ಮನರಂಜನೆ

ದೇಶದೆಲ್ಲೆಡೆ ಸಂಚರಿಸುವುದಕ್ಕೆ ದರ್ಶನ್‌ಗೆ ಕೋರ್ಟ್‌ ಅನುಮತಿ

ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ದರ್ಶನ್‌ಗೆ ಷರತ್ತು ಬದ್ದ ಜಾಮೀನು ನಿಯಮವನ್ನು ಸಡಿಲಿಸಿ ಹೈಕೋರ್ಟ್‌ ಆದೇಶಿಸಿದೆ.

ಹೈಕೋರ್ಟ್‌ನ ಈ ಆದೇಶದಿಂದ ದರ್ಶನ್‌ಗೆ ಮತ್ತೊಮ್ಮೆ ರಿಲೀಫ್‌ ಸಿಕ್ಕಂತಾಗಿದೆ. ಹಿಂದೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್‌ ಗೆ ಷರತ್ತು ಬದ್ದ ಜಾಮೀನು ನೀಡಲಾಗಿತ್ತು.

ಈ ಮೊದಲು ಸೆಷನ್ಸ್‌ ಕೋರ್ಟ್‌ ವ್ಯಾಪ್ತಿ ಬಿಟ್ಟು ತೆರಳುವಂತಿರಲಿಲ್ಲ ಎಂಬ ಷರತ್ತನ್ನು ಕೋರ್ಟ್‌ ವಿಧಿಸಿತ್ತು. ಇದರಿಂದ ದರ್ಶನ್‌ ಎಲ್ಲೆ ತೆರಳಬೇಕಾದರೂ ಕೋರ್ಟ್‌ ಅನುಮತಿ ಪಡೆದು ತೆರಳಬೇಕಿತ್ತು. ಹೀಗಾಗಿ, ಷರತ್ತು ಸಡಿಲಿಕೆ ಕೋರಿ ಹೈಕೋರ್ಟ್‌ಗೆ ದರ್ಶನ್‌ ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಕೋರ್ಟ್‌ ಸಮ್ಮತಿ ನೀಡಿದೆ.

ದರ್ಶನ್‌ ಅವರ ಅರ್ಜಿ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದ ಎಸ್‌ಪಿಪಿ ಪ್ರಸನ್ನಕುಮಾರ್‌, ಜಾಮೀನು ಪಡೆಯುವಾಗ ಅನಾರೋಗ್ಯದ ಕಾರಣ ನೀಡಿದ್ದರು. ಈಗ ದೇಶದೆಲ್ಲೆಡೆ ಸುತ್ತಾಡಲು ಬಯಸುತ್ತಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದರು.

ಈಗ ಕೋರ್ಟ್‌ ದರ್ಶನ್‌ ಅವರ ಷರತ್ತು ಬದ್ಧ ಜಾಮೀನನ್ನು ಸಡಿಲಿಸಿದ್ದು, ಕೋರ್ಟ್‌ ಅನುಮತಿಯಿಲ್ಲದೇ ದೇಶಬಿಟ್ಟು ತೆರಳುವಂತಿಲ್ಲ ಎಂದು ಹೇಳಿದೆ.

ಆಂದೋಲನ ಡೆಸ್ಕ್

Recent Posts

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

4 hours ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

4 hours ago

ಕೊಡಗಿನ ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಭದ್ರತೆ

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…

4 hours ago

ಮುಚ್ಚುವ ಆತಂಕದಲ್ಲಿ ಶತಮಾನ ಕಂಡ ಶಾಲೆ

ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…

4 hours ago

ಸರ್ಕಾರಿ ಕಚೇರಿ; ಮೂಲ ಸೌಕರ್ಯಗಳಿಗೆ ಗೋರಿ!

ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…

4 hours ago