ಮನರಂಜನೆ

‘ರಣಾಕ್ಷ’ನಾದ ಸೀರುಂಡೆ ರಘು; ಕಾಮಿಡಿಯಿಂದ ಗಂಭೀರ ಪಾತ್ರಕ್ಕೆ ಶಿಫ್ಟ್

ಜೀ ಕನ್ನಡದಲ್ಲಿ ಪ್ರಸಾರವಾಗುವ ‘ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಕಾರ್ಯಕ್ರಮದ ಮೂಲಕ ಜನಪ್ರಿಯರಾದ ಸೀರುಂಡೆ ರಘು, ಆ ನಂತರ ಸತ್ಯ ಧಾರಾವಾಹಿಯಲ್ಲಿ ನಾಯಕನಾಗಿ ಗೆಳೆಯನಾಗಿಯೂ ಕಾಣಿಸಿಕೊಂಡರು. ಚಿತ್ರರಂಗಕ್ಕೂ ಕಾಲಿಟ್ಟ ಅವರು, ‘ಮರೆಯದೆ ಕ್ಷಮಿಸು’ ಮುಂತಾದ ಚಿತ್ರಗಳಲ್ಲಿ ನಟಿಸಿದರು. ಇದೀಗ ಅವರು ಹೀರೋ ಆಗಿದ್ದಾರೆ.

ಹೌದು, ಸೀರುಂಡೆ ರಘು ಇದೀಗ ‘ರಣಾಕ್ಷ’ ಎಂಬ ಚಿತ್ರದಲ್ಲಿ ಹೀರೋ ಆಗಿ ಕಾಣಿಸಿಕೊಂಡಿದ್ದು, ಈ ಚಿತ್ರದು ಇದೀಗ ಬಿಡುಗಡೆಗೆ ಸಿದ್ಧವಾಗಿದೆ. ಇತ್ತೀಚೆಗೆ ಚಿತ್ರದ ಟ್ರೇಲರ್‍ ಬಿಡುಗಡೆಯಾಗಿದ್ದು, ಈ ತಿಂಗಳ ಕೊನೆಗೆ ಚಿತ್ರ ಸಹ ಬಿಡುಗಡೆಯಾಗುವ ಸಾಧ್ಯತೆ ಇದೆ.

ಕೆ.ವಿ.ಆರ್‍ ಪಿಕ್ಚರ್ಸ್ ಬ್ಯಾನರ್‍ ಅಡಿ ರಾಮು ಮತ್ತು ಶೋಭಾ ಶಿವಾಜಿ ರಾವ್‍ ನಿರ್ಮಿಸಿರುವ ಈ ಚಿತ್ರಕ್ಕೆ ರಾಘವ್‍ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಸೀರುಂಡೆ ರಘುಗೆ ನಾಯಕಿಯಾಗಿ ರಕ್ಷಾ ನಟಿಸಿದ್ದು, ಮಿಕ್ಕಂತೆ ಅಪೂರ್ವ, ಮುನಿ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

‘ರಣಾಕ್ಷ’ ಕುರಿತು ಮಾತನಾಡುವ ಸೀರುಂಡೆ ರಘು, ‘ಸುಮಾರು 20ಕ್ಕೂ ಹೆಚ್ಚು ಚಿತ್ರಗಳಲ್ಲಿ ಸಣ್ಣ ಪುಟ್ಟ ಪಾತ್ರಗಳಲ್ಲಿ ಅಭಿನಯಿಸಿ, ಮೊದಲಬಾರಿಗೆ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ನಾಲ್ಕು ಜನ ಸ್ನೇಹಿತರ ಜೊತೆ ಸಾಗುವ ಪಾತ್ರ ನನ್ನದು. ನನ್ನ ಪಾತ್ರ ಏನು ಎಂದು ಕೊನೆಯಲ್ಲಿ ಬಯಲಾಗುತ್ತದೆ’ ಎಂದರು.

ರಾಘವ್‍ ಇದಕ್ಕೂ ಮೊದಲು ‘ಮರೆಯದೆ ಕ್ಷಮಿಸು’ ಚಿತ್ರವನ್ನು ನಿರ್ದೇಶಿಸಿದ್ದರು. ಈ ಚಿತ್ರದಲ್ಲಿ ಸೀರುಂಡೆ ರವಿ ಸಹ ಒಂದು ಪಾತ್ರ ಮಾಡಿದ್ದರಂತೆ. ಆ ಚಿತ್ರದಲ್ಲಿನ ಅವರ ಅಭಿನಯ ನೋಡಿ, ತನ್ನ ಮುಂದಿನ ಚಿತ್ರಕ್ಕೆ ನೀನೇ ಹೀರೋ ಎಂದರಂತೆ ನಿರ್ದೇಶಕ ರಾಘವ್‍. ‘ಏನು ಕಾಮಿಡಿ ನಟನಿಗೆ ಕಾಮಿಡಿ ಮಾಡ್ತಿದ್ದೀರಾ?’ ಎಂದರಂತೆ. ಅದಕ್ಕೆ ರಘುವನ್ನು ‘ರಣಾಕ್ಷ’ ಚಿತ್ರದಲ್ಲಿ ಹೀರೋ ಮಾಡುವ ಮೂಲಕ ತಮ್ಮ ಮಾತು ನಿಜ ಮಾಡಿ ತೋರಿಸಿದ್ದಾರೆ ರಾಘವ್‍.

ಈ ಚಿತ್ರದ ಕುರಿತು ಮಾತನಾಡಿದ ರಾಘವ್‍, ‘‘ರಣಾಕ್ಷ’ ಎಂದರೆ ಹದ್ದಿನಂತೆ ಕಣ್ಣಿಟ್ಟು ಕಾಯುವವನು ಎಂದರ್ಥ. ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಚಿತ್ರ. ದೇವರು, ದೆವ್ವ ಎರಡರ ನಡುವಿನ ಸಂಘರ್ಷವೇ ಚಿತ್ರದ ಕಥೆ. ಯಾವುದೇ ಮಂತ್ರ , ತಂತ್ರ , ಶಕ್ತಿ ಏನೇ ಸಮಸ್ಯೆ ಎದುರಾದರೂ ಅದನ್ನು ಎದುರಿಸುವುದಕ್ಕೆ ಮನುಷ್ಯನೇ ಬರಬೇಕು. ಅದು ಹೇಗೆ ಎಂಬುದನ್ನು ಚಿತ್ರದಲ್ಲಿ ಹೇಳಿದ್ದೇವೆ’ ಎಂದರು.

‘ರಣಾಕ್ಷ’ ಚಿತ್ರಕ್ಕೆ ವಿಶಾಲ್ ಆಲಾಪ್ ಸಂಗೀತ ಸಂಯೋಜಿಸಿದ್ದು, ಸಕಲೇಶಪುರ, ಹೊನ್ನಾವರ, ಮೂಡಬಿದ್ರೆ, ಕಾರ್ಕಳ ಮುಂತಾದ ಕಡೆ ಚಿತ್ರಕ್ಕೆ ಚಿತ್ರೀಕರಣ ನಡೆಸಲಾಗಿದೆ.

ಭೂಮಿಕಾ

Recent Posts

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

44 mins ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

2 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

3 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

3 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

3 hours ago

ವಿಕಸಿತ ಭಾರತಕ್ಕೆ ಕೈಜೋಡಿಸಿ : ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ

ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…

5 hours ago