ಮನರಂಜನೆ

‘ರಣಾಕ್ಷ’ನಾದ ಸೀರುಂಡೆ ರಘು; ಕಾಮಿಡಿಯಿಂದ ಗಂಭೀರ ಪಾತ್ರಕ್ಕೆ ಶಿಫ್ಟ್

ಜೀ ಕನ್ನಡದಲ್ಲಿ ಪ್ರಸಾರವಾಗುವ ‘ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಕಾರ್ಯಕ್ರಮದ ಮೂಲಕ ಜನಪ್ರಿಯರಾದ ಸೀರುಂಡೆ ರಘು, ಆ ನಂತರ ಸತ್ಯ ಧಾರಾವಾಹಿಯಲ್ಲಿ ನಾಯಕನಾಗಿ ಗೆಳೆಯನಾಗಿಯೂ ಕಾಣಿಸಿಕೊಂಡರು. ಚಿತ್ರರಂಗಕ್ಕೂ ಕಾಲಿಟ್ಟ ಅವರು, ‘ಮರೆಯದೆ ಕ್ಷಮಿಸು’ ಮುಂತಾದ ಚಿತ್ರಗಳಲ್ಲಿ ನಟಿಸಿದರು. ಇದೀಗ ಅವರು ಹೀರೋ ಆಗಿದ್ದಾರೆ.

ಹೌದು, ಸೀರುಂಡೆ ರಘು ಇದೀಗ ‘ರಣಾಕ್ಷ’ ಎಂಬ ಚಿತ್ರದಲ್ಲಿ ಹೀರೋ ಆಗಿ ಕಾಣಿಸಿಕೊಂಡಿದ್ದು, ಈ ಚಿತ್ರದು ಇದೀಗ ಬಿಡುಗಡೆಗೆ ಸಿದ್ಧವಾಗಿದೆ. ಇತ್ತೀಚೆಗೆ ಚಿತ್ರದ ಟ್ರೇಲರ್‍ ಬಿಡುಗಡೆಯಾಗಿದ್ದು, ಈ ತಿಂಗಳ ಕೊನೆಗೆ ಚಿತ್ರ ಸಹ ಬಿಡುಗಡೆಯಾಗುವ ಸಾಧ್ಯತೆ ಇದೆ.

ಕೆ.ವಿ.ಆರ್‍ ಪಿಕ್ಚರ್ಸ್ ಬ್ಯಾನರ್‍ ಅಡಿ ರಾಮು ಮತ್ತು ಶೋಭಾ ಶಿವಾಜಿ ರಾವ್‍ ನಿರ್ಮಿಸಿರುವ ಈ ಚಿತ್ರಕ್ಕೆ ರಾಘವ್‍ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಸೀರುಂಡೆ ರಘುಗೆ ನಾಯಕಿಯಾಗಿ ರಕ್ಷಾ ನಟಿಸಿದ್ದು, ಮಿಕ್ಕಂತೆ ಅಪೂರ್ವ, ಮುನಿ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

‘ರಣಾಕ್ಷ’ ಕುರಿತು ಮಾತನಾಡುವ ಸೀರುಂಡೆ ರಘು, ‘ಸುಮಾರು 20ಕ್ಕೂ ಹೆಚ್ಚು ಚಿತ್ರಗಳಲ್ಲಿ ಸಣ್ಣ ಪುಟ್ಟ ಪಾತ್ರಗಳಲ್ಲಿ ಅಭಿನಯಿಸಿ, ಮೊದಲಬಾರಿಗೆ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ನಾಲ್ಕು ಜನ ಸ್ನೇಹಿತರ ಜೊತೆ ಸಾಗುವ ಪಾತ್ರ ನನ್ನದು. ನನ್ನ ಪಾತ್ರ ಏನು ಎಂದು ಕೊನೆಯಲ್ಲಿ ಬಯಲಾಗುತ್ತದೆ’ ಎಂದರು.

ರಾಘವ್‍ ಇದಕ್ಕೂ ಮೊದಲು ‘ಮರೆಯದೆ ಕ್ಷಮಿಸು’ ಚಿತ್ರವನ್ನು ನಿರ್ದೇಶಿಸಿದ್ದರು. ಈ ಚಿತ್ರದಲ್ಲಿ ಸೀರುಂಡೆ ರವಿ ಸಹ ಒಂದು ಪಾತ್ರ ಮಾಡಿದ್ದರಂತೆ. ಆ ಚಿತ್ರದಲ್ಲಿನ ಅವರ ಅಭಿನಯ ನೋಡಿ, ತನ್ನ ಮುಂದಿನ ಚಿತ್ರಕ್ಕೆ ನೀನೇ ಹೀರೋ ಎಂದರಂತೆ ನಿರ್ದೇಶಕ ರಾಘವ್‍. ‘ಏನು ಕಾಮಿಡಿ ನಟನಿಗೆ ಕಾಮಿಡಿ ಮಾಡ್ತಿದ್ದೀರಾ?’ ಎಂದರಂತೆ. ಅದಕ್ಕೆ ರಘುವನ್ನು ‘ರಣಾಕ್ಷ’ ಚಿತ್ರದಲ್ಲಿ ಹೀರೋ ಮಾಡುವ ಮೂಲಕ ತಮ್ಮ ಮಾತು ನಿಜ ಮಾಡಿ ತೋರಿಸಿದ್ದಾರೆ ರಾಘವ್‍.

