ಮನರಂಜನೆ

ದೇಶದೆಲ್ಲೆಡೆ ಸಂಚರಿಸುವುದಕ್ಕೆ ದರ್ಶನ್‌ಗೆ ಕೋರ್ಟ್‌ ಅನುಮತಿ

ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ದರ್ಶನ್‌ಗೆ ಷರತ್ತು ಬದ್ದ ಜಾಮೀನು ನಿಯಮವನ್ನು ಸಡಿಲಿಸಿ ಹೈಕೋರ್ಟ್‌ ಆದೇಶಿಸಿದೆ.

ಹೈಕೋರ್ಟ್‌ನ ಈ ಆದೇಶದಿಂದ ದರ್ಶನ್‌ಗೆ ಮತ್ತೊಮ್ಮೆ ರಿಲೀಫ್‌ ಸಿಕ್ಕಂತಾಗಿದೆ. ಹಿಂದೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್‌ ಗೆ ಷರತ್ತು ಬದ್ದ ಜಾಮೀನು ನೀಡಲಾಗಿತ್ತು.

ಈ ಮೊದಲು ಸೆಷನ್ಸ್‌ ಕೋರ್ಟ್‌ ವ್ಯಾಪ್ತಿ ಬಿಟ್ಟು ತೆರಳುವಂತಿರಲಿಲ್ಲ ಎಂಬ ಷರತ್ತನ್ನು ಕೋರ್ಟ್‌ ವಿಧಿಸಿತ್ತು. ಇದರಿಂದ ದರ್ಶನ್‌ ಎಲ್ಲೆ ತೆರಳಬೇಕಾದರೂ ಕೋರ್ಟ್‌ ಅನುಮತಿ ಪಡೆದು ತೆರಳಬೇಕಿತ್ತು. ಹೀಗಾಗಿ, ಷರತ್ತು ಸಡಿಲಿಕೆ ಕೋರಿ ಹೈಕೋರ್ಟ್‌ಗೆ ದರ್ಶನ್‌ ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಕೋರ್ಟ್‌ ಸಮ್ಮತಿ ನೀಡಿದೆ.

ದರ್ಶನ್‌ ಅವರ ಅರ್ಜಿ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದ ಎಸ್‌ಪಿಪಿ ಪ್ರಸನ್ನಕುಮಾರ್‌, ಜಾಮೀನು ಪಡೆಯುವಾಗ ಅನಾರೋಗ್ಯದ ಕಾರಣ ನೀಡಿದ್ದರು. ಈಗ ದೇಶದೆಲ್ಲೆಡೆ ಸುತ್ತಾಡಲು ಬಯಸುತ್ತಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದರು.

ಈಗ ಕೋರ್ಟ್‌ ದರ್ಶನ್‌ ಅವರ ಷರತ್ತು ಬದ್ಧ ಜಾಮೀನನ್ನು ಸಡಿಲಿಸಿದ್ದು, ಕೋರ್ಟ್‌ ಅನುಮತಿಯಿಲ್ಲದೇ ದೇಶಬಿಟ್ಟು ತೆರಳುವಂತಿಲ್ಲ ಎಂದು ಹೇಳಿದೆ.

ಆಂದೋಲನ ಡೆಸ್ಕ್

Recent Posts

ಮರ್ಯಾದೆಗೇಡು ಹತ್ಯೆ ವಿರೋಧಿಸಿ ಸಹಿ ಸಂಗ್ರಹ

ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…

2 hours ago

ಕೆ.ಆರ್.ಆಸ್ಪತ್ರೆ ಶೆಡ್ ನಲ್ಲಿ ಬೆಂಕಿ : ಹಾಸಿಗೆಗಳು ಬೆಂಕಿಗಾಹುತಿ

ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…

3 hours ago

ಹೊಸ ವರ್ಷಾಚರಣೆಗೆ ಮುನ್ನೆಚ್ಚರಿಕೆ : ಸೂಕ್ಷ ಪ್ರದೇಶಗಳ ಬಗ್ಗೆ ಸಮೀಕ್ಷೆ ವರದಿಗೆ ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…

3 hours ago

ಸಿಲಿಂಡರ್‌ ಸ್ಪೋಟ ಪ್ರಕರಣ : ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮಂಜುಳ ಸಾವು

ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…

4 hours ago

ಇತಿಹಾಸ ಸೃಷ್ಟಿಸಿದ ಬಿಜೆಪಿ : ತಿರುವನಂತಪುರಂನ ಮೇಯರ್ ಆಗಿ ವಿ.ವಿ.ರಾಜೇಶ್ ಆಯ್ಕೆ

ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…

4 hours ago

ಅಧಿಕಾರ ಶಾಶ್ವತವಲ್ಲ : ‘ನನ್ನ ತಂದೆಯ ಇಚ್ಛೆಯಂತೆಯೇ ನಡೆಯುವೆ’ ; ಯತೀಂದ್ರ

ಚಿಕ್ಕೋಡಿ : ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಯಾವುದೇ…

4 hours ago