ಮನರಂಜನೆ

ಹೀರೊ ಆದ ಕಾಕ್ರೋಚ್ ಸುಧೀ: ಶುರುವಾಯ್ತು ‘ಚೈಲ್ಡು’

‘ಸಲಗ’ ಚಿತ್ರದಲ್ಲಿ ‘ಕಾಕ್ರೋಚ್‍’ ಪಾತ್ರದ ಮೂಲಕ ಬಹಳ ಜನಪ್ರಿಯವಾದ ಸುಧಿ, ನೆಗೆಟಿವ್ ಪಾತ್ರದಲ್ಲೇ ಹೆಚ್ಚಾಗಿ ಕಾಣಿಸಿಕೊಂಡವರು. ಹೀಗಿರುವಾಗಲೇ, ಅವರು ಹೊಸ ಚಿತ್ರವೊಂದಕ್ಕೆ ಹೀರೋ ಆಗಿದ್ದಾರೆ. ಸುಧಿ ಅಭಿನಯದ ‘ಚೈಲ್ಡು’ ಎಂಬ ಚಿತ್ರ ಇತ್ತೀಚೆಗೆ ಸೆಟ್ಟೇರಿದ್ದು, ಸದ್ಯದಲ್ಲೇ ಚಿತ್ರೀಕರಣ ಪ್ರಾರಂಭವಾಗಲಿದೆ.

ಕಮಲ ಫಿಲಂಸ್ ಲಾಂಛನದಲ್ಲಿ ಚಂದ್ರಶೇಖರ್ ಕೆ ನಿರ್ಮಿಸುತ್ತಿರುವ, ‘ಚೈಲ್ಡು’ ಚಿತ್ರವನ್ನು ಈ ಹಿಂದೆ ‘ಹಫ್ತಾ’ ನಿರ್ದೇಶಿಸಿದ್ದ ಪ್ರಕಾಶ್‍ ಹೆಬ್ಬಾಳ್‍ ಕಥೆ-ಚಿತ್ರಕಥೆ ಬರೆದು ನಿರ್ದೇಶಿಸುತ್ತಿದ್ದಾರೆ. ತಾರಾ ಅನುರಾಧ, ಅಶ್ವಿನ್ ಹಾಸನ್, ವಲ್ಲಭ್, ಉದಯ್ ಪ್ರಸನ್ನ ಮುಂತಾದವರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ.

‘ಚೈಲ್ಡು’ ಕುರಿತು ಮಾತನಾಡುವ ಪ್ರಕಾಶ್, ‘ಈ ಚಿತ್ರದಲ್ಲಿ ಆಕ್ಷನ್, ಕಾಮಿಡಿ, ಸೆಂಟಿಮೆಂಟ್, ಲವ್ ಹೀಗೆ ನೋಡುಗರಿಗೆ ಬೇಕಾದ ಎಲ್ಲಾ ಅಂಶಗಳು ಸಹ ಇವೆ. ಸುಧೀ ಅವರು ಈವರೆಗೂ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇಲ್ಲಿ ನಾಯಕನ ಪಾತ್ರಕ್ಕೆ ‘ಚೈಲ್ಡು’ ಎಂಬ ಶೀರ್ಷಿಕೆ ಸೂಕ್ತ. ರೌಡಿಸಂ ಅಂತಲ್ಲ, ಇದೊಂದು ಕಮರ್ಷಿಯಲ್‍ ಚಿತ್ರ. ನಾಯಕನ ವರ್ತನೆಯನ್ನು ನೋಡಿ ಎಲ್ಲರೂ ಅವನನ್ನು ಚೈಲ್ಡು ಎಂದು ಕರೆಯುತ್ತಿರುತ್ತಾರೆ. ಸುಧಿ ಮಾಡಿದ ಹಿಂದಿನ ಪಾತ್ರಗಳಿಗಿಂತ ಈ ಪಾತ್ರ ವಿಭಿನ್ನವಾಗಿದೆ. ಸುಧಿ ಅವರ ಕಾಮಿಡಿ ಟೈಮಿಂಗ್‍ ಚೆನ್ನಾಗಿದೆ. ಅದನ್ನು ಈ ಚಿತ್ರದಲ್ಲಿ ಬಳಸಿಕೊಂಡು ಬೇರೆ ತರಹದ ಪಾತ್ರ ಸೃಷ್ಟಿಸಿದ್ದೇವೆ. ಬೆಂಗಳೂರು, ಬೀದರ್, ಬಾಗಲಕೋಟೆ ಮುಂತಾದ ಕಡೆ ಚಿತ್ರೀಕರಣ ಮಾಡಲಿದ್ದೇವೆ’ ಎಂದರು.

