ಮನರಂಜನೆ

ಕಾಮಿಡಿ ನಟ ಈಗ ವಿಲನ್‍; ಹೇಗಿದ್ದ ಹೇಗಾದ ಮಿತ್ರ!

ಪ್ರಜ್ವಲ್‍ ಅಭಿನಯದ ‘ಕರಾವಳಿ’ ಚಿತ್ರದಲ್ಲಿ ಮಿತ್ರ ಒಂದು ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ ಮತ್ತು ಇದುವರೆಗೂ ಮಾಡದ ಒಂದು ಪಾತ್ರದಲ್ಲಿ ಅವರು ನಟಿಸುತ್ತಿದ್ದಾರೆ ಎಂದು ಚಿತ್ರತಂಡದವರು ಆರಂಭದಿಂದ ಹೇಳುತ್ತಲೇ ಇದ್ದರು. ಆದರೆ, ಮಿತ್ರ ಪಾತ್ರವೇನು ಎಂಬುದನ್ನು ಬಹಿರಂಗ ಮಾಡಿರಲಿಲ್ಲ.

ಇದೀಗ ಮಿತ್ರ ಪಾತ್ರ ಬಹಿರಂಗವಾಗಿದ್ದು, ಅವರು ಈ ಚಿತ್ರದಲ್ಲಿ ವಿಲನ್‍ ಆಗಿ ನಟಿಸುತ್ತಿದ್ದಾರಂತೆ. ಈ ಚಿತ್ರದಲ್ಲಿ ಅವರು ಮಹಾಬಲ ಎಂಬ ವಿಲನ್ ಆಗಿ ಕಾಣಿಸಿಕೊಂಡಿದ್ದು, ಪಾತ್ರಕ್ಕಾಗಿ ತಮ್ಮ ಲುಕ್ ಸಹ ಬದಲಾಯಿಸಿಕೊಂಡಿದ್ದಾರೆ. ಅಷ್ಟೇ ಅಲ್ಲ, 60 ವಯಸ್ಸಿನ ವ್ಯಕ್ತಿಯ ಪಾತ್ರದಲ್ಲಿ ಅವರು ಕಾಣಿಸಿಕೊಂಡಿದ್ದು, ಅದಕ್ಕಾಗಿ ತೂಕವನ್ನೂ ಇಳಿಸಿದ್ದಾರೆ. ಈ ಚಿತ್ರಕ್ಕಾಗಿ ಮೊದಲ ಬಾರಿಗೆ ಅವರು ಗಡ್ಡ ಬಿಟ್ಟಿದ್ದಾರೆ.

ಕಲಾವಿದರಾದವರು ಒಂದೇ ಪಾತ್ರಕ್ಕೆ ಅಂಟಿಕೊಳ್ಳಬಾರದು ಮತ್ತು ವಯಸ್ಸಿಗೆ ತಕ್ಕಂತೆ ತಮ್ಮನ್ನು ತಾವು ಬದಲಾಯಿಸಿಕೊಳ್ಳಬೇಕು ಎಂಬುದು ಮಿತ್ರ ಅಭಿಪ್ರಾಯ. ಅದೇ ಕಾರಣಕ್ಕೆ ಕಾಮಿಡಿ ಪಾತ್ರಗಳಿಗೆ ಅವರು ಫುಲ್‍ಸ್ಟಾಪ್‍ ಹಾಕಿ, ಬೇರೆ ತರಹದ ಪಾತ್ರಗಳ ಹುಡುಕಾಟದಲ್ಲಿದ್ದಾರೆ. ಅದಕ್ಕೆ ಸರಿಯಾಗಿ, ‘ಕರಾವಳಿ’ ಚಿತ್ರದಲ್ಲೊಂದು ವಿಭಿನ್ನ ಪಾತ್ರ ಸಿಕ್ಕಿದೆ. ಮುಂದೆ ಸಹ ವಿಭಿನ್ನ ಪಾತ್ರಗಳ ಹುಡುಕಾಟದಲ್ಲಿ ಅವರಿದ್ದಾರೆ.

‘ಕರಾವಳಿ’ ನಂತರ ಮಿತ್ರ ಅವರನ್ನು ಹಲವರು ವಿಲನ್‍ ಪಾತ್ರಗಳಿಗಾಗಿ ಹುಡುಕಿಕೊಂಡು ಬರುತ್ತಿದ್ದಾರಂತೆ. ಇದೇ ಕಾರಣಕ್ಕೆ ಮಿತ್ರ ಹೊಸದಾಗಿ ಫೋಟೋಶೂಟ್‍ ಸಹ ಮಾಡಿಸಿದ್ದಾರೆ. ‘ಕರಾವಳಿ’ ಚಿತ್ರದ ಛಾಯಾಗ್ರಾಹಕ ಅಭಿಮನ್ಯು ಸದಾನಂದನ್‍, ಮಿತ್ರ ಅವರ ಹೊಸ ಫೋಟೋಶೂಟ್‍ ಮಾಡಿಕೊಟ್ಟಿದ್ದಾರೆ.