ಈ ಚಿತ್ರದ ಕುರಿತು ಮಾತನಾಡಿದ ರಾಘವ್‍, ‘‘ರಣಾಕ್ಷ’ ಎಂದರೆ ಹದ್ದಿನಂತೆ ಕಣ್ಣಿಟ್ಟು ಕಾಯುವವನು ಎಂದರ್ಥ. ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಚಿತ್ರ. ದೇವರು, ದೆವ್ವ ಎರಡರ ನಡುವಿನ ಸಂಘರ್ಷವೇ ಚಿತ್ರದ ಕಥೆ. ಯಾವುದೇ ಮಂತ್ರ , ತಂತ್ರ , ಶಕ್ತಿ ಏನೇ ಸಮಸ್ಯೆ ಎದುರಾದರೂ ಅದನ್ನು ಎದುರಿಸುವುದಕ್ಕೆ ಮನುಷ್ಯನೇ ಬರಬೇಕು. ಅದು ಹೇಗೆ ಎಂಬುದನ್ನು ಚಿತ್ರದಲ್ಲಿ ಹೇಳಿದ್ದೇವೆ’ ಎಂದರು.

‘ರಣಾಕ್ಷ’ ಚಿತ್ರಕ್ಕೆ ವಿಶಾಲ್ ಆಲಾಪ್ ಸಂಗೀತ ಸಂಯೋಜಿಸಿದ್ದು, ಸಕಲೇಶಪುರ, ಹೊನ್ನಾವರ, ಮೂಡಬಿದ್ರೆ, ಕಾರ್ಕಳ ಮುಂತಾದ ಕಡೆ ಚಿತ್ರಕ್ಕೆ ಚಿತ್ರೀಕರಣ ನಡೆಸಲಾಗಿದೆ.

ಭೂಮಿಕಾ

Recent Posts

ಪ್ರಮುಖ ತಂತ್ರಜ್ಞಾನ ಸ್ಟಾರ್ಟ್ ಅಪ್‌ಗಳ ಹೋರಾಟ

ವಿಶ್ವಪ್ರಸಾದ್ ಆಳ್ವ ಒಂದೆರಡು ವರ್ಷಗಳ ಹಿಂದೆ ದೇಶದ ಹಣಕಾಸು ಸಚಿವರು ಮೂಲ ತಂತ್ರಜ್ಞಾನ ಹಾಗೂ ಸಂಶೋಧನೆ ಮತ್ತು ಅಭಿವೃದ್ಧಿ (ಆರ್…

4 mins ago

ಇರಾನ್ ಸಂಘರ್ಷದ ಪೂರ್ವಾಪರ

ಪ್ರೊ.ಪ್ರೇಮ ಶೇಖರ ಒಂದೂವರೆ ತಿಂಗಳಿನಿಂದ ಜಗತ್ತು ಆತಂಕದಿಂದ ಎದುರು ನೋಡುತ್ತಿದ್ದಂತಹ ಯುದ್ಧ ಪಶ್ಚಿಮ ಏಷ್ಯಾದಲ್ಲಿ ಪ್ರಾರಂಭವಾಗಿದೆ. ಜನವರಿ ಮೊದಲ ಭಾಗದಲ್ಲಿ…

8 mins ago

ಅಕ್ರಮ ರೆಸಾರ್ಟ್, ರೆಸ್ಟೋರೆಂಟ್ ಪರಿಶೀಲನೆಗೆ ಸಮಿತಿ ರಚನೆ

ಮಹೇಂದ್ರ ಹಸಗೂಲಿ ಪಾರದರ್ಶಕ ವರದಿ ನೀಡಿ ಅಕ್ರಮ ಕಟ್ಟಡಗಳನ್ನು ತೆರವು ಮಾಡುವಂತೆ ರೈತರು, ಪರಿಸರವಾದಿಗಳ ಒತ್ತಾಯ ಗುಂಡ್ಲುಪೇಟೆ: ಬಂಡೀಪುರ ವ್ಯಾಪ್ತಿಯ…

14 mins ago

ಕನ್ನಡಿಗರ ರಕ್ಷಣೆಗೆ ಕ್ರಮ ಕೈಗೊಳ್ಳಿ: ಪ್ರಧಾನಿ ಮೋದಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಇರಾನ್‌-ಇಸ್ರೇಲ್‌ ನಡುವಿನ ಸಂಘರ್ಷ ಏರ್ಪಟ್ಟಿರುವ ಪರಿಣಾಮ ಕನ್ನಡಿಗರ ರಕ್ಷಣೆಗೆ ತುರ್ತು ಕ್ರಮ ಕೈಗೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ…

13 hours ago

ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ವಿಫಲ: ಸಂಸದ ಯದುವೀರ್‌ ಒಡೆಯರ್‌

ನಾಪೋಕ್ಲು: ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ವಾಗ್ದಾಳಿ…

14 hours ago

ಹನೂರು: ಶಾಲೆಗೆ ನೂತನ ಕಟ್ಟಡ ನಿರ್ಮಿಸುವಂತೆ ಆಗ್ರಹ: ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಶಿಕ್ಷಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊಳಸಿಕೆರೆ ಗ್ರಾಮದ…

14 hours ago