ಮನರಂಜನೆ

ಕಾಮಿಡಿ ನಟ ಈಗ ವಿಲನ್‍; ಹೇಗಿದ್ದ ಹೇಗಾದ ಮಿತ್ರ!

ಪ್ರಜ್ವಲ್‍ ಅಭಿನಯದ ‘ಕರಾವಳಿ’ ಚಿತ್ರದಲ್ಲಿ ಮಿತ್ರ ಒಂದು ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ ಮತ್ತು ಇದುವರೆಗೂ ಮಾಡದ ಒಂದು ಪಾತ್ರದಲ್ಲಿ ಅವರು ನಟಿಸುತ್ತಿದ್ದಾರೆ ಎಂದು ಚಿತ್ರತಂಡದವರು ಆರಂಭದಿಂದ ಹೇಳುತ್ತಲೇ ಇದ್ದರು. ಆದರೆ, ಮಿತ್ರ ಪಾತ್ರವೇನು ಎಂಬುದನ್ನು ಬಹಿರಂಗ ಮಾಡಿರಲಿಲ್ಲ.

ಇದೀಗ ಮಿತ್ರ ಪಾತ್ರ ಬಹಿರಂಗವಾಗಿದ್ದು, ಅವರು ಈ ಚಿತ್ರದಲ್ಲಿ ವಿಲನ್‍ ಆಗಿ ನಟಿಸುತ್ತಿದ್ದಾರಂತೆ. ಈ ಚಿತ್ರದಲ್ಲಿ ಅವರು ಮಹಾಬಲ ಎಂಬ ವಿಲನ್ ಆಗಿ ಕಾಣಿಸಿಕೊಂಡಿದ್ದು, ಪಾತ್ರಕ್ಕಾಗಿ ತಮ್ಮ ಲುಕ್ ಸಹ ಬದಲಾಯಿಸಿಕೊಂಡಿದ್ದಾರೆ. ಅಷ್ಟೇ ಅಲ್ಲ, 60 ವಯಸ್ಸಿನ ವ್ಯಕ್ತಿಯ ಪಾತ್ರದಲ್ಲಿ ಅವರು ಕಾಣಿಸಿಕೊಂಡಿದ್ದು, ಅದಕ್ಕಾಗಿ ತೂಕವನ್ನೂ ಇಳಿಸಿದ್ದಾರೆ. ಈ ಚಿತ್ರಕ್ಕಾಗಿ ಮೊದಲ ಬಾರಿಗೆ ಅವರು ಗಡ್ಡ ಬಿಟ್ಟಿದ್ದಾರೆ.

ಕಲಾವಿದರಾದವರು ಒಂದೇ ಪಾತ್ರಕ್ಕೆ ಅಂಟಿಕೊಳ್ಳಬಾರದು ಮತ್ತು ವಯಸ್ಸಿಗೆ ತಕ್ಕಂತೆ ತಮ್ಮನ್ನು ತಾವು ಬದಲಾಯಿಸಿಕೊಳ್ಳಬೇಕು ಎಂಬುದು ಮಿತ್ರ ಅಭಿಪ್ರಾಯ. ಅದೇ ಕಾರಣಕ್ಕೆ ಕಾಮಿಡಿ ಪಾತ್ರಗಳಿಗೆ ಅವರು ಫುಲ್‍ಸ್ಟಾಪ್‍ ಹಾಕಿ, ಬೇರೆ ತರಹದ ಪಾತ್ರಗಳ ಹುಡುಕಾಟದಲ್ಲಿದ್ದಾರೆ. ಅದಕ್ಕೆ ಸರಿಯಾಗಿ, ‘ಕರಾವಳಿ’ ಚಿತ್ರದಲ್ಲೊಂದು ವಿಭಿನ್ನ ಪಾತ್ರ ಸಿಕ್ಕಿದೆ. ಮುಂದೆ ಸಹ ವಿಭಿನ್ನ ಪಾತ್ರಗಳ ಹುಡುಕಾಟದಲ್ಲಿ ಅವರಿದ್ದಾರೆ.

