ಮನರಂಜನೆ

ಕಾಮಿಡಿ ನಟ ಈಗ ವಿಲನ್‍; ಹೇಗಿದ್ದ ಹೇಗಾದ ಮಿತ್ರ!

ಪ್ರಜ್ವಲ್‍ ಅಭಿನಯದ ‘ಕರಾವಳಿ’ ಚಿತ್ರದಲ್ಲಿ ಮಿತ್ರ ಒಂದು ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ ಮತ್ತು ಇದುವರೆಗೂ ಮಾಡದ ಒಂದು ಪಾತ್ರದಲ್ಲಿ ಅವರು ನಟಿಸುತ್ತಿದ್ದಾರೆ ಎಂದು ಚಿತ್ರತಂಡದವರು ಆರಂಭದಿಂದ ಹೇಳುತ್ತಲೇ ಇದ್ದರು. ಆದರೆ, ಮಿತ್ರ ಪಾತ್ರವೇನು ಎಂಬುದನ್ನು ಬಹಿರಂಗ ಮಾಡಿರಲಿಲ್ಲ.

ಇದೀಗ ಮಿತ್ರ ಪಾತ್ರ ಬಹಿರಂಗವಾಗಿದ್ದು, ಅವರು ಈ ಚಿತ್ರದಲ್ಲಿ ವಿಲನ್‍ ಆಗಿ ನಟಿಸುತ್ತಿದ್ದಾರಂತೆ. ಈ ಚಿತ್ರದಲ್ಲಿ ಅವರು ಮಹಾಬಲ ಎಂಬ ವಿಲನ್ ಆಗಿ ಕಾಣಿಸಿಕೊಂಡಿದ್ದು, ಪಾತ್ರಕ್ಕಾಗಿ ತಮ್ಮ ಲುಕ್ ಸಹ ಬದಲಾಯಿಸಿಕೊಂಡಿದ್ದಾರೆ. ಅಷ್ಟೇ ಅಲ್ಲ, 60 ವಯಸ್ಸಿನ ವ್ಯಕ್ತಿಯ ಪಾತ್ರದಲ್ಲಿ ಅವರು ಕಾಣಿಸಿಕೊಂಡಿದ್ದು, ಅದಕ್ಕಾಗಿ ತೂಕವನ್ನೂ ಇಳಿಸಿದ್ದಾರೆ. ಈ ಚಿತ್ರಕ್ಕಾಗಿ ಮೊದಲ ಬಾರಿಗೆ ಅವರು ಗಡ್ಡ ಬಿಟ್ಟಿದ್ದಾರೆ.

ಕಲಾವಿದರಾದವರು ಒಂದೇ ಪಾತ್ರಕ್ಕೆ ಅಂಟಿಕೊಳ್ಳಬಾರದು ಮತ್ತು ವಯಸ್ಸಿಗೆ ತಕ್ಕಂತೆ ತಮ್ಮನ್ನು ತಾವು ಬದಲಾಯಿಸಿಕೊಳ್ಳಬೇಕು ಎಂಬುದು ಮಿತ್ರ ಅಭಿಪ್ರಾಯ. ಅದೇ ಕಾರಣಕ್ಕೆ ಕಾಮಿಡಿ ಪಾತ್ರಗಳಿಗೆ ಅವರು ಫುಲ್‍ಸ್ಟಾಪ್‍ ಹಾಕಿ, ಬೇರೆ ತರಹದ ಪಾತ್ರಗಳ ಹುಡುಕಾಟದಲ್ಲಿದ್ದಾರೆ. ಅದಕ್ಕೆ ಸರಿಯಾಗಿ, ‘ಕರಾವಳಿ’ ಚಿತ್ರದಲ್ಲೊಂದು ವಿಭಿನ್ನ ಪಾತ್ರ ಸಿಕ್ಕಿದೆ. ಮುಂದೆ ಸಹ ವಿಭಿನ್ನ ಪಾತ್ರಗಳ ಹುಡುಕಾಟದಲ್ಲಿ ಅವರಿದ್ದಾರೆ.

‘ಕರಾವಳಿ’ ನಂತರ ಮಿತ್ರ ಅವರನ್ನು ಹಲವರು ವಿಲನ್‍ ಪಾತ್ರಗಳಿಗಾಗಿ ಹುಡುಕಿಕೊಂಡು ಬರುತ್ತಿದ್ದಾರಂತೆ. ಇದೇ ಕಾರಣಕ್ಕೆ ಮಿತ್ರ ಹೊಸದಾಗಿ ಫೋಟೋಶೂಟ್‍ ಸಹ ಮಾಡಿಸಿದ್ದಾರೆ. ‘ಕರಾವಳಿ’ ಚಿತ್ರದ ಛಾಯಾಗ್ರಾಹಕ ಅಭಿಮನ್ಯು ಸದಾನಂದನ್‍, ಮಿತ್ರ ಅವರ ಹೊಸ ಫೋಟೋಶೂಟ್‍ ಮಾಡಿಕೊಟ್ಟಿದ್ದಾರೆ.

‘ಕರಾವಳಿ’ ಚಿತ್ರಕ್ಕೆ ಚಂದ್ರಶೇಖರ್‍ ಬಂಡಿಯಪ್ಪ ಕಥೆ-ಚಿತ್ರಕಥೆ ಬರೆದಿದ್ದು, ಗುರುದತ್ ಗಾಣಿಗ ನಿರ್ದೇಶನ ಮಾಡುತ್ತಿದ್ದಾರೆ. ಇದು ಪ್ರಾಣಿಗಳು ಮತ್ತು ಮನುಷ್ಯನ ನಡುವಿನ ಸಂಬಂಧದ ಕುರಿತಾದ ಚಿತ್ರ. ಚಿತ್ರದಲ್ಲಿ ಪ್ರಜ್ವಲ್‍ಗೆ ನಾಯಕಿಯಾಗಿ ಸಂಪದ ಹುಲಿವಾನ ನಟಿಸುತ್ತಿದ್ದು, ಮಿಕ್ಕಂತೆ ಮಿತ್ರ, ‘ಸಿದ್ಲಿಂಗು’ ಶ್ರೀಧರ್‍, ಗೋವಿಂದೇಗೌಡ, ವಿದ್ಯಾ ಮೂರ್ತಿ ಮುಂತಾದವರು ನಟಿಸುತ್ತಿದ್ದಾರೆ.

ಈಗಾಗಲೇ ಚಿತ್ರದ ಬಹುತೇಕ ಚಿತ್ರೀಕರಣ ಮುಗಿದಿದ್ದು, ಮುಂದಿನ ವರ್ಷ ಬಿಡುಗಡೆಯಾಗಲಿದೆ.

ಭೂಮಿಕಾ

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

9 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

10 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

11 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

14 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

15 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

15 hours ago