‘ಕರಾವಳಿ’ ಚಿತ್ರಕ್ಕೆ ಚಂದ್ರಶೇಖರ್‍ ಬಂಡಿಯಪ್ಪ ಕಥೆ-ಚಿತ್ರಕಥೆ ಬರೆದಿದ್ದು, ಗುರುದತ್ ಗಾಣಿಗ ನಿರ್ದೇಶನ ಮಾಡುತ್ತಿದ್ದಾರೆ. ಇದು ಪ್ರಾಣಿಗಳು ಮತ್ತು ಮನುಷ್ಯನ ನಡುವಿನ ಸಂಬಂಧದ ಕುರಿತಾದ ಚಿತ್ರ. ಚಿತ್ರದಲ್ಲಿ ಪ್ರಜ್ವಲ್‍ಗೆ ನಾಯಕಿಯಾಗಿ ಸಂಪದ ಹುಲಿವಾನ ನಟಿಸುತ್ತಿದ್ದು, ಮಿಕ್ಕಂತೆ ಮಿತ್ರ, ‘ಸಿದ್ಲಿಂಗು’ ಶ್ರೀಧರ್‍, ಗೋವಿಂದೇಗೌಡ, ವಿದ್ಯಾ ಮೂರ್ತಿ ಮುಂತಾದವರು ನಟಿಸುತ್ತಿದ್ದಾರೆ.

ಈಗಾಗಲೇ ಚಿತ್ರದ ಬಹುತೇಕ ಚಿತ್ರೀಕರಣ ಮುಗಿದಿದ್ದು, ಮುಂದಿನ ವರ್ಷ ಬಿಡುಗಡೆಯಾಗಲಿದೆ.

ಭೂಮಿಕಾ

Recent Posts

ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ: ಕೆ.ಎನ್.ರಾಜಣ್ಣ

ಬೆಳಗಾವಿ: ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ, ಗ್ಯಾರಂಟಿ ಯೋಜನೆಗಳ ಜೊತೆ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೆಲಸಗಳು ಕೂಡ…

34 mins ago

ಡೆವಿಲ್‌ ಸಿನಿಮಾ ಬ್ಲಾಕ್‌ ಬಸ್ಟರ್‌ ಆಗಲಿ: ನಟ ದರ್ಶನ್‌ಗೆ ರಿಷಬ್‌ ಶೆಟ್ಟಿ ವಿಶ್‌

ಬೆಂಗಳೂರು: ನಾಳೆ ದರ್ಶನ್‌ ಅಭಿನಯದ ಡೆವಿಲ್‌ ಸಿನಿಮಾ ಬಿಡುಗಡೆ ಆಗುತ್ತಿರುವ ಹಿನ್ನೆಲೆಯಲ್ಲಿ ಡಿ ಬಾಸ್‌ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ.…

1 hour ago

ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್‌ ಸರ್ಕಾರ ಪರಿಹಾರ ನೀಡಿಲ್ಲ, ಮನೆ…

1 hour ago

ಕೇಂದ್ರ ಸರ್ಕಾರ, ಇಂಡಿಗೋ ವಿರುದ್ಧ ಹೈಕೋರ್ಟ್‌ ಆಕ್ರೋಶ

ನವದೆಹಲಿ: ಇಂಡಿಗೋ ವಿಮಾನಯಾನ ಸಂಸ್ಥೆಯಲ್ಲಿನ ಅವ್ಯವಸ್ಥೆಯಿಂದಾಗಿ ನೂರಾರು ವಿಮಾನಗಳು ರದ್ದಾಗಿದ್ದಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್‌ ಇಂದು ಕೇಂದ್ರ ಸರ್ಕಾರವನ್ನು ತರಾಟೆಗೆ…

2 hours ago

ಸಕ್ಕರೆನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಪಂಚಾಯಿತಿ ವತಿಯಿಂದ ನಮಗೆ ಮಠ ಕಟ್ಟಿಸಿಕೊಡುವಂತೆ…

3 hours ago

ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸ

ಚಿತ್ರದುರ್ಗ: ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಲೇಔಟ್‌ ನಿರ್ಮಾಣ ಮಾಡುವ ವೇಳೆ ರೇಣುಕಾಸ್ವಾಮಿ…

3 hours ago