‘ಕರಾವಳಿ’ ನಂತರ ಮಿತ್ರ ಅವರನ್ನು ಹಲವರು ವಿಲನ್‍ ಪಾತ್ರಗಳಿಗಾಗಿ ಹುಡುಕಿಕೊಂಡು ಬರುತ್ತಿದ್ದಾರಂತೆ. ಇದೇ ಕಾರಣಕ್ಕೆ ಮಿತ್ರ ಹೊಸದಾಗಿ ಫೋಟೋಶೂಟ್‍ ಸಹ ಮಾಡಿಸಿದ್ದಾರೆ. ‘ಕರಾವಳಿ’ ಚಿತ್ರದ ಛಾಯಾಗ್ರಾಹಕ ಅಭಿಮನ್ಯು ಸದಾನಂದನ್‍, ಮಿತ್ರ ಅವರ ಹೊಸ ಫೋಟೋಶೂಟ್‍ ಮಾಡಿಕೊಟ್ಟಿದ್ದಾರೆ.

‘ಕರಾವಳಿ’ ಚಿತ್ರಕ್ಕೆ ಚಂದ್ರಶೇಖರ್‍ ಬಂಡಿಯಪ್ಪ ಕಥೆ-ಚಿತ್ರಕಥೆ ಬರೆದಿದ್ದು, ಗುರುದತ್ ಗಾಣಿಗ ನಿರ್ದೇಶನ ಮಾಡುತ್ತಿದ್ದಾರೆ. ಇದು ಪ್ರಾಣಿಗಳು ಮತ್ತು ಮನುಷ್ಯನ ನಡುವಿನ ಸಂಬಂಧದ ಕುರಿತಾದ ಚಿತ್ರ. ಚಿತ್ರದಲ್ಲಿ ಪ್ರಜ್ವಲ್‍ಗೆ ನಾಯಕಿಯಾಗಿ ಸಂಪದ ಹುಲಿವಾನ ನಟಿಸುತ್ತಿದ್ದು, ಮಿಕ್ಕಂತೆ ಮಿತ್ರ, ‘ಸಿದ್ಲಿಂಗು’ ಶ್ರೀಧರ್‍, ಗೋವಿಂದೇಗೌಡ, ವಿದ್ಯಾ ಮೂರ್ತಿ ಮುಂತಾದವರು ನಟಿಸುತ್ತಿದ್ದಾರೆ.

ಈಗಾಗಲೇ ಚಿತ್ರದ ಬಹುತೇಕ ಚಿತ್ರೀಕರಣ ಮುಗಿದಿದ್ದು, ಮುಂದಿನ ವರ್ಷ ಬಿಡುಗಡೆಯಾಗಲಿದೆ.

ಭೂಮಿಕಾ

Recent Posts

ಪೂರ್ಣ ಸಿದ್ಧವಾಗದ ಎಕ್ಸ್‌ಪ್ರೇಸ್‌ ವೇ : ಟೋಲ್‌ ಕಡಿತ

ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…

5 hours ago

ಸೇವಾ ತೀರ್ಥ ಸಂಕೀರ್ಣ ಉದ್ಘಾಟಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…

5 hours ago

T20 World Cup | ಕೆನಡಾ ವಿರುದ್ಧ ಯುಎಇಗೆ ರೋಚಕ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…

5 hours ago

ದಳಪತಿ ವಿಜಯ್‌ ರ‍್ಯಾಲಿಯಲ್ಲಿ ನಿಲ್ಲದ ದುರಂತ : ಮತ್ತೊಬ್ಬನ ಸಾವು

ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ‍್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…

6 hours ago

ರೈಲ್‌ಒನ್‌ ಆಪ್‌ : ಒಂದೇ ಕಡೆ ಸಿಗಲಿದೆ ರೈಲು ಸೌಲಭ್ಯಗಳು

ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್‌ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…

6 hours ago

ತಾರಿಖ್‌ ರೆಹಮಾನ್‌ ಬಾಂಗ್ಲಾದೇಶದ ನೂತನ ಪ್ರಧಾನಿ

ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್‌ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…

6 hours ago