿತ್ರದಲ್ಲಿ ಆಕ್ಷನ್, ಕಾಮಿಡಿ, ಸೆಂಟಿಮೆಂಟ್, ಲವ್ ಹೀಗೆ ನೋಡುಗರಿಗೆ ಬೇಕಾದ ಎಲ್ಲಾ ಅಂಶಗಳು ಸಹ ಇವೆ. ಸುಧೀ ಅವರು ಈವರೆಗೂ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇಲ್ಲಿ ನಾಯಕನ ಪಾತ್ರಕ್ಕೆ ‘ಚೈಲ್ಡು’ ಎಂಬ ಶೀರ್ಷಿಕೆ ಸೂಕ್ತ. ರೌಡಿಸಂ ಅಂತಲ್ಲ, ಇದೊಂದು ಕಮರ್ಷಿಯಲ್‍ ಚಿತ್ರ. ನಾಯಕನ ವರ್ತನೆಯನ್ನು ನೋಡಿ ಎಲ್ಲರೂ ಅವನನ್ನು ಚೈಲ್ಡು ಎಂದು ಕರೆಯುತ್ತಿರುತ್ತಾರೆ. ಸುಧಿ ಮಾಡಿದ ಹಿಂದಿನ ಪಾತ್ರಗಳಿಗಿಂತ ಈ ಪಾತ್ರ ವಿಭಿನ್ನವಾಗಿದೆ. ಸುಧಿ ಅವರ ಕಾಮಿಡಿ ಟೈಮಿಂಗ್‍ ಚೆನ್ನಾಗಿದೆ. ಅದನ್ನು ಈ ಚಿತ್ರದಲ್ಲಿ ಬಳಸಿಕೊಂಡು ಬೇರೆ ತರಹದ ಪಾತ್ರ ಸೃಷ್ಟಿಸಿದ್ದೇವೆ. ಬೆಂಗಳೂರು, ಬೀದರ್, ಬಾಗಲಕೋಟೆ ಮುಂತಾದ ಕಡೆ ಚಿತ್ರೀಕರಣ ಮಾಡಲಿದ್ದೇವೆ’ ಎಂದರು.

ಇದನ್ನು ಓದಿ : ‘ಮೋಡ ಮಳೆ ಮತ್ತು ಶೈಲ’ ಜೊತೆಗೆ ಬಂದ ರಕ್ಷಿತ್‍ ತೀರ್ಥಹಳ್ಳಿ

ನಿರ್ದೇಶಕ ಪ್ರಕಾಶ್ ಅವರು ಹೇಳಿದ ಕಥೆ ಬಹಳ ಇಷ್ಟವಾಯಿತು ಎಂದ ಸುಧಿ, ‘ಅದಕ್ಕಿಂತ ನೀವು ಈ ಚಿತ್ರದ ನಾಯಕ ಅಂತ ಹೇಳಿದ್ದು ಖುಷಿಯಾಯಿತು‌. ಪ್ರಕಾಶ್‍ ಅವರ ಜೊತೆಗೆ ನಾನು ‘ಕತ್ತಿ’ ಎಂಬ ಚಿತ್ರದಲ್ಲಿ ನಟಿಸಿದ್ದೆ. ಎಂಟ್ಹತ್ತು ದಿನಗಳ ಕಾಲ ಕೆಲಸ ಮಾಡಿದ್ದೆ. ಆಗಲೇ ಅವರು ನನಗೆ ನಿನ್ನನ್ನು ಬರೀ ಎಂಟ್ಹತ್ತು ದಿನಗಳಿಗೆ ಬಳಸಿಕೊಳ್ಳುವುದಕ್ಕೆ ನನಗೆ ಇಷ್ಟವಿಲ್ಲ. ಜೊತೆಗೆ ಇನ್ನಷ್ಟು ಕೆಲಸ ಮಾಡುವ ಎಂದು ಹೇಳಿದ್ದರು.

ಈ ಚಿತ್ರದಲ್ಲಿ ನನಗೆ ತಕ್ಕಂತಹ ಕಥೆಯನ್ನು ನಿರ್ದೇಶಕರು ಮಾಡಿದ್ದಾರೆ. ನಾನೇನು ಆರೇಳು ಅಡಿ ಇಲ್ಲ. ನನ್ನ ಈ ಶರೀರಕ್ಕೆ ಏನೆಲ್ಲಾ ಬೇಕೋ ಅದನ್ನಿಟ್ಟುಕೊಂಡು ಕಥೆ ಮಾಡಿದ್ದಾರೆ. ನನ್ನ ಲುಕ್‍ನಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಸದ್ಯ 12 ಚಿತ್ರಗಳಲ್ಲಿ ನಟಿಸುತ್ತಿದ್ದೇನೆ. ಇದರಿಂದ ಬೇರೆ ಚಿತ್ರಗಳ ಕಂಟಿನ್ಯುಟಿಗೆ ತೊಂದರೆ ಆಗಬಾರದು. ಹಾಗಾಗಿ, ಈ ಚಿತ್ರದಲ್ಲಿ ಇದೇ ರೀತಿ ಕಾಣಿಸಿಕೊಳ್ಳುತ್ತಿದ್ದೇನೆ’ ಎಂದರು.

