ಮನರಂಜನೆ

ಕಾಮಿಡಿ ನಟ ಈಗ ವಿಲನ್‍; ಹೇಗಿದ್ದ ಹೇಗಾದ ಮಿತ್ರ!

ಪ್ರಜ್ವಲ್‍ ಅಭಿನಯದ ‘ಕರಾವಳಿ’ ಚಿತ್ರದಲ್ಲಿ ಮಿತ್ರ ಒಂದು ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ ಮತ್ತು ಇದುವರೆಗೂ ಮಾಡದ ಒಂದು ಪಾತ್ರದಲ್ಲಿ ಅವರು ನಟಿಸುತ್ತಿದ್ದಾರೆ ಎಂದು ಚಿತ್ರತಂಡದವರು ಆರಂಭದಿಂದ ಹೇಳುತ್ತಲೇ ಇದ್ದರು. ಆದರೆ, ಮಿತ್ರ ಪಾತ್ರವೇನು ಎಂಬುದನ್ನು ಬಹಿರಂಗ ಮಾಡಿರಲಿಲ್ಲ.

ಇದೀಗ ಮಿತ್ರ ಪಾತ್ರ ಬಹಿರಂಗವಾಗಿದ್ದು, ಅವರು ಈ ಚಿತ್ರದಲ್ಲಿ ವಿಲನ್‍ ಆಗಿ ನಟಿಸುತ್ತಿದ್ದಾರಂತೆ. ಈ ಚಿತ್ರದಲ್ಲಿ ಅವರು ಮಹಾಬಲ ಎಂಬ ವಿಲನ್ ಆಗಿ ಕಾಣಿಸಿಕೊಂಡಿದ್ದು, ಪಾತ್ರಕ್ಕಾಗಿ ತಮ್ಮ ಲುಕ್ ಸಹ ಬದಲಾಯಿಸಿಕೊಂಡಿದ್ದಾರೆ. ಅಷ್ಟೇ ಅಲ್ಲ, 60 ವಯಸ್ಸಿನ ವ್ಯಕ್ತಿಯ ಪಾತ್ರದಲ್ಲಿ ಅವರು ಕಾಣಿಸಿಕೊಂಡಿದ್ದು, ಅದಕ್ಕಾಗಿ ತೂಕವನ್ನೂ ಇಳಿಸಿದ್ದಾರೆ. ಈ ಚಿತ್ರಕ್ಕಾಗಿ ಮೊದಲ ಬಾರಿಗೆ ಅವರು ಗಡ್ಡ ಬಿಟ್ಟಿದ್ದಾರೆ.

ಕಲಾವಿದರಾದವರು ಒಂದೇ ಪಾತ್ರಕ್ಕೆ ಅಂಟಿಕೊಳ್ಳಬಾರದು ಮತ್ತು ವಯಸ್ಸಿಗೆ ತಕ್ಕಂತೆ ತಮ್ಮನ್ನು ತಾವು ಬದಲಾಯಿಸಿಕೊಳ್ಳಬೇಕು ಎಂಬುದು ಮಿತ್ರ ಅಭಿಪ್ರಾಯ. ಅದೇ ಕಾರಣಕ್ಕೆ ಕಾಮಿಡಿ ಪಾತ್ರಗಳಿಗೆ ಅವರು ಫುಲ್‍ಸ್ಟಾಪ್‍ ಹಾಕಿ, ಬೇರೆ ತರಹದ ಪಾತ್ರಗಳ ಹುಡುಕಾಟದಲ್ಲಿದ್ದಾರೆ. ಅದಕ್ಕೆ ಸರಿಯಾಗಿ, ‘ಕರಾವಳಿ’ ಚಿತ್ರದಲ್ಲೊಂದು ವಿಭಿನ್ನ ಪಾತ್ರ ಸಿಕ್ಕಿದೆ. ಮುಂದೆ ಸಹ ವಿಭಿನ್ನ ಪಾತ್ರಗಳ ಹುಡುಕಾಟದಲ್ಲಿ ಅವರಿದ್ದಾರೆ.

‘ಕರಾವಳಿ’ ನಂತರ ಮಿತ್ರ ಅವರನ್ನು ಹಲವರು ವಿಲನ್‍ ಪಾತ್ರಗಳಿಗಾಗಿ ಹುಡುಕಿಕೊಂಡು ಬರುತ್ತಿದ್ದಾರಂತೆ. ಇದೇ ಕಾರಣಕ್ಕೆ ಮಿತ್ರ ಹೊಸದಾಗಿ ಫೋಟೋಶೂಟ್‍ ಸಹ ಮಾಡಿಸಿದ್ದಾರೆ. ‘ಕರಾವಳಿ’ ಚಿತ್ರದ ಛಾಯಾಗ್ರಾಹಕ ಅಭಿಮನ್ಯು ಸದಾನಂದನ್‍, ಮಿತ್ರ ಅವರ ಹೊಸ ಫೋಟೋಶೂಟ್‍ ಮಾಡಿಕೊಟ್ಟಿದ್ದಾರೆ.

‘ಕರಾವಳಿ’ ಚಿತ್ರಕ್ಕೆ ಚಂದ್ರಶೇಖರ್‍ ಬಂಡಿಯಪ್ಪ ಕಥೆ-ಚಿತ್ರಕಥೆ ಬರೆದಿದ್ದು, ಗುರುದತ್ ಗಾಣಿಗ ನಿರ್ದೇಶನ ಮಾಡುತ್ತಿದ್ದಾರೆ. ಇದು ಪ್ರಾಣಿಗಳು ಮತ್ತು ಮನುಷ್ಯನ ನಡುವಿನ ಸಂಬಂಧದ ಕುರಿತಾದ ಚಿತ್ರ. ಚಿತ್ರದಲ್ಲಿ ಪ್ರಜ್ವಲ್‍ಗೆ ನಾಯಕಿಯಾಗಿ ಸಂಪದ ಹುಲಿವಾನ ನಟಿಸುತ್ತಿದ್ದು, ಮಿಕ್ಕಂತೆ ಮಿತ್ರ, ‘ಸಿದ್ಲಿಂಗು’ ಶ್ರೀಧರ್‍, ಗೋವಿಂದೇಗೌಡ, ವಿದ್ಯಾ ಮೂರ್ತಿ ಮುಂತಾದವರು ನಟಿಸುತ್ತಿದ್ದಾರೆ.

ಈಗಾಗಲೇ ಚಿತ್ರದ ಬಹುತೇಕ ಚಿತ್ರೀಕರಣ ಮುಗಿದಿದ್ದು, ಮುಂದಿನ ವರ್ಷ ಬಿಡುಗಡೆಯಾಗಲಿದೆ.

ಭೂಮಿಕಾ

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

5 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

5 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

5 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

5 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

5 hours ago