ಇದನ್ನು ಓದಿ : ‘ಮೋಡ ಮಳೆ ಮತ್ತು ಶೈಲ’ ಜೊತೆಗೆ ಬಂದ ರಕ್ಷಿತ್‍ ತೀರ್ಥಹಳ್ಳಿ

ನಿರ್ದೇಶಕ ಪ್ರಕಾಶ್ ಅವರು ಹೇಳಿದ ಕಥೆ ಬಹಳ ಇಷ್ಟವಾಯಿತು ಎಂದ ಸುಧಿ, ‘ಅದಕ್ಕಿಂತ ನೀವು ಈ ಚಿತ್ರದ ನಾಯಕ ಅಂತ ಹೇಳಿದ್ದು ಖುಷಿಯಾಯಿತು‌. ಪ್ರಕಾಶ್‍ ಅವರ ಜೊತೆಗೆ ನಾನು ‘ಕತ್ತಿ’ ಎಂಬ ಚಿತ್ರದಲ್ಲಿ ನಟಿಸಿದ್ದೆ. ಎಂಟ್ಹತ್ತು ದಿನಗಳ ಕಾಲ ಕೆಲಸ ಮಾಡಿದ್ದೆ. ಆಗಲೇ ಅವರು ನನಗೆ ನಿನ್ನನ್ನು ಬರೀ ಎಂಟ್ಹತ್ತು ದಿನಗಳಿಗೆ ಬಳಸಿಕೊಳ್ಳುವುದಕ್ಕೆ ನನಗೆ ಇಷ್ಟವಿಲ್ಲ. ಜೊತೆಗೆ ಇನ್ನಷ್ಟು ಕೆಲಸ ಮಾಡುವ ಎಂದು ಹೇಳಿದ್ದರು.

ಈ ಚಿತ್ರದಲ್ಲಿ ನನಗೆ ತಕ್ಕಂತಹ ಕಥೆಯನ್ನು ನಿರ್ದೇಶಕರು ಮಾಡಿದ್ದಾರೆ. ನಾನೇನು ಆರೇಳು ಅಡಿ ಇಲ್ಲ. ನನ್ನ ಈ ಶರೀರಕ್ಕೆ ಏನೆಲ್ಲಾ ಬೇಕೋ ಅದನ್ನಿಟ್ಟುಕೊಂಡು ಕಥೆ ಮಾಡಿದ್ದಾರೆ. ನನ್ನ ಲುಕ್‍ನಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಸದ್ಯ 12 ಚಿತ್ರಗಳಲ್ಲಿ ನಟಿಸುತ್ತಿದ್ದೇನೆ. ಇದರಿಂದ ಬೇರೆ ಚಿತ್ರಗಳ ಕಂಟಿನ್ಯುಟಿಗೆ ತೊಂದರೆ ಆಗಬಾರದು. ಹಾಗಾಗಿ, ಈ ಚಿತ್ರದಲ್ಲಿ ಇದೇ ರೀತಿ ಕಾಣಿಸಿಕೊಳ್ಳುತ್ತಿದ್ದೇನೆ’ ಎಂದರು.

ಪಾತ್ರಗಳ ವಿಷಯದಲ್ಲಿ ಯಾವುದೇ ಆಯ್ಕೆ ಇಲ್ಲ ಎನ್ನುವ ಸುಧಿ, ‘ನಾನು ಯಾವತ್ತೂ ಆಯ್ಕೆ ಮಾಡಿಕೊಂಡು ಕೆಲಸ ಮಾಡಿಲ್ಲ. ಕೆಲಸ ಸಿಕ್ಕರೆ ಸಾಕು ಎಂದು ಕೆಲಸ ಮಾಡಿದವನು ನಾನು. ಅವರ ‘ಹಫ್ತಾ’ ಚಿತ್ರವನ್ನು ನೋಡಿದ್ದೆ. ಬಹಳ ಚೆನ್ನಾಗಿ ಮಾಡಿದ್ದರು. ಹಾಗಾಗಿಯೇ, ಈ ಚಿತ್ರದಲ್ಲೂ ನಟಿಸುವುದಕ್ಕೆ ಒಪ್ಪಿಕೊಂಡೆ’ ಎಂದರು.

ಆಂದೋಲನ ಡೆಸ್ಕ್

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

12 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

13 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

13 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

14 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

19 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

19 hours ago