ಪಾತ್ರಗಳ ವಿಷಯದಲ್ಲಿ ಯಾವುದೇ ಆಯ್ಕೆ ಇಲ್ಲ ಎನ್ನುವ ಸುಧಿ, ‘ನಾನು ಯಾವತ್ತೂ ಆಯ್ಕೆ ಮಾಡಿಕೊಂಡು ಕೆಲಸ ಮಾಡಿಲ್ಲ. ಕೆಲಸ ಸಿಕ್ಕರೆ ಸಾಕು ಎಂದು ಕೆಲಸ ಮಾಡಿದವನು ನಾನು. ಅವರ ‘ಹಫ್ತಾ’ ಚಿತ್ರವನ್ನು ನೋಡಿದ್ದೆ. ಬಹಳ ಚೆನ್ನಾಗಿ ಮಾಡಿದ್ದರು. ಹಾಗಾಗಿಯೇ, ಈ ಚಿತ್ರದಲ್ಲೂ ನಟಿಸುವುದಕ್ಕೆ ಒಪ್ಪಿಕೊಂಡೆ’ ಎಂದರು.

ಆಂದೋಲನ ಡೆಸ್ಕ್

Recent Posts

ರಣರಂಗದಿಂದ ಪಲಾಯನಕ್ಕೆ ಟ್ರಂಪ್ ಸಿದ್ಧತೆ..!

ಅನಗತ್ಯವಾಗಿ ಮತ್ತು ಅಪ್ರಚೋದಿತವಾಗಿ ಇರಾನ್ ವಿರುದ್ಧ ಯುದ್ಧಕ್ಕಿಳಿದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸ್ಥಿತಿ ಈಗ ಮಹಾಭಾರತದ ಅಭಿಮನ್ಯುವಿನ ಪರಿಸ್ಥಿತಿಯಂತಾಗಿದೆ.…

16 mins ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ವಿರೋಧಿ ಸಿದ್ಧಾಂತದ ರಾಜ್ಯಗಳ ಜತೆ ಬಿಜೆಪಿ ಸೆಣಸಾಟ

೨೦೨೬ರ ಐದು ರಾಜ್ಯಗಳ ವಿಧಾನಸಭೆ ಚುನಾವಣೆಯ ಅಖಾಡ ಈಗ ಸಿದ್ಧವಾಗಿದೆ. ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಎನ್‌ಡಿಎ ಮೈತ್ರಿಕೂಟದ ಬಿಜೆಪಿ ಮತ್ತು…

23 mins ago

ಗಂಡಸಿನ ಕೋಪ ಹೊಳೆ ಸಾಗರ… ಹೆಂಗಸಿನ ಕೋಪ ಗುಂಡಿ ನೀರು

ಅನಿಲ್ ಅಂತರಸಂತೆ ಹಳ್ಳಿ ಸೊಗಡಿನ ದೇಸಿ ಕಂಠಸಿರಿಯಲ್ಲಿ ಇವರ ಜಾನ ಪದ ಹಾಡುಗಳನ್ನು ಕೇಳುವುದೇ ಬಲು ಹಿತಕರ. ಮೂಲತಃ ಎಚ್.ಡಿ.ಕೋಟೆ…

29 mins ago

ಒಂದು ಹಸಿ ಅಸಹ್ಯ ಹಾಡಿನ ಕುರಿತು ಇಬ್ಬರು ಬರಹಗಾರ್ತಿಯರು

ಇಂತಹ ಸಂದರ್ಭಗಳಲ್ಲಿ ಮೌನವಾಗಿರುವುದು ಅಪರಾಧದಲ್ಲಿ ಪಾಲುಗಾರರಾದಂತೆಯೇ ಸಂಧ್ಯಾರಾಣಿ, ಲೇಖಕಿ ಮತ್ತು ಚಿತ್ರ ಸಾಹಿತಿ ‘ರ’ ಚಿತ್ರದ ಹಾಡಿನ ಬಗ್ಗೆ ವಿರೋಧ,…

33 mins ago

ಕೆಟ್ಟ ಯುದ್ಧವೊಂದರ ಕೆಲವು ಒಳ್ಳೆಯ ಅಡ್ಡ ಪರಿಣಾಮಗಳು

ಶೇಷಾದ್ರಿ ಗಂಜೂರು ಮಧ್ಯಪ್ರಾಚ್ಯದಿಂದ ಪ್ರತಿನಿತ್ಯ ವಿಸ್ತರಿಸುತ್ತಿರುವ ಉದ್ವಿಗ್ನತೆಯನ್ನು ಗಮನಿಸಿದರೆ, ಇಸ್ರೇಲಿನ ಆಕ್ರಮಣಕಾರಿ ಧೋರಣೆ, ಅಮೆರಿಕದ ಟ್ರಂಪ್ ದುರಾಡಳಿತದ ತರ್ಕರಹಿತ ನಡೆಗಳು…

41 mins ago

ಮಾನವ-ವನ್ಯಪ್ರಾಣಿ ಸಂಘರ್ಷ ನಿವಾರಣೆಗೆ ಕಾರ್ಯತಂತ್ರ

ನವೀನ್ ಡಿಸೋಜ ಮಡಿಕೇರಿ: ವನ್ಯಜೀವಿ-ಮಾನವ ಸಂಘರ್ಷ ತಡೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಈ ಬಾರಿಯ ಬಜೆಟ್‌ನಲ್ಲಿ ಕರ್ನಾಟಕ ಮಾನವ -…

47 